ಈ ಬಾರಿಯ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಇದೀಗ ಬೆಳೆ ವಿಮೆ ಪಾವತಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆಯಲ್ಲಿ ನಿರ್ಣಯ ಮಾಡಲಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಅಧ್ಯಕ್ಷತೆಯನ್ನು ನಡೆದ ಸಂಘದ ಮಹಾಸಭೆಯಲ್ಲಿ ಈ ನಿರ್ಣಯ ಮಾಡಲಾಗಿದೆ. ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಹೀಗಾಗಿ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಬೆಳೆ ವಿಮೆಯನ್ನೂ ಸಂಘದ ಸದಸ್ಯರು ಪಾವತಿ ಮಾಡಿದ್ದಾರೆ. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಮಹಾಸಭೆ ನಿರ್ಣಯಿಸಿತು. ಸಂಘದ ನಿರ್ದೇಶಕ ಮುಳಿಯ ಕೇಶವ ಭಟ್ ಹಾಗೂ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ದ ಕ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ವಿಷಯ ಪ್ರಸ್ತಾಪಿಸಿ , ಅಡಿಕೆ ಬೆಳೆಗಾರರಿಗೆ ಈ ಬಾರಿ ವಿಪರೀತ ನಷ್ಟವಾಗಿದೆ, ಪರಿಹಾರ ಲಭ್ಯವಾಗಬೇಕು, ಇದಕ್ಕಾಗಿ ತಕ್ಷಣದ ಕ್ರಮ ಅಗತ್ಯ ಎಂದರು. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಕ್ರಮ ಕೈಗೊಳ್ಳಲು ಈ ಬಗ್ಗೆ ಮಹಾಸಭೆಯಲ್ಲಿ ನಿರ್ಣಯವಾಗಬೇಕು ಎಂದು ಒತ್ತಾಯಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…