Advertisement
MIRROR FOCUS

ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |

Share

ದಕ್ಷಿಣ ಕನ್ನಡ ಜಿಲ್ಲೆ ಪ್ರಮುಖವಾಗಿ ಕೃಷಿ ಹಿನ್ನೆಲೆ ಹೊಂದಿದ ಜಿಲ್ಲೆ. ಅದರಲ್ಲೂ ಅಡಿಕೆ ಬೆಳೆಯೇ ಪ್ರಮುಖವಾಗಿದೆ. ಆದರೆ, ಸುಳ್ಯದಿಂದ ತೊಡಗಿ ಈಗ ಬಹುಪಾಲು ಕಡೆ ಹಳದಿ ಎಲೆರೋಗ ಕಾಣಿಸಿದೆ. ಸುಳ್ಯದ ಸಂಪಾಜೆ, ಅರಂತೋಡು, ಮರ್ಕಂಜ ಪ್ರದೇಶದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಭವಿಷ್ಯದಲ್ಲಿ ದ ಕ ಜಿಲ್ಲೆಯ ಎಲ್ಲಾ ಕೃಷಿಕರಿಗೂ ಇದೊಂದು ಸವಾಲಾಗಿದೆ. ಹಾಗಿದ್ದರೂ ಚುನಾವಣಾ ವಿಷಯ ಇದಾಗುತ್ತಿಲ್ಲ.‌ ಹಾಗೆ ನೋಡಿದರೆ ರಾಜ್ಯದಲ್ಲಿ ಇಂದು ಅಡಿಕೆ ಬೆಳೆಯುವ ಪ್ರದೇಶ ಹೆಚ್ಚಾಗಿದೆ. ಇದಕ್ಕಾಗಿ ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ ಮತ್ತು ಚುನಾವಣೆ ಈ ಬಗ್ಗೆ ಕೃಷಿಕ ರಮೇಶ ದೇಲಂಪಾಡಿ ಅವರ ಜೊತೆ ದ ರೂರಲ್‌ ಮಿರರ್.ಕಾಂ ನಡೆಸಿದ ಮಾತುಕತೆಯ ಸಾರಾಂಶ ಇಲ್ಲಿದೆ.. …….ಮುಂದೆ ಓದಿ…..

Advertisement
Advertisement
ಇಂದು ಎಲೆಚುಕ್ಕಿ ರೋಗದ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹೆಚ್ಚಿನದೇನೂ ಮಾಡಲು ಇಲ್ಲ. ವಿಜ್ಞಾನಿಗಳು ಈಗಾಗಲೇ ಅಧ್ಯಯನ ನಡೆಸಿ ಪರಿಹಾರವನ್ನೂ ಹೇಳಿದ್ದಾರೆ. ಅದನ್ನು ಜಾರಿಗೊಳಿಸಬೇಕಾದ್ದು ಕಾರ್ಯಾಂಗ. ಈಗ ವಿಜ್ಞಾನಿಗಳ ಪಾತ್ರವೂ ಇಲ್ಲ. ಸಾಮೂಹಿಕ ಸಿಂಪಡಣಾ ವ್ಯವಸ್ಥೆಯನ್ನು ಕಾರ್ಯಾಂಗ ಮಾಡಬೇಕು. ಅದು ಆಗದೇ ಇರುವುದು ಕಾರಣ, ಇದರ ಅನುಷ್ಟಾನ ಹೇಗೆ ಎಂಬುದು ಮಾತ್ರಾ ಇರುವುದು.
ಆದರೆ, ಹಳದಿ ಎಲೆರೋಗ ವ್ಯವಸ್ಥೆಯ ವಿಫಲತೆ. ಇಂತಹ ಸಮಸ್ಯೆಗಳಲ್ಲಿ ದೀರ್ಘವಾದ ಅಧ್ಯಯನ, ಸಂಶೋಧನೆ ಅಗತ್ಯ ಇದೆ. ಇಲ್ಲಿ ಈ ಬಗ್ಗೆ ನಿರ್ಧಾರದ ಹಂತದಲ್ಲಿ ವೈಜ್ಞಾನಿಕ ತಿಳುವಳಿಕೆ ಕೂಡಾ ಬೇಕು. ಈಗ ಅಡಿಕೆ ಹಳದಿ ಎಲೆರೋಗದ ವಿಷಯದಲ್ಲೂ ಎಲ್ಲಾ ಪ್ರಯತ್ನವೂ ವೈಫಲ್ಯ ಕಾಣಲು ಕಾರಣವೂ ಇದೇ. ನಿರ್ಧಾರ ಹಂತದಲ್ಲಿ ಸೋಲುತ್ತದೆ.
ರಮೇಶ್‌ ದೇಲಂಪಾಡಿ
ಸರ್ಕಾರವು ತನ್ನದೇ ಸಂಸ್ಥೆಗಳನ್ನು ನಂಬಬೇಕು. ನಮ್ಮ ಪ್ರತಿನಿಧಿಗಳಿಗೆ ಇಲ್ಲೇ ನಂಬಿಕೆ ಇಲ್ಲ, ಕೇಳಿದರೆ ವಿಜ್ಞಾನಿಗಳು, ವಿದೇಶಗಳ ಸಂಸ್ಥೆ ಇತ್ಯಾದಿ ಗಳ ಬಗ್ಗೆ ಜನಪ್ರತಿನಿಧಿಗಳೇ ಮಾತನಾಡುತ್ತಾರೆ. ಪ್ರಶ್ನೆ ಮಾಡಿದವರ ಬಾಯಿ ಮುಚ್ಚಿಸುವ ಕೆಲಸ ಆಗುತ್ತದೆಯಷ್ಟೆ. ಕಳೆದ ಸಲವೂ ಹಾಗೇಯೇ ಆಗಿದೆ. ವಿದೇಶ ಎಂದೆಲ್ಲಾ ಹೇಳಿದ ಬಳಿಕ ಒಂದು ಹೆಜ್ಜೆಯೂ ಮುಂದೆ ಇಡಲಿಲ್ಲ. ಹೀಗಾಗಿ ವಿಫಲವಾಗಲು ಕಾರಣವಾಗುತ್ತದೆ. ಮುಂದೆ ಬರುವ ಪ್ರತಿನಿಧಿಗಳು ಇದನ್ನೆಲ್ಲಾ ಸರಿ ಮಾಡಬೇಕಿದೆ.
ಹಳದಿ ಎಲೆರೋಗ ಒಂದಷ್ಟು ಕಡೆ ವ್ಯಾಪಿಸಿದೆ. ವಿಜ್ಞಾನಿಗಳಲ್ಲೂ ಅಭಿಪ್ರಾಯ ವ್ಯತ್ಯಾಸ ಇದೆ, ಕೃಷಿಕರಲ್ಲೂ ಇದೆ. ಆದರೆ ಜನಪ್ರತಿನಿಧಿಗಳಿಗೆ ಈ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಇಲ್ಲ. ಇದನ್ನು ತಿಳಿದುಕೊಳ್ಳುವ ಕೆಲಸ ಆಗಬೇಕು.
ಹಳದಿ ಎಲೆರೋಗಕ್ಕೆ ಶತಮಾನದ ಹಿನ್ನೆಲೆ ಇದೆ. ೧೦೦ ವರ್ಷದಲ್ಲಿ ಆಗದ್ದು ಈಗ ಆಗುತ್ತದಾ ಎನ್ನುವುದು ಕೃಷಿಕರ ಪ್ರಶ್ನೆ.  ಇದು  ಮೂಲಭೂತ ಸಮಸ್ಯೆಯ ಪ್ರಶ್ನೆ. ಹೀಗಾಗಿ ಈಗ ತಮಗೆ ಏನು ಲಾಭ ಮಾಡಬಹುದು ಎನ್ನುವುದು ಕೃಷಿಕರ ದೃಷ್ಟಿ. ಅದು ಕೂಡಾ ಸರಿಯಾದ್ದೇ.
ಅದಕ್ಕಾಗಿ ಹಳದಿ ಎಲೆರೋಗವೇ ಪರಿಹಾರವಾದರೆ ಸಂಪೂರ್ಣ ಪರಿಹಾರ ಮತ್ತು ಶಾಶ್ವತ ಪರಿಹಾರ  ಎನ್ನುವುದು ಕೃಷಿಕರಿಗೆ ಅರ್ಥವಾಗಬೇಕು. ಇದಕ್ಕಾಗಿ ಅಡಿಕೆ ಬೆಳೆಗಾರ ಜಾಗೃತವಾಗಬೇಕು. ಇದುವರೆಗಿನ ಸಮಸ್ಯೆಯೂ ಆದದ್ದು ಅದೇ, ಅಡಿಕೆ ಬೆಳೆಗಾರ ಓಟ್‌ ಬ್ಯಾಂಕ್‌ ಆಗಿಲ್ಲ. ಓಟ್‌ ಬ್ಯಾಂಕ್‌ ಆಗಬೇಕು.
ಈಗ ಸಂಶೋಧನೆ ಮೇಲೆ ಒತ್ತಡ ಬರಬೇಕು. ಇಲ್ಲದೇ ಇದ್ದರೆ ಸರ್ಕಾರಗಳು ಆ ತಕ್ಷಣದ ಪರಿಹಾರಕ್ಕೆ ಮಾತ್ರಾ ಯೋಚಿಸುತ್ತದೆ. ಕೃಷಿಕೆಗೆ ಸಾಲಮನ್ನಾ ಇರಲಿ, ಅದು ತಕ್ಷಣಕ್ಕೆ ಸಿಗಬೇಕಾದ ನೆರವು. ಅದು ಸಹಜವಾಗಿಯೇ ಬೇಕಾಗಿದೆ. ಸಂಶೋಧನೆ ದೀರ್ಘ ಕಾಲದ್ದು. ಹೀಗಾಗಿ ಅದು ತಕ್ಷಣವೇ ಆಗದು. ಅಡಿಕೆ ದೀರ್ಘಾವಧಿ ಕೃಷಿ. ಹೀಗಾಗಿ ತಕ್ಷಣವೇ ಇಲ್ಲಿ ಪರಿಹಾರವೂ ಇಲ್ಲಿ ಅಸಾಧ್ಯ.
ಕೃಷಿಕರಿಗೆ ತಕ್ಷಣದ ಅವಶ್ಯತೆ ಸಾಲಮನ್ನಾ ಬೇಕಿದೆ. ಅದು ತಪ್ಪಲ್ಲ, ಅದೂ ಬಹುಮುಖ್ಯ, ಅದರ ಜೊತೆಗೆ ಸಂಶೋಧನೆಯ ಬೇಡಿಕೆ ನಿಲ್ಲಿಸಬಾರದು. ಸಂಶೋಧನೆ ಅಂದರೆ ಯಾವ ರೀತಿಯ ಸಂಶೋಧನೆ ಎಂಬುದೂ ಮುಖ್ಯ. ಸಂಶೋಧನೆ ಎಂಬುದು ದೀರ್ಘಾವಧಿ ಯೋಜನೆ ಬೇಕು, ಅಂತಹ ವಿಜ್ಞಾನಿಗಳನ್ನು ನಿಯೋಜನೆ ಮಾಡಬೇಕು. ಇದಕ್ಕೆ ಪೂರಕವಾದ ಕೆಲಸ ಸರ್ಕಾರ ಮಾಡಬೇಕು. ಗೆದ್ದು ಬರುವ ಜನಪ್ರತಿನಿಧಿ ಮಾಡಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

18 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

19 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

19 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

19 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

19 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

19 hours ago