ಅಡಿಕೆ ಕೊಳೆರೋಗ | ಗುತ್ತಿಗಾರು ಸಹಕಾರಿ ಸಂಘ ಮಹಾಸಭೆ | ಬೆಳೆವಿಮೆ ಶೀಘ್ರ ಬಿಡುಗಡೆಗೆ ಒತ್ತಾಯ

August 26, 2025
9:11 PM

ಈ ಬಾರಿಯ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಇದೀಗ ಬೆಳೆ ವಿಮೆ ಪಾವತಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆಯಲ್ಲಿ ನಿರ್ಣಯ ಮಾಡಲಾಗಿದೆ.

Advertisement

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್‌ ಮೊಗ್ರ ಅಧ್ಯಕ್ಷತೆಯನ್ನು ನಡೆದ ಸಂಘದ ಮಹಾಸಭೆಯಲ್ಲಿ  ಈ ನಿರ್ಣಯ ಮಾಡಲಾಗಿದೆ. ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ.  ಹೀಗಾಗಿ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಬೆಳೆ ವಿಮೆಯನ್ನೂ ಸಂಘದ ಸದಸ್ಯರು ಪಾವತಿ ಮಾಡಿದ್ದಾರೆ. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು  ಮಹಾಸಭೆ ನಿರ್ಣಯಿಸಿತು. ಸಂಘದ ನಿರ್ದೇಶಕ ಮುಳಿಯ ಕೇಶವ ಭಟ್‌ ಹಾಗೂ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ದ ಕ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್‌ ಮುಂಡೋಡಿ ಅವರು ವಿಷಯ ಪ್ರಸ್ತಾಪಿಸಿ , ಅಡಿಕೆ ಬೆಳೆಗಾರರಿಗೆ ಈ ಬಾರಿ ವಿಪರೀತ ನಷ್ಟವಾಗಿದೆ, ಪರಿಹಾರ ಲಭ್ಯವಾಗಬೇಕು, ಇದಕ್ಕಾಗಿ ತಕ್ಷಣದ ಕ್ರಮ ಅಗತ್ಯ ಎಂದರು. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಕ್ರಮ ಕೈಗೊಳ್ಳಲು ಈ ಬಗ್ಗೆ ಮಹಾಸಭೆಯಲ್ಲಿ ನಿರ್ಣಯವಾಗಬೇಕು ಎಂದು ಒತ್ತಾಯಿಸಿದರು.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror