Advertisement
ಸುದ್ದಿಗಳು

#Arecanut | ಅಡಿಕೆ ಎಲೆ ಚುಕ್ಕಿ ರೋಗದ ಸಮಸ್ಯೆ | ಸಚಿವರ ನೇತೃತ್ವದಲ್ಲಿ ಸಭೆ |

Share
ಮಲೆನಾಡು ಹಾಗೂ ಕರಾವಳಿ ಭಾಗದ ಕಡೆಗಳಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗದ ಸಮಸ್ಯೆ ಕಂಡುಬಂದಿದ್ದು, ಇದರಿಂದಾಗಿ ರೈತರಿಗೆ ಹಲವು ಸಂಕಷ್ಟ ಎದುರಾಗಿದೆ. ಈ ವಿಚಾರದ ಬಗ್ಗೆ ಶುಕ್ರವಾರ ಸಚಿವರ ಜೊತೆಗೆ ಸಭೆ ನಡೆಯಿತು.
ಎಲೆಚುಕ್ಕಿ ರೋಗದಿಂದ ಉಂಟಾದ ಸಮಸ್ಯೆ ಹಾಗೂ ನಷ್ಟದ ಬಗ್ಗೆ ಸಮೀಕ್ಷೆ ನಡೆಸುವುದು ಹಾಗೆ ಅಡಿಕೆ ಬೆಳೆಗಾರರಿಗೆ ಉಚಿತ ಔಷಧ, ದೋಟಿ ನೀಡಲಾಗುವುದು. ಅಡಿಕೆಗೆ ಪರ್ಯಾಯವಾಗಿ ಇಲಾಖೆ ಗುರುತಿಸಿರುವ ಬೆಳೆಯನ್ನು ಬೆಳೆಯಲು ಅವಕಾಶ ಹಾಗೂ ರಿಯಾಯಿತಿ ಕಲ್ಪಿಸಿ , ನಿರ್ಧಾರ ರೈತರು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಸರ್ಕಾರದಿಂದ ಯಾವ ರೀತಿಯಲ್ಲಿ ಅಡಿಕೆ ಬೆಳೆಗಾರರಿಗೆ ನೆರವು ಕಲ್ಪಿಸಬಹುದೆನ್ನುವ ಬಗ್ಗೆಯೂ ಸಿಎಂ ಜೊತೆ ಚರ್ಚಿಸಲು ನಿರ್ಧರಿಸಲಾಗಿದೆ.
ಈ ಸಂದರ್ಭದಲ್ಲಿ ಅಡಿಕೆ ಟಾಸ್ ಪೋರ್ಸ್ ಅಧ್ಯಕ್ಷ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ, ತೋಟಗಾರಿಕೆ ಸಚಿವ ಮುನಿರತ್ನ , ಮೀನುಗಾರಿಕೆ ಸಚಿವ ಎಸ್.ಅಂಗಾರ , ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲೆ ಚುಕ್ಕಿ ರೋಗದಿಂದಾಗಿ ಮಲೆನಾಡು, ಕರಾವಳಿಯ ಜಿಲ್ಲೆಗಳ ಅಡಿಕೆ ತೋಟಗಳಲ್ಲಿ ಮರಗಳಿಗೆ ಹಾನಿಯಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಆತಂಕಗೊಂಡಿದ್ದಾರೆ. ಈ ವರ್ಷ ಮಳೆಯೂ ಹೆಚ್ಚಾಗಿದ್ದು, ಕೊಳೆ ರೋಗ ಸಹ ಅಡಿಕೆಯನ್ನು ಕಾಡುತ್ತಿದೆ.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

4 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

6 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago