ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುತ್ತಿಲ್ಲ. ಕಾರಣಗಳು ಹಲವು. ಈ ನಡುವೆಯೇ ಬರ್ಮಾ ಅಡಿಕೆಯು ನಿರಂತರವಾಗಿ ಕಳ್ಳ ಸಾಗಾಣಿಕೆ ಮೂಲಕ ಆಗಮನವಾಗುತ್ತಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ಅಡಿಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ವಾರ 100 ಕ್ಕೂ ಹೆಚ್ಚು ಅಡಿಕೆ ಚೀಲ ವಶಕ್ಕೆ ತೆಗೆದುಕೊಂಡರೆ , ಅದಾದ ಬಳಿಕ ಮತ್ತೆ 22 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯು ಮಿಜೋರಾಂ ರಾಜ್ಯದ ಕಳವಳಕ್ಕೆ ಕಾರಣವಾಗಿದೆ. ‘ಈಶಾನ್ಯದ ಸೆಂಟಿನೆಲ್ಸ್’ ಎಂದು ಸರಿಯಾಗಿ ನಾಮಕರಣಗೊಂಡಿರುವ ಅಸ್ಸಾಂ ರೈಫಲ್ಸ್ ಮಿಜೋರಾಂನಲ್ಲಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆಗಳನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಿದೆ.ಈಚೆಗೆ ಸುಮಾರು 22.4 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಅದಕ್ಕೂ ಮೊದಲು ಅಸ್ಸಾಂನ ಗೌರಿಪುರದಲ್ಲಿ 101 ಗೋಣಿ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಗೌರಿಪುರ ಪ್ರದೇಶದ ಕಾಲಿಬರಿ ಎಂಬಲ್ಲಿ ಪೊಲೀಸರು ಅಪಾರ ಪ್ರಮಾಣದ ಅಡಿಕೆಯೊಂದಿಗೆ ಮೂವರನ್ನು ಬಂಧಿಸಿದ್ದಾರೆ. ಬರ್ಪೇಟಾದಿಂದ ಪಶ್ಚಿಮ ಬಂಗಾಳಕ್ಕೆ ಬರ್ಮಾದ ಅಡಿಕೆ ಸಾಗಣೆ ಮಾಡಲಾಗುತ್ತಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿತ್ತು.
ಇದಕ್ಕೂ ಮೊದಲು ಫೆಬ್ರವರಿ 25 ರಂದು ಅಸ್ಸಾಂ ಪೊಲೀಸರು ಅಸ್ಸಾಂನ ಹೈಲ್ಕಂಡಿ ಜಿಲ್ಲೆಯ ಬಿಲೈಪುರ್ ಗ್ರಾಮದಲ್ಲಿ 104 ಚೀಲ ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.
ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಅಕ್ರಮವಾಗಿ ಭಾರತದೊಳಕ್ಕೆ ಆಗಮನವಾಗುತ್ತಿದೆ. ಇದರಿಂದ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490