Advertisement
MIRROR FOCUS

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

Share

ಈ ಬಾರಿಯ ಭಾರೀ ಮಳೆಗೆ ಅಡಿಕೆ ಕೊಳೆರೋಗ ವ್ಯಾಪಕವಾಗಿದೆ. ಮೇ. 17 ಸುಮಾರಿಗೆ ಆರಂಭವಾದ ಮಳೆಯು ನಿರಂತರವಾಗಿ ಜುಲೈ ಅಂತ್ಯದವರೆಗೆ ಸುರಿದಿದೆ. ಪರಿಣಾಮವಾಗಿ ಅಡಿಕೆ ಕೊಳೆರೋಗ ವ್ಯಾಪಕವಾಗಿ ಬಾಧಿಸಿದೆ. ಈ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ಸಮೀಕ್ಷೆ ನಡೆಸಿತ್ತು. ಈ ಮಾಹಿತಿ ಪ್ರಕಾರ ಶೇ.95 ರಷ್ಟು ಅಡಿಕೆ ಬೆಳೆಗಾರರು ಕೊಳೆರೋಗ ಬಾಧಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನಷ್ಟು ಕೊಳೆರೋಗ ಹರಡಿರುವ ಬಗ್ಗೆ ಅಂದಾಜಿಸಲಾಗಿದೆ.

ಸಮೀಕ್ಷೆಯಲ್ಲಿ ಇದುವರೆಗೆ 430 ರಷ್ಟು ಅಡಿಕೆ ಬೆಳೆಗಾರರು ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ಲಭ್ಯವಾದ ಮಾಹಿತಿ ಪ್ರಕಾರ ಶೇ.95 ರಷ್ಟು ಅಡಿಕೆ ಬೆಳೆಗಾರರು ಕೊಳೆರೋಗ ಬಾಧಿಸಿದೆ ಎಂದು ಮಾಹಿತಿ ನೀಡಿದ್ದು, ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ ಕೊಳೆರೋಗಕ್ಕೆ ಹಾನಿಯಾಗಿರುವ ಬಗ್ಗೆ ಹೆಚ್ಚಿನ ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಅಂದರೆ ಈ ಬಾರಿ ಕೊಳೆರೋಗದಿಂದ ವ್ಯಾಪಕವಾಗಿ ಅಡಿಕೆ ಹಾನಿಯಾಗಿರುವುದು ಇಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು ಜಿಲ್ಲೆಗಳ ಅಡಿಕೆ ಬೆಳೆಗಾರರು ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ.

ಜುಲೈ 31 ಕ್ಕೆ ಸಮೀಕ್ಷೆ ಕೊನೆಗೊಳಿಸುವ ಬಗ್ಗೆ ನಿರ್ಧರಿಸಲಾಗಿತ್ತು, ಆದರೆ ಆಗಸ್ಟ್‌ ಮೊದಲ ವಾರದಲ್ಲಿ ಬಿಸಿಲಿನ ವಾತಾವರಣ ಕಂಡು ಬಂದ ಹಿನ್ನೆಲೆಯಲ್ಲಿ, ಇನ್ನಷ್ಟು ಕೊಳೆರೋಗ ಬಾಧಿಸಿರುವ ತೋಟಗಳು ಕಂಡುಬರುವ ಸಾಧ್ಯತೆ ಇದೆ ಎಂದು ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಮಾಹಿತಿ ನೀಡಿದ್ದು,  ಇನ್ನೂ 10 ದಿನಗಳ ಕಾಲ ಸಮೀಕ್ಷೆ ಮುಂದುವರಿಸುವ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಆ.10 ರವರೆಗೆ ಸಮೀಕ್ಷೆಯನ್ನು ಮುಂದುವರಿಸಲಾಗಿದೆ. ನಂತರ ಸಮಗ್ರವಾದ ಮಾಹಿತಿಯನ್ನು “ದ ರೂರಲ್‌ ಮಿರರ್‌.ಕಾಂ” ನಲ್ಲಿ ತೆರೆದಿಡಲಾಗುತ್ತದೆ.  ಬಳಿಕ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಶಾಸಕರು, ಸಂಸದರುಗಳ ಹಾಗೂ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಅದಾದ ಬಳಿಕ ಕೊಳೆರೋಗ ಇಲ್ಲದೇ ಇರುವ ಕೃಷಿಕರ ಕೃಷಿ ಕ್ರಮಗಳ ಬಗ್ಗೆ ಹಾಗೂ ಸಮಗ್ರ ಕೃಷಿ ಚಟುವಟಿಕೆಗಳ ಬಗ್ಗೆ ವಿಜ್ಞಾನಿಗಳ ಜೊತೆಗೆ ಚರ್ಚಿಸಿ ಉತ್ತಮ ಕೃಷಿ ಕ್ರಮಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಲು ಸಮೀಕ್ಷಾ ತಂಡವು ಯೋಜನೆ ಹಾಕಿಕೊಂಡಿದೆ. ಸಮೀಕ್ಷೆಯಲ್ಲಿ ಇದುವರೆಗೆ ಭಾಗವಹಿಸದೇ ಇರುವ ಕೃಷಿಕರು ಲಿಂಕ್‌ ಮೂಲಕ ಕೊಳೆರೋಗದ ಮಾಹಿತಿಯನ್ನು ನೀಡಲು ಮತ್ತೊಮ್ಮೆ ಮನವಿ ಮಾಡಲಾಗುತ್ತಿದೆ.(ಈಗಾಗಲೇ ಒಮ್ಮೆ ಪ್ರತಿಕ್ರಿಯೆ ನೀಡಿದವರಿಗೆ ಮತ್ತೆ ಅವಕಾಶಗಳು ಇಲ್ಲ) ಲಿಂಕ್‌ ಇಲ್ಲಿದೆ…. https://forms.gle/iWXV9sfLH5TJcbvT7

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

1 hour ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

13 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

13 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

21 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

22 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago