Advertisement
The Rural Mirror ಫಾಲೋಅಪ್

ಅಡಿಕೆ ಕೊಳೆರೋಗ | ಈ ಬಾರಿ ಅಡಿಕೆ ನಳ್ಳಿಗೆ ಔಷಧಿ ಸಿಂಪಡಿಸಿದವರಲ್ಲಿ ಏನಾಗಿದೆ..?

Share

“ಈ ಬಾರಿ ಉತ್ತಮ ಫಸಲು ಇತ್ತು, ಆದರೆ ಏನು ಮಾಡೋಣ, ಕೊಳೆರೋಗದಿಂದ ನಷ್ಟವಾಯಿತು” ಎಂದು ಹಲವು ಅಡಿಕೆ ಬೆಳೆಗಾರರು ಹೇಳುತ್ತಾರೆ. ಇಂತಹ ಇಳುವರಿ ಪಡೆಯಲು ಕೃಷಿಕರ ಇಡೀ ವರ್ಷದ ಶ್ರಮ ಇದೆ. ಪ್ರತೀ ತಿಂಗಳ ಆರೈಕೆ ಇದೆ.  ಹೀಗಾಗಿ ಅಡಿಕೆ ಬೆಳೆ ಕೊಳೆರೋಗದಿಂದ ನಷ್ಟವಾಗಿರುವುದು ಬೇಸರ ತರಿಸಿದೆ.

ಹಾಗಿದ್ದರೆ, ಬೆಳೆಗಾರರ ಪೂರ್ವತಯಾರಿ ಹೇಗಿತ್ತು. ಉತ್ತಮ ಇಳುವರಿಗಾಗಿ ಬೇಸಗೆಯಲ್ಲಿ ಹಿಂಗಾರಕ್ಕೆ ಔಷಧಿ ಸಿಂಪಡಣೆ, ಸೂಕ್ತ ಕಾಲಕ್ಕೆ ಗೊಬ್ಬರ , ನಿರ್ವಹಣೆ ಇದೆಲ್ಲಾ ಅಗತ್ಯ ಇದೆ. ಇದೆಲ್ಲಾ ಮಾಡಿಯೂ ಮಳೆಯು ಎಲ್ಲವನ್ನೂ ನುಂಗಿತು. ಈ ಬಾರಿ ಬೇಸಗೆಯಲ್ಲಿ ಅಡಿಕೆ ನಳ್ಳಿಗೆ ಔಷಧಿ ಸಿಂಪಡಣೆ ಮಾಡಿದ್ದೀರಾ ಎಂದು ಸಮೀಕ್ಷೆಯಲ್ಲಿ ಕೇಳಲಾಗಿತ್ತು. ಅದರಲ್ಲಿ ಶೇ.49.8 ಕೃಷಿಕರು ಬೇಸಗೆಯಲ್ಲಿ ಅಡಿಕೆ ಹಿಂಗಾರಕ್ಕೆ, ನಳ್ಳಿಗೆ ಔಷಧಿ ಸಿಂಪಡಣೆ ಮಾಡಿದ್ದಾರೆ. ಶೇ.50.2 ರಷ್ಟು ಕೃಷಿಕರು ಸಿಂಪಡಣೆ ಮಾಡಲಿಲ್ಲ. ಅಂದರೆ ಶೇ.50 ರಷ್ಟು ಕೃಷಿಕರು ಬೇಸಗೆಯಲ್ಲಿ ಔಷಧಿ ಸಿಂಪಡಣೆಯ ಬಗ್ಗೆ ಆಸಕ್ತರಾಗಿದ್ದರು. ಸಿಂಪಡಣೆಯೂ ಮಾಡಿದರು. ಆದರೆ, ಮಳೆಯ ಕಾರಣದಿಂದ ಫಸಲು ನಷ್ಟವಾಯಿತು. ಇದರಿಂದಾಗಿ ಕೃಷಿಕರಿಗೆ ಎರಡು ನಷ್ಟ. ಬೆಳೆಯೂ ನಷ್ಟ, ಬೇಸಗೆಯಲ್ಲಿ ಸಿಂಪಡಿಸಿದ್ದ ಔಷಧಿಯೂ ನಷ್ಟ..!. ಇಡೀ ವರ್ಷದ ಆದಾಯಕ್ಕೂ ಹೊಡೆತ. ಈ ಬಾರಿ ಕೆಲವು ಅಡಿಕೆ ಬೆಳೆಗಾರರು ಡಿಸೆಂಬರ್‌ ತಿಂಗಳಿನಿಂದ  ತಿಂಗಳಿಗೊಮ್ಮೆವಿವಿಧ ಬಗೆಯ ಔಷಧಿ ಸಿಂಪಡಣೆ ಮಾಡುತ್ತಿದ್ದರು. ಮೇ ಅಂತ್ಯದಿಂದ ಬೋರ್ಡೋ ಅಥವಾ ಕೊಳೆರೋಗ ನಿಯಂತ್ರಣದ ಔಷಧಿ ಸಿಂಪಡಣೆ ಮಾಡಿದ್ದರು. ಆದರೂ ಇಳುವರಿ ಕೈಗೆ ಸಿಗಲಿಲ್ಲ.

ಸಿಂಪಡಣೆ ಅಷ್ಟೇ ಅಲ್ಲ. ಗೊಬ್ಬರ ನೀಡಿರುವ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಅನೇಕ ಕೃಷಿಕರು ಸೂಕ್ತ ಕಾಲಕ್ಕೆ ಗೊಬ್ಬರವನ್ನೂ ನೀಡಿದ್ದರು. ಶೇ.51.7 ರಷ್ಟು ಕೃಷಿಕರು ಒಂದು ಬಾರಿ ಗೊಬ್ಬರ ನೀಡಿದ್ದಾರೆ. ಶೇ.30.3 ರಷ್ಟು ಕೃಷಿಕರು ಎರಡು ಬಾರಿ ಗೊಬ್ಬರ ನೀಡಿದ್ದಾರೆ, ಶೇ.7.7 ಕೃಷಿಕರು ಮೂರು ಬಾರಿ ಗೊಬ್ಬರ ನೀಡಿದ್ದರೆ, ಶೇ.10.2 ರಷ್ಟು ಕೃಷಿಕರು ಗೊಬ್ಬರ ನೀಡಲಿಲ್ಲ ಎಂದು ಹೇಳಿದ್ದಾರೆ. ಈಚೆಗೆ ಕೆಲವು ಕೃಷಿಕರು ಪ್ರತೀ ತಿಂಗಳು ಗೊಬ್ಬರ ನೀಡುವ ಬಗ್ಗೆಯೂ ಯೋಚನೆ ನಡೆಸುತ್ತಿದ್ದಾರೆ. ಕೃಷಿ ಪದ್ಧತಿಯಲ್ಲಿ ಅಂದರೆ, ಗೊಬ್ಬರ ನೀಡುವುದರಲ್ಲಿ ಶೇ. 50 ರಷ್ಟು ಕೃಷಿಕರು ಪದ್ಧತಿಯನ್ನು ಬದಲಾಯಿಸಿಕೊಂಡಿರುವುದು ಇಲ್ಲಿ ತಿಳಿಯುತ್ತಿದೆ.

ಕೊಳೆರೋಗ ನಿಯಂತ್ರಣ ಹಾಗೂ ಬರದಂತೆ ತಡೆಯುವಲ್ಲಿ ತೋಟದ ಬಸಿಗಾಲುವೆಯೂ ಪ್ರಮುಖವಾಗಿದೆ. ಈ  ಬಗ್ಗೆ ಸಮೀಕ್ಷೆಯಲ್ಲಿ ಕೇಳಲಾಗಿತ್ತು.  ಶೇ.80.8 ಕೃಷಿಕರ ತೋಟದಲ್ಲಿ ಬಸಿಗಾಲುವೆ ವ್ಯವಸ್ಥೆ ಇದೆ. ಶೇ.9.6 ರಷ್ಟು ಕೃಷಿಕರ ತೋಟದಲ್ಲಿ ಬಸಿಗಾಲುವೆ ವ್ಯವಸ್ಥೆ ಇಲ್ಲ. ಶೇ.9.6 ರಷ್ಟು ಕೃಷಿಕರ ತೋಟದಲ್ಲಿ ಬಸಿಗಾಲುವೆ ಇದ್ದರೂ ಈ ಬಾರಿ ಸ್ವಚ್ಛ ಮಾಡಲು ಸಾಧ್ಯವಾಗಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಂದರೆ ಅಡಿಕೆ ಬೆಳೆಗಾರರು ತೋಟದ ನಿರ್ವಹಣೆಯ ಪ್ರಮುಖ ಕೆಲಸಗಳಲ್ಲಿ ಬಸಿಗಾಲುವೆಯ ಬಗ್ಗೆ ಗಮನಹರಿಸಿದ್ದಾರೆ.

ಇಷ್ಟೆಲ್ಲಾ ಆದರೂ ಮಳೆ ನಿರಂತರ ಸುರಿದು ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆ ನಷ್ಟವಾಗಿದೆ. ಕೃಷಿಕರು ಇಡೀ ವರ್ಷ ಕೃಷಿಗಾಗಿ ಮಾಡಿರುವ ವೆಚ್ಚಗಳು ಮಳೆಗೆ ಕೊಚ್ಚಿ ಹೋದಂತಾಗಿದೆ, ಕೊಳೆರೋಗ ಅಡಿಕೆಗೆ ಹಾನಿಮಾಡಿದೆ.(ನಾಳೆ ಮುಂದುವರಿಯುತ್ತದೆ…. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್.ಕಾಂ ಸಮೀಕ್ಷಾ ವರದಿ) ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿ | ಅರಣ್ಯ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…

26 minutes ago

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

14 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

15 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

15 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

15 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

15 hours ago