ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುತ್ತಿಲ್ಲ. ಕಾರಣಗಳು ಹಲವು. ಈ ನಡುವೆಯೇ ಬರ್ಮಾ ಅಡಿಕೆಯು ನಿರಂತರವಾಗಿ ಕಳ್ಳ ಸಾಗಾಣಿಕೆ ಮೂಲಕ ಆಗಮನವಾಗುತ್ತಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ಅಡಿಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ವಾರ 100 ಕ್ಕೂ ಹೆಚ್ಚು ಅಡಿಕೆ ಚೀಲ ವಶಕ್ಕೆ ತೆಗೆದುಕೊಂಡರೆ , ಅದಾದ ಬಳಿಕ ಮತ್ತೆ 22 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.
ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯು ಮಿಜೋರಾಂ ರಾಜ್ಯದ ಕಳವಳಕ್ಕೆ ಕಾರಣವಾಗಿದೆ. ‘ಈಶಾನ್ಯದ ಸೆಂಟಿನೆಲ್ಸ್’ ಎಂದು ಸರಿಯಾಗಿ ನಾಮಕರಣಗೊಂಡಿರುವ ಅಸ್ಸಾಂ ರೈಫಲ್ಸ್ ಮಿಜೋರಾಂನಲ್ಲಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆಗಳನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಿದೆ.ಈಚೆಗೆ ಸುಮಾರು 22.4 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಅದಕ್ಕೂ ಮೊದಲು ಅಸ್ಸಾಂನ ಗೌರಿಪುರದಲ್ಲಿ 101 ಗೋಣಿ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಗೌರಿಪುರ ಪ್ರದೇಶದ ಕಾಲಿಬರಿ ಎಂಬಲ್ಲಿ ಪೊಲೀಸರು ಅಪಾರ ಪ್ರಮಾಣದ ಅಡಿಕೆಯೊಂದಿಗೆ ಮೂವರನ್ನು ಬಂಧಿಸಿದ್ದಾರೆ. ಬರ್ಪೇಟಾದಿಂದ ಪಶ್ಚಿಮ ಬಂಗಾಳಕ್ಕೆ ಬರ್ಮಾದ ಅಡಿಕೆ ಸಾಗಣೆ ಮಾಡಲಾಗುತ್ತಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿತ್ತು.
ಇದಕ್ಕೂ ಮೊದಲು ಫೆಬ್ರವರಿ 25 ರಂದು ಅಸ್ಸಾಂ ಪೊಲೀಸರು ಅಸ್ಸಾಂನ ಹೈಲ್ಕಂಡಿ ಜಿಲ್ಲೆಯ ಬಿಲೈಪುರ್ ಗ್ರಾಮದಲ್ಲಿ 104 ಚೀಲ ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.
ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಅಕ್ರಮವಾಗಿ ಭಾರತದೊಳಕ್ಕೆ ಆಗಮನವಾಗುತ್ತಿದೆ. ಇದರಿಂದ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…