Advertisement
ಕೃಷಿ

ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ

Share

ಕ್ಯಾನ್ಸರ್ ಕಣಗಳನ್ನು ತಟಸ್ಥಗೊಳಿಸುವ ಅಂಶ ಅಡಿಕೆಯಲ್ಲಿದೆ. ಅಡಿಕೆ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿದೆ ಎಂದು ಯೆನಪೊಯ ವಿಶ್ವವಿದ್ಯಾಲಯದ ಸಂಶೋಧಕ ತಂಡವು ವರದಿಯನ್ನು ನೀಡಿದೆ.

ಹಲವು ದಶಕಗಳಿಂದ ಅಡಿಕೆಯನ್ನು ಮೌಖಿಕ ಕ್ಯಾನ್ಸರ್ ಗೆ ಕಾರಣ ಎಂದು ಆರೋಪಿಸಲಾಗುತ್ತಿತ್ತು. ಆದರೆ ಈ ಸಂಶೋಧನೆಯು ಆ ಆರೋಪಗಳು ಸಂಪೂರ್ಣ ತಪ್ಪು ಎಂಬುದನ್ನು ವೈಜ್ಷಾನಿಕವಾಗಿ ಸಾಬೀತುಪಡಿಸಿತು. ಅಡಿಕೆ ಏಕಾಏಕಿ ಕ್ಯಾನ್ಸರ್ ಉಂಟುಮಾಡುವುದಿಲ್ಲ ಬದಲಿಗೆ ಸಾಂಪ್ರದಾಯಕವಾಗಿ ಸೇವಿಸಿದಾದ ಕ್ಯಾನ್ಸರ್ ತಡೆಗೆ ಸಹಾಯ ಮಾಡುತ್ತದೆ ಎಂಬುದು ಈಗ ವೈಜ್ಞಾನಿಕ ಸತ್ಯವಾಗಿದೆ.

ಅಡಿಕೆ ಕ್ಯಾನ್ಸರ್ ಕಾರಕ ಹೌದ ಅಲ್ಲವೇ ಎಂಬುದನ್ನು ದೃಢಡಿಸುವುದಕ್ಕಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞ ಸಂಶೋಧಕರ ತಂಡ ಮೂರು ವರ್ಷ ಹಿಂದೆಯೇ ಅಧ್ಯಯನ ಶುರುಮಾಡಿದೆ. ಇದಕ್ಕಾಗಿ ಕ್ಯಾಂಪ್ಕೊ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ನಿಟ್ಟೆ ವಿವಿ ನಡುವೆ ತಿಳುವಳಿಕೆ ಒಪ್ಪಂದ ಏರ್ಪಟ್ಟಿತು.

ಅಡಿಕೆ ಸಾರದಿಂದ ಝೀಬ್ರಾ ಮೀನಿನ ಮೇಲೆ ಪರಿಣಾಮ ಏನು, ಅಡಿಕೆ ಹಣ್ಣಿನ ನೊಣದ ಮೇಲೆ ಏನು ಪರಿಣಾಮ, ಅಡಿಕೆ ರಸದಿಂದ ಕ್ಯಾನ್ಸರ್ ಕಣಗಳ ಮೇಳಿನ ಪರಿಣಾಮ, ಅಡಿಕೆ ಜಗಿಯುವವರ ವೈಜ್ಞಾನಿಕ ಸಮೀಕ್ಷೆ- ಹೀಗೆ ನಾಲ್ಕು ಹಂತದ ಅಧ್ಯಯನ ನಡೆಸುವುದಕ್ಕೆ ಒಪ್ಪಂದ ಆಗಿತ್ತು. ಈ ಪೈಕಿ 3 ವಿಭಾಗಗಳ ಸಂಶೋಧನೆಗಳನ್ನು ನಿಟ್ಟೆ ವಿ.ವಿ.ಯ ವಿಜ್ಞಾನಿ ಪ್ರೊ.ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಪೂರ್ಣಗೊಳಿಸಿದೆ. ಇನ್ನು ಇದು ಅಂತಾರಾಷ್ಟ್ರೀಯ ಜರ್ನಲ್ ನಲ್ಲಿ ಪ್ರಕಟವಾಗಬೇಕಷ್ಟೇ.

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಆರೋಪ ಇರುವ ಕಾರಣ, ಅಡಿಕೆಯ ಸಾರವು ಕ್ಯಾನ್ಸರ್ ಕಣಗಳ ಮೇಲೆ ಯಾವು ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಅರಿಯಲು ಪ್ರತ್ಯೇಕ ಅಧ್ಯಯನ ನಡೆಸಲಾಗಿತ್ತು. ನಿಟ್ಟೆ ವಿವಿಯ ಪ್ರಯೋಗಾಲಯದ ಪೆಟ್ರಿಪ್ಲೇಟ್ ಗಳಲ್ಲಿ ಕ್ಯಾನ್ಸರ್ ಕಣಗಳನ್ನು ಬೆಳೆಸಿ, ಅವುಗಳ ಮೇಲೆ ಅಡಿಕೆಯ ಸಾರವನ್ನು ಪ್ರಯೋಗಿಸಲಾಗಿದೆ. ಆಗ ಅದು ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ಇದನ್ನು ಅಧ್ಯಯನ ವರದಿಯಲ್ಲಿ ಉಲ್ಲೇಖಿಸುವುದಕ್ಕೆ ಸಂಶೋಧಕರು ಮುಂದಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago