Advertisement
ಸುದ್ದಿಗಳು

#Arecanut | ಅಡಿಕೆ ಎಲೆ ಚುಕ್ಕಿ ರೋಗದ ಸಮಸ್ಯೆ | ಸಚಿವರ ನೇತೃತ್ವದಲ್ಲಿ ಸಭೆ |

Share
ಮಲೆನಾಡು ಹಾಗೂ ಕರಾವಳಿ ಭಾಗದ ಕಡೆಗಳಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗದ ಸಮಸ್ಯೆ ಕಂಡುಬಂದಿದ್ದು, ಇದರಿಂದಾಗಿ ರೈತರಿಗೆ ಹಲವು ಸಂಕಷ್ಟ ಎದುರಾಗಿದೆ. ಈ ವಿಚಾರದ ಬಗ್ಗೆ ಶುಕ್ರವಾರ ಸಚಿವರ ಜೊತೆಗೆ ಸಭೆ ನಡೆಯಿತು.
ಎಲೆಚುಕ್ಕಿ ರೋಗದಿಂದ ಉಂಟಾದ ಸಮಸ್ಯೆ ಹಾಗೂ ನಷ್ಟದ ಬಗ್ಗೆ ಸಮೀಕ್ಷೆ ನಡೆಸುವುದು ಹಾಗೆ ಅಡಿಕೆ ಬೆಳೆಗಾರರಿಗೆ ಉಚಿತ ಔಷಧ, ದೋಟಿ ನೀಡಲಾಗುವುದು. ಅಡಿಕೆಗೆ ಪರ್ಯಾಯವಾಗಿ ಇಲಾಖೆ ಗುರುತಿಸಿರುವ ಬೆಳೆಯನ್ನು ಬೆಳೆಯಲು ಅವಕಾಶ ಹಾಗೂ ರಿಯಾಯಿತಿ ಕಲ್ಪಿಸಿ , ನಿರ್ಧಾರ ರೈತರು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಸರ್ಕಾರದಿಂದ ಯಾವ ರೀತಿಯಲ್ಲಿ ಅಡಿಕೆ ಬೆಳೆಗಾರರಿಗೆ ನೆರವು ಕಲ್ಪಿಸಬಹುದೆನ್ನುವ ಬಗ್ಗೆಯೂ ಸಿಎಂ ಜೊತೆ ಚರ್ಚಿಸಲು ನಿರ್ಧರಿಸಲಾಗಿದೆ.
ಈ ಸಂದರ್ಭದಲ್ಲಿ ಅಡಿಕೆ ಟಾಸ್ ಪೋರ್ಸ್ ಅಧ್ಯಕ್ಷ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ, ತೋಟಗಾರಿಕೆ ಸಚಿವ ಮುನಿರತ್ನ , ಮೀನುಗಾರಿಕೆ ಸಚಿವ ಎಸ್.ಅಂಗಾರ , ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲೆ ಚುಕ್ಕಿ ರೋಗದಿಂದಾಗಿ ಮಲೆನಾಡು, ಕರಾವಳಿಯ ಜಿಲ್ಲೆಗಳ ಅಡಿಕೆ ತೋಟಗಳಲ್ಲಿ ಮರಗಳಿಗೆ ಹಾನಿಯಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಆತಂಕಗೊಂಡಿದ್ದಾರೆ. ಈ ವರ್ಷ ಮಳೆಯೂ ಹೆಚ್ಚಾಗಿದ್ದು, ಕೊಳೆ ರೋಗ ಸಹ ಅಡಿಕೆಯನ್ನು ಕಾಡುತ್ತಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

6 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

10 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

18 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

18 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

20 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago