ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿ ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದೆ. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು.
ನಿಯೋಗವು ದೆಹಲಿಯಲ್ಲಿ ಕೆಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರನ್ನು ಭೇಟಿ ಮಾಡಿತು. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು. ಕೇಂದ್ರ ಸರ್ಕಾರವು 2017 ರಲ್ಲಿ ಕನಿಷ್ಟ ಬೆಲೆಯನ್ನು ಕೆ.ಜಿಗೆ 251 ರೂಪಾಯಿಗೆ ನಿಗದಿಪಡಿಸಿತ್ತು.
ನಿಯೋಗದಲ್ಲಿ ಕ್ಯಾಂಪ್ಕೊಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಹಾಗೂ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ .ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ತುಮ್ಕೋಸ್ ಅಧ್ಯಕ್ಷರಾದ ಆರ್. ಎಮ್. ರವಿ, ಕ್ಯಾಂಪ್ಕೋ ನಿರ್ದೇಶಕರು ಮತ್ತು ರಾಜ್ಯ ಸಹಕಾರ ಭಾರತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ , ಟಿಎಸ್ಎಸ್ ನಿರ್ದೇಶಕರಾದ ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ನಿಯೋಗದಲ್ಲಿ ಭಾಗವಹಿಸಿದ್ದರು.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…