Advertisement
ಕೃಷಿ

ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ

Share

ಕ್ಯಾನ್ಸರ್ ಕಣಗಳನ್ನು ತಟಸ್ಥಗೊಳಿಸುವ ಅಂಶ ಅಡಿಕೆಯಲ್ಲಿದೆ. ಅಡಿಕೆ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿದೆ ಎಂದು ಯೆನಪೊಯ ವಿಶ್ವವಿದ್ಯಾಲಯದ ಸಂಶೋಧಕ ತಂಡವು ವರದಿಯನ್ನು ನೀಡಿದೆ.

ಹಲವು ದಶಕಗಳಿಂದ ಅಡಿಕೆಯನ್ನು ಮೌಖಿಕ ಕ್ಯಾನ್ಸರ್ ಗೆ ಕಾರಣ ಎಂದು ಆರೋಪಿಸಲಾಗುತ್ತಿತ್ತು. ಆದರೆ ಈ ಸಂಶೋಧನೆಯು ಆ ಆರೋಪಗಳು ಸಂಪೂರ್ಣ ತಪ್ಪು ಎಂಬುದನ್ನು ವೈಜ್ಷಾನಿಕವಾಗಿ ಸಾಬೀತುಪಡಿಸಿತು. ಅಡಿಕೆ ಏಕಾಏಕಿ ಕ್ಯಾನ್ಸರ್ ಉಂಟುಮಾಡುವುದಿಲ್ಲ ಬದಲಿಗೆ ಸಾಂಪ್ರದಾಯಕವಾಗಿ ಸೇವಿಸಿದಾದ ಕ್ಯಾನ್ಸರ್ ತಡೆಗೆ ಸಹಾಯ ಮಾಡುತ್ತದೆ ಎಂಬುದು ಈಗ ವೈಜ್ಞಾನಿಕ ಸತ್ಯವಾಗಿದೆ.

ಅಡಿಕೆ ಕ್ಯಾನ್ಸರ್ ಕಾರಕ ಹೌದ ಅಲ್ಲವೇ ಎಂಬುದನ್ನು ದೃಢಡಿಸುವುದಕ್ಕಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞ ಸಂಶೋಧಕರ ತಂಡ ಮೂರು ವರ್ಷ ಹಿಂದೆಯೇ ಅಧ್ಯಯನ ಶುರುಮಾಡಿದೆ. ಇದಕ್ಕಾಗಿ ಕ್ಯಾಂಪ್ಕೊ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ನಿಟ್ಟೆ ವಿವಿ ನಡುವೆ ತಿಳುವಳಿಕೆ ಒಪ್ಪಂದ ಏರ್ಪಟ್ಟಿತು.

ಅಡಿಕೆ ಸಾರದಿಂದ ಝೀಬ್ರಾ ಮೀನಿನ ಮೇಲೆ ಪರಿಣಾಮ ಏನು, ಅಡಿಕೆ ಹಣ್ಣಿನ ನೊಣದ ಮೇಲೆ ಏನು ಪರಿಣಾಮ, ಅಡಿಕೆ ರಸದಿಂದ ಕ್ಯಾನ್ಸರ್ ಕಣಗಳ ಮೇಳಿನ ಪರಿಣಾಮ, ಅಡಿಕೆ ಜಗಿಯುವವರ ವೈಜ್ಞಾನಿಕ ಸಮೀಕ್ಷೆ- ಹೀಗೆ ನಾಲ್ಕು ಹಂತದ ಅಧ್ಯಯನ ನಡೆಸುವುದಕ್ಕೆ ಒಪ್ಪಂದ ಆಗಿತ್ತು. ಈ ಪೈಕಿ 3 ವಿಭಾಗಗಳ ಸಂಶೋಧನೆಗಳನ್ನು ನಿಟ್ಟೆ ವಿ.ವಿ.ಯ ವಿಜ್ಞಾನಿ ಪ್ರೊ.ಇಡ್ಯಾ ಕರುಣಾಸಾಗರ್ ಮತ್ತವರ ತಂಡ ಪೂರ್ಣಗೊಳಿಸಿದೆ. ಇನ್ನು ಇದು ಅಂತಾರಾಷ್ಟ್ರೀಯ ಜರ್ನಲ್ ನಲ್ಲಿ ಪ್ರಕಟವಾಗಬೇಕಷ್ಟೇ.

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಆರೋಪ ಇರುವ ಕಾರಣ, ಅಡಿಕೆಯ ಸಾರವು ಕ್ಯಾನ್ಸರ್ ಕಣಗಳ ಮೇಲೆ ಯಾವು ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಅರಿಯಲು ಪ್ರತ್ಯೇಕ ಅಧ್ಯಯನ ನಡೆಸಲಾಗಿತ್ತು. ನಿಟ್ಟೆ ವಿವಿಯ ಪ್ರಯೋಗಾಲಯದ ಪೆಟ್ರಿಪ್ಲೇಟ್ ಗಳಲ್ಲಿ ಕ್ಯಾನ್ಸರ್ ಕಣಗಳನ್ನು ಬೆಳೆಸಿ, ಅವುಗಳ ಮೇಲೆ ಅಡಿಕೆಯ ಸಾರವನ್ನು ಪ್ರಯೋಗಿಸಲಾಗಿದೆ. ಆಗ ಅದು ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ಇದನ್ನು ಅಧ್ಯಯನ ವರದಿಯಲ್ಲಿ ಉಲ್ಲೇಖಿಸುವುದಕ್ಕೆ ಸಂಶೋಧಕರು ಮುಂದಾಗಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

11 minutes ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

6 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

10 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

19 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

19 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

20 hours ago