ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ

November 10, 2025
7:16 AM

ಕ್ಯಾನ್ಸರ್ ಕಣಗಳನ್ನು ತಟಸ್ಥಗೊಳಿಸುವ ಅಂಶ ಅಡಿಕೆಯಲ್ಲಿದೆ. ಅಡಿಕೆ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿದೆ ಎಂದು ಯೆನಪೊಯ ವಿಶ್ವವಿದ್ಯಾಲಯದ ಸಂಶೋಧಕ ತಂಡವು ವರದಿಯನ್ನು ನೀಡಿದೆ.

ಹಲವು ದಶಕಗಳಿಂದ ಅಡಿಕೆಯನ್ನು ಮೌಖಿಕ ಕ್ಯಾನ್ಸರ್ ಗೆ ಕಾರಣ ಎಂದು ಆರೋಪಿಸಲಾಗುತ್ತಿತ್ತು. ಆದರೆ ಈ ಸಂಶೋಧನೆಯು ಆ ಆರೋಪಗಳು ಸಂಪೂರ್ಣ ತಪ್ಪು ಎಂಬುದನ್ನು ವೈಜ್ಷಾನಿಕವಾಗಿ ಸಾಬೀತುಪಡಿಸಿತು. ಅಡಿಕೆ ಏಕಾಏಕಿ ಕ್ಯಾನ್ಸರ್ ಉಂಟುಮಾಡುವುದಿಲ್ಲ ಬದಲಿಗೆ ಸಾಂಪ್ರದಾಯಕವಾಗಿ ಸೇವಿಸಿದಾದ ಕ್ಯಾನ್ಸರ್ ತಡೆಗೆ ಸಹಾಯ ಮಾಡುತ್ತದೆ ಎಂಬುದು ಈಗ ವೈಜ್ಞಾನಿಕ ಸತ್ಯವಾಗಿದೆ.

Advertisement

ಅಡಿಕೆ ಕ್ಯಾನ್ಸರ್ ಕಾರಕ ಹೌದ ಅಲ್ಲವೇ ಎಂಬುದನ್ನು ದೃಢಡಿಸುವುದಕ್ಕಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞ ಸಂಶೋಧಕರ ತಂಡ ಮೂರು ವರ್ಷ ಹಿಂದೆಯೇ ಅಧ್ಯಯನ ಶುರುಮಾಡಿದೆ. ಇದಕ್ಕಾಗಿ ಕ್ಯಾಂಪ್ಕೊ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ನಿಟ್ಟೆ ವಿವಿ ನಡುವೆ ತಿಳುವಳಿಕೆ ಒಪ್ಪಂದ ಏರ್ಪಟ್ಟಿತು.

ಅಡಿಕೆ ಸಾರದಿಂದ ಝೀಬ್ರಾ ಮೀನಿನ ಮೇಲೆ ಪರಿಣಾಮ ಏನು, ಅಡಿಕೆ ಹಣ್ಣಿನ ನೊಣದ ಮೇಲೆ ಏನು ಪರಿಣಾಮ, ಅಡಿಕೆ ರಸದಿಂದ ಕ್ಯಾನ್ಸರ್ ಕಣಗಳ ಮೇಳಿನ ಪರಿಣಾಮ, ಅಡಿಕೆ ಜಗಿಯುವವರ ವೈಜ್ಞಾನಿಕ ಸಮೀಕ್ಷೆ- ಹೀಗೆ ನಾಲ್ಕು ಹಂತದ ಅಧ್ಯಯನ ನಡೆಸುವುದಕ್ಕೆ ಒಪ್ಪಂದ ಆಗಿತ್ತು. ಈ ಪೈಕಿ 3 ವಿಭಾಗಗಳ ಸಂಶೋಧನೆಗಳನ್ನು ನಿಟ್ಟೆ ವಿ.ವಿ.ಯ ವಿಜ್ಞಾನಿ ಪ್ರೊ.ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಪೂರ್ಣಗೊಳಿಸಿದೆ. ಇನ್ನು ಇದು ಅಂತಾರಾಷ್ಟ್ರೀಯ ಜರ್ನಲ್ ನಲ್ಲಿ ಪ್ರಕಟವಾಗಬೇಕಷ್ಟೇ.

Advertisement

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಆರೋಪ ಇರುವ ಕಾರಣ, ಅಡಿಕೆಯ ಸಾರವು ಕ್ಯಾನ್ಸರ್ ಕಣಗಳ ಮೇಲೆ ಯಾವು ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಅರಿಯಲು ಪ್ರತ್ಯೇಕ ಅಧ್ಯಯನ ನಡೆಸಲಾಗಿತ್ತು. ನಿಟ್ಟೆ ವಿವಿಯ ಪ್ರಯೋಗಾಲಯದ ಪೆಟ್ರಿಪ್ಲೇಟ್ ಗಳಲ್ಲಿ ಕ್ಯಾನ್ಸರ್ ಕಣಗಳನ್ನು ಬೆಳೆಸಿ, ಅವುಗಳ ಮೇಲೆ ಅಡಿಕೆಯ ಸಾರವನ್ನು ಪ್ರಯೋಗಿಸಲಾಗಿದೆ. ಆಗ ಅದು ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ಇದನ್ನು ಅಧ್ಯಯನ ವರದಿಯಲ್ಲಿ ಉಲ್ಲೇಖಿಸುವುದಕ್ಕೆ ಸಂಶೋಧಕರು ಮುಂದಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror