ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಗಳ ಪ್ರಮುಖರನ್ನೊಳಗೊಂಡ ನಿಯೋಗ ದೆಹಲಿಗೆ ತೆರಳಿ ಅಡಿಕೆಯ ಕನಿಷ್ಟ ಆಮದು ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದೆ. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು.
ನಿಯೋಗವು ದೆಹಲಿಯಲ್ಲಿ ಕೆಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರನ್ನು ಭೇಟಿ ಮಾಡಿತು. ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು ಕೆ.ಜಿಗೆ 360 ರೂಪಾಯಿಗೆ ನಿಗದಿಪಡಿಸುವಂತೆ ನಿಯೋಗವು ಸಚಿವರಿಗೆ ಮನವಿಯನ್ನು ಸಲ್ಲಿಸಿತು. ಕೇಂದ್ರ ಸರ್ಕಾರವು 2017 ರಲ್ಲಿ ಕನಿಷ್ಟ ಬೆಲೆಯನ್ನು ಕೆ.ಜಿಗೆ 251 ರೂಪಾಯಿಗೆ ನಿಗದಿಪಡಿಸಿತ್ತು.
ನಿಯೋಗದಲ್ಲಿ ಕ್ಯಾಂಪ್ಕೊಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಹಾಗೂ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಎಚ್ .ಎಂ .ಕೃಷ್ಣಕುಮಾರ್, ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ತುಮ್ಕೋಸ್ ಅಧ್ಯಕ್ಷರಾದ ಆರ್. ಎಮ್. ರವಿ, ಕ್ಯಾಂಪ್ಕೋ ನಿರ್ದೇಶಕರು ಮತ್ತು ರಾಜ್ಯ ಸಹಕಾರ ಭಾರತಿಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ , ಟಿಎಸ್ಎಸ್ ನಿರ್ದೇಶಕರಾದ ಶಶಾಂಕ್ಎ ಸ್. ಹೆಗಡೆ ಹಾಗೂ ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಅವರು ನಿಯೋಗದಲ್ಲಿ ಭಾಗವಹಿಸಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…