Advertisement
ಕೃಷಿ

ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ

Share

ಕ್ಯಾನ್ಸರ್ ಕಣಗಳನ್ನು ತಟಸ್ಥಗೊಳಿಸುವ ಅಂಶ ಅಡಿಕೆಯಲ್ಲಿದೆ. ಅಡಿಕೆ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿದೆ ಎಂದು ಯೆನಪೊಯ ವಿಶ್ವವಿದ್ಯಾಲಯದ ಸಂಶೋಧಕ ತಂಡವು ವರದಿಯನ್ನು ನೀಡಿದೆ.

ಹಲವು ದಶಕಗಳಿಂದ ಅಡಿಕೆಯನ್ನು ಮೌಖಿಕ ಕ್ಯಾನ್ಸರ್ ಗೆ ಕಾರಣ ಎಂದು ಆರೋಪಿಸಲಾಗುತ್ತಿತ್ತು. ಆದರೆ ಈ ಸಂಶೋಧನೆಯು ಆ ಆರೋಪಗಳು ಸಂಪೂರ್ಣ ತಪ್ಪು ಎಂಬುದನ್ನು ವೈಜ್ಷಾನಿಕವಾಗಿ ಸಾಬೀತುಪಡಿಸಿತು. ಅಡಿಕೆ ಏಕಾಏಕಿ ಕ್ಯಾನ್ಸರ್ ಉಂಟುಮಾಡುವುದಿಲ್ಲ ಬದಲಿಗೆ ಸಾಂಪ್ರದಾಯಕವಾಗಿ ಸೇವಿಸಿದಾದ ಕ್ಯಾನ್ಸರ್ ತಡೆಗೆ ಸಹಾಯ ಮಾಡುತ್ತದೆ ಎಂಬುದು ಈಗ ವೈಜ್ಞಾನಿಕ ಸತ್ಯವಾಗಿದೆ.

ಅಡಿಕೆ ಕ್ಯಾನ್ಸರ್ ಕಾರಕ ಹೌದ ಅಲ್ಲವೇ ಎಂಬುದನ್ನು ದೃಢಡಿಸುವುದಕ್ಕಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞ ಸಂಶೋಧಕರ ತಂಡ ಮೂರು ವರ್ಷ ಹಿಂದೆಯೇ ಅಧ್ಯಯನ ಶುರುಮಾಡಿದೆ. ಇದಕ್ಕಾಗಿ ಕ್ಯಾಂಪ್ಕೊ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ನಿಟ್ಟೆ ವಿವಿ ನಡುವೆ ತಿಳುವಳಿಕೆ ಒಪ್ಪಂದ ಏರ್ಪಟ್ಟಿತು.

ಅಡಿಕೆ ಸಾರದಿಂದ ಝೀಬ್ರಾ ಮೀನಿನ ಮೇಲೆ ಪರಿಣಾಮ ಏನು, ಅಡಿಕೆ ಹಣ್ಣಿನ ನೊಣದ ಮೇಲೆ ಏನು ಪರಿಣಾಮ, ಅಡಿಕೆ ರಸದಿಂದ ಕ್ಯಾನ್ಸರ್ ಕಣಗಳ ಮೇಳಿನ ಪರಿಣಾಮ, ಅಡಿಕೆ ಜಗಿಯುವವರ ವೈಜ್ಞಾನಿಕ ಸಮೀಕ್ಷೆ- ಹೀಗೆ ನಾಲ್ಕು ಹಂತದ ಅಧ್ಯಯನ ನಡೆಸುವುದಕ್ಕೆ ಒಪ್ಪಂದ ಆಗಿತ್ತು. ಈ ಪೈಕಿ 3 ವಿಭಾಗಗಳ ಸಂಶೋಧನೆಗಳನ್ನು ನಿಟ್ಟೆ ವಿ.ವಿ.ಯ ವಿಜ್ಞಾನಿ ಪ್ರೊ.ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಪೂರ್ಣಗೊಳಿಸಿದೆ. ಇನ್ನು ಇದು ಅಂತಾರಾಷ್ಟ್ರೀಯ ಜರ್ನಲ್ ನಲ್ಲಿ ಪ್ರಕಟವಾಗಬೇಕಷ್ಟೇ.

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಆರೋಪ ಇರುವ ಕಾರಣ, ಅಡಿಕೆಯ ಸಾರವು ಕ್ಯಾನ್ಸರ್ ಕಣಗಳ ಮೇಲೆ ಯಾವು ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಅರಿಯಲು ಪ್ರತ್ಯೇಕ ಅಧ್ಯಯನ ನಡೆಸಲಾಗಿತ್ತು. ನಿಟ್ಟೆ ವಿವಿಯ ಪ್ರಯೋಗಾಲಯದ ಪೆಟ್ರಿಪ್ಲೇಟ್ ಗಳಲ್ಲಿ ಕ್ಯಾನ್ಸರ್ ಕಣಗಳನ್ನು ಬೆಳೆಸಿ, ಅವುಗಳ ಮೇಲೆ ಅಡಿಕೆಯ ಸಾರವನ್ನು ಪ್ರಯೋಗಿಸಲಾಗಿದೆ. ಆಗ ಅದು ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ಇದನ್ನು ಅಧ್ಯಯನ ವರದಿಯಲ್ಲಿ ಉಲ್ಲೇಖಿಸುವುದಕ್ಕೆ ಸಂಶೋಧಕರು ಮುಂದಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

20 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

21 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

22 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago