Advertisement
MIRROR FOCUS

ಅಡಿಕೆ ಮಾರುಕಟ್ಟೆ ಮತ್ತೆ ಹಿನ್ನಡೆ | ನಿರಂತರವಾಗಿ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ | 100 ಕ್ಕೂ ಹೆಚ್ಚು ಅಡಿಕೆ ಚೀಲ ವಶಕ್ಕೆ |

Share

ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುತ್ತಿಲ್ಲ. ಕಾರಣಗಳು ಹಲವು. ಈ ನಡುವೆಯೇ ಬರ್ಮಾ ಅಡಿಕೆಯು ನಿರಂತರವಾಗಿ ಕಳ್ಳ ಸಾಗಾಣಿಕೆ ಮೂಲಕ ಆಗಮನವಾಗುತ್ತಿದೆ. ಕಳೆದ ಒಂದು ವಾರದಲ್ಲಿ  ಎರಡು ಬಾರಿ ಅಡಿಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ವಾರ 100 ಕ್ಕೂ ಹೆಚ್ಚು ಅಡಿಕೆ ಚೀಲ ವಶಕ್ಕೆ ತೆಗೆದುಕೊಂಡರೆ , ಅದಾದ ಬಳಿಕ ಮತ್ತೆ 22 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯು ಮಿಜೋರಾಂ ರಾಜ್ಯದ ಕಳವಳಕ್ಕೆ  ಕಾರಣವಾಗಿದೆ. ‘ಈಶಾನ್ಯದ ಸೆಂಟಿನೆಲ್ಸ್’ ಎಂದು ಸರಿಯಾಗಿ ನಾಮಕರಣಗೊಂಡಿರುವ ಅಸ್ಸಾಂ ರೈಫಲ್ಸ್ ಮಿಜೋರಾಂನಲ್ಲಿ ಕಳ್ಳಸಾಗಣೆ  ವಿರುದ್ಧ ಕಾರ್ಯಾಚರಣೆಗಳನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಿದೆ.ಈಚೆಗೆ ಸುಮಾರು 22.4 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.

ಅದಕ್ಕೂ ಮೊದಲು ಅಸ್ಸಾಂನ ಗೌರಿಪುರದಲ್ಲಿ 101 ಗೋಣಿ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಗೌರಿಪುರ ಪ್ರದೇಶದ ಕಾಲಿಬರಿ ಎಂಬಲ್ಲಿ ಪೊಲೀಸರು ಅಪಾರ ಪ್ರಮಾಣದ ಅಡಿಕೆಯೊಂದಿಗೆ ಮೂವರನ್ನು ಬಂಧಿಸಿದ್ದಾರೆ. ಬರ್ಪೇಟಾದಿಂದ ಪಶ್ಚಿಮ ಬಂಗಾಳಕ್ಕೆ ಬರ್ಮಾದ ಅಡಿಕೆ ಸಾಗಣೆ ಮಾಡಲಾಗುತ್ತಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿತ್ತು.

ಇದಕ್ಕೂ ಮೊದಲು ಫೆಬ್ರವರಿ 25 ರಂದು ಅಸ್ಸಾಂ ಪೊಲೀಸರು ಅಸ್ಸಾಂನ ಹೈಲ್ಕಂಡಿ ಜಿಲ್ಲೆಯ ಬಿಲೈಪುರ್ ಗ್ರಾಮದಲ್ಲಿ 104 ಚೀಲ ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಅಕ್ರಮವಾಗಿ ಭಾರತದೊಳಕ್ಕೆ ಆಗಮನವಾಗುತ್ತಿದೆ. ಇದರಿಂದ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

6 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

7 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

7 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

7 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

22 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

23 hours ago