Advertisement
ಸುದ್ದಿಗಳು

ಅಡಿಕೆಯ ಪರ್ಯಾಯ ಬಳಕೆ | ಅಡಿಕೆ ಕೇವಲ ಜಗಿಯಲು ಮಾತ್ರವಲ್ಲ.. | ಆಹಾರದಲ್ಲೂ ಅಡಿಕೆ ಬಳಕೆಗೆ ಆದ್ಯತೆ |

Share

ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಚಿಂತನೆಗಳು ನಡೆಯುತ್ತಿದೆ. ಒಂದು ಕಡೆ ಅಡಿಕೆ ಹಾನಿಕಾರಕ ಎಂಬ ಗುಮ್ಮ ಆಗಾಗ ಕಾಡುತ್ತದೆ. ಇನ್ನೊಂದು ಕಡೆ ಅಡಿಕೆ ಮಾರುಕಟ್ಟೆಯ ಮೇಲೂ ವ್ಯತ್ಯಾಸ ಕಂಡುಬರುತ್ತದೆ. ಈ ಎಲ್ಲದರ ನಡುವೆ ಅಡಿಕೆ ಬೆಳೆ ವಿಸ್ತರಣೆಯೂ ಆಗುತ್ತಿದೆ. ವಿಸ್ತರಣೆಯ ವೇಗದಲ್ಲಿ ಅಡಿಕೆ ಬಳಕೆಯಾಗುತ್ತಿಲ್ಲ. ಅಡಿಕೆಯನ್ನು ಬೇರೆ ಬೇರೆ ಕಡೆ ಹೆಚ್ಚಾಗಿ ಬಳಕೆ ಮಾಡುವಂತಾಗಬೇಕು. ಇದೀಗ ಆಹಾರದಲ್ಲೂ ಅಡಿಕೆ ಬಳಕೆ ಆರಂಭವಾಗಿದೆ. ಉತ್ತರ ಕನ್ನಡದಲ್ಲಿ ಅಡಿಕೆ ಸಿಂಗಾರದ ಪಲ್ಯ ಈಗ ಪೇಮಸ್ಸಾಗುತ್ತಿದೆ.

ಅಡಿಕೆ ಉಪ್ಪಿನಕಾಯಿ, ಅಡಿಕೆ ಹೋಳಿಗೆ, ಅಡಿಕೆ ತಾಂಬೂಲು ಹೀಗೇ ಹಲವು ವಸ್ತುಗಳು ಬಳಕೆಗೆ ಬಂದಿದೆ. ಇದೀಗ ಅಡಿಕೆ ಸಿಂಗಾರದ ಪಲ್ಯವೂ ಸೇರಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಮಂದಿ ಈ ಪ್ರಯೋಗ ಮಾಡಿದ್ದಾರೆ. ಹೀಗಾಗಿ ಈಗ ಮತ್ತೆ ಅಡಿಕೆ ಸಿಂಗಾರವೂ ಆಹಾರದ ಸಾಲಿನಲ್ಲಿ ಸೇರುತ್ತಿದೆ. ಅಡಿಕೆ ಬೆಳೆಯುವ ನಾಡಾದ ಶಿರಸಿ, ಸಿದ್ಧಾಪುರ ಸೇರಿದಂತೆ ಹಲವು ಕಡೆಗಳಲ್ಲಿ ಸಿಂಗಾರದ ಪಲ್ಯ ಪ್ರಯೋಗವಾಗಿದೆ.

ಅಡಿಕೆ ಸಿಂಗಾರದ ಪಲ್ಯವನು ಅಲ್ಲಿ ಹೀಗೆ ಮಾಡಲಾಗುತ್ತದೆ ಎಂದು ಮಾಧ್ಯಮದ ಮೂಲಕ ವಿವರ ಲಭ್ಯವಾಗಿದೆ.  ಎಳೆ ಸಿಂಗಾರವನ್ನು ಆರಿಸಿಕೊಂಡು ಬರಬೇಕು. ತೀರಾ ಬಲಿತ ಸಿಂಗಾರವಾದರೆ ತಿನ್ನೋದಕ್ಕೆ ಆಗೋದಿಲ್ಲ. ಇನ್ನು ತೀರಾ ಎಳೆಯದ್ದು ಆದ್ರೂ ಉರಿಗೆ ಕರಗಿಬಿಡುತ್ತದೆ. ಹೀಗಾಗಿ ಬಿಳಿಯಾಗಿರುವ ಸಣ್ಣ ಸಿಂಗಾರದ ಹೂವನ್ನು ಕೊಯ್ದುಕೊಂಡು ಬಂದು ಅದನ್ನು ಸಣ್ಣಗೆ ಹೆಚ್ಚಿಕೊಳ್ಳಬೇಕು. ನಂತರ ಸಿಂಗಾರದ ತುಂಡುಗಳನ್ನೆಲ್ಲಾ ಹದವಾಗಿ ನೀರಿನಲ್ಲಿ ಬೇಯಿಸಬೇಕು. ಅದಾದ ಮೇಲೆ ಈರುಳ್ಳಿ, ಬೆಳ್ಳುಳ್ಳಿ, ಸಾಸಿವೆ, ಕೊಬ್ಬರಿ ಎಣ್ಣೆ, ಬೇವಿನಸೊಪ್ಪು, ಕೊತ್ತಂಬರಿಯ ಒಗ್ಗರಣೆಯನ್ನು ಮಾಡಿಕೊಳ್ಳಬೇಕು. ನಂತರ ಬೆಂದ ಸಿಂಗಾರದ ನೀರನ್ನು ಬಸಿದು, ಬೆಂದ ಸಿಂಗಾರವನ್ನು ಒಗ್ಗರಣೆಗೆ ಸೇರಿಸಿ, ಚೂರೇ ಚೂರು ಎಣ್ಣೆಯೊಂದಿಗೆ ರುಚಿಗೆ ತಕ್ಕಷ್ಟು ಉಪ್ಪು, ಖಾರ, ಅರಿಶಿನ, ಸಾಂಬಾರ್ ಮಸಾಲೆ ಬೇಕಿದ್ದರೆ ಕಾಯಿತುರಿ ಸೇರಿಸಿಕೊಂಡು ಮಾಡಬಹುದು. ಸ್ವಲ್ಪ ಹೊತ್ತು ಚೆನ್ನಾಗಿ ಸೌಟಲ್ಲಿ ತಿರವುತ್ತಾ ಬೇಯಿಸಿಬಿಟ್ಟರೆ ಸಿಂಗಾರದ ಘಮಘಮವೆನಿಸುವ ಪಲ್ಯ ಸವಿಯಲು ಸಿದ್ಧವಾಗುತ್ತೆ.

ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಆದ್ಯತೆ ಇಂದು ಅಗತ್ಯವಾಗಿದೆ. ಈ ಮೊದಲು ಅಡಿಕೆಯ ವಿವಿಧ ಬಳಕೆ ಇತ್ತು, ಅಡಿಕೆಯ ಬಣ್ಣವೂ ಈಗ ಹೆಚ್ಚು ಗಮನ ಸೆಳೆಯುತ್ತಿದೆ. ದೇಸೀ ಉಡುಪುಗಳಿಗೂ ಅಡಿಕೆಯ ಬಣ್ಣ ಉತ್ತಮವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago