ಈ ಬಾರಿಯ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಇದೀಗ ಬೆಳೆ ವಿಮೆ ಪಾವತಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆಯಲ್ಲಿ ನಿರ್ಣಯ ಮಾಡಲಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಅಧ್ಯಕ್ಷತೆಯನ್ನು ನಡೆದ ಸಂಘದ ಮಹಾಸಭೆಯಲ್ಲಿ ಈ ನಿರ್ಣಯ ಮಾಡಲಾಗಿದೆ. ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಹೀಗಾಗಿ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಬೆಳೆ ವಿಮೆಯನ್ನೂ ಸಂಘದ ಸದಸ್ಯರು ಪಾವತಿ ಮಾಡಿದ್ದಾರೆ. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಮಹಾಸಭೆ ನಿರ್ಣಯಿಸಿತು. ಸಂಘದ ನಿರ್ದೇಶಕ ಮುಳಿಯ ಕೇಶವ ಭಟ್ ಹಾಗೂ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ದ ಕ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ವಿಷಯ ಪ್ರಸ್ತಾಪಿಸಿ , ಅಡಿಕೆ ಬೆಳೆಗಾರರಿಗೆ ಈ ಬಾರಿ ವಿಪರೀತ ನಷ್ಟವಾಗಿದೆ, ಪರಿಹಾರ ಲಭ್ಯವಾಗಬೇಕು, ಇದಕ್ಕಾಗಿ ತಕ್ಷಣದ ಕ್ರಮ ಅಗತ್ಯ ಎಂದರು. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಕ್ರಮ ಕೈಗೊಳ್ಳಲು ಈ ಬಗ್ಗೆ ಮಹಾಸಭೆಯಲ್ಲಿ ನಿರ್ಣಯವಾಗಬೇಕು ಎಂದು ಒತ್ತಾಯಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…