Advertisement
ಸುದ್ದಿಗಳು

#Arecanut | ಅಡಿಕೆ ಎಲೆ ಚುಕ್ಕಿ ರೋಗದ ಸಮಸ್ಯೆ | ಸಚಿವರ ನೇತೃತ್ವದಲ್ಲಿ ಸಭೆ |

Share
ಮಲೆನಾಡು ಹಾಗೂ ಕರಾವಳಿ ಭಾಗದ ಕಡೆಗಳಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗದ ಸಮಸ್ಯೆ ಕಂಡುಬಂದಿದ್ದು, ಇದರಿಂದಾಗಿ ರೈತರಿಗೆ ಹಲವು ಸಂಕಷ್ಟ ಎದುರಾಗಿದೆ. ಈ ವಿಚಾರದ ಬಗ್ಗೆ ಶುಕ್ರವಾರ ಸಚಿವರ ಜೊತೆಗೆ ಸಭೆ ನಡೆಯಿತು.
ಎಲೆಚುಕ್ಕಿ ರೋಗದಿಂದ ಉಂಟಾದ ಸಮಸ್ಯೆ ಹಾಗೂ ನಷ್ಟದ ಬಗ್ಗೆ ಸಮೀಕ್ಷೆ ನಡೆಸುವುದು ಹಾಗೆ ಅಡಿಕೆ ಬೆಳೆಗಾರರಿಗೆ ಉಚಿತ ಔಷಧ, ದೋಟಿ ನೀಡಲಾಗುವುದು. ಅಡಿಕೆಗೆ ಪರ್ಯಾಯವಾಗಿ ಇಲಾಖೆ ಗುರುತಿಸಿರುವ ಬೆಳೆಯನ್ನು ಬೆಳೆಯಲು ಅವಕಾಶ ಹಾಗೂ ರಿಯಾಯಿತಿ ಕಲ್ಪಿಸಿ , ನಿರ್ಧಾರ ರೈತರು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಸರ್ಕಾರದಿಂದ ಯಾವ ರೀತಿಯಲ್ಲಿ ಅಡಿಕೆ ಬೆಳೆಗಾರರಿಗೆ ನೆರವು ಕಲ್ಪಿಸಬಹುದೆನ್ನುವ ಬಗ್ಗೆಯೂ ಸಿಎಂ ಜೊತೆ ಚರ್ಚಿಸಲು ನಿರ್ಧರಿಸಲಾಗಿದೆ.
ಈ ಸಂದರ್ಭದಲ್ಲಿ ಅಡಿಕೆ ಟಾಸ್ ಪೋರ್ಸ್ ಅಧ್ಯಕ್ಷ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ, ತೋಟಗಾರಿಕೆ ಸಚಿವ ಮುನಿರತ್ನ , ಮೀನುಗಾರಿಕೆ ಸಚಿವ ಎಸ್.ಅಂಗಾರ , ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲೆ ಚುಕ್ಕಿ ರೋಗದಿಂದಾಗಿ ಮಲೆನಾಡು, ಕರಾವಳಿಯ ಜಿಲ್ಲೆಗಳ ಅಡಿಕೆ ತೋಟಗಳಲ್ಲಿ ಮರಗಳಿಗೆ ಹಾನಿಯಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಆತಂಕಗೊಂಡಿದ್ದಾರೆ. ಈ ವರ್ಷ ಮಳೆಯೂ ಹೆಚ್ಚಾಗಿದ್ದು, ಕೊಳೆ ರೋಗ ಸಹ ಅಡಿಕೆಯನ್ನು ಕಾಡುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

44 minutes ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

2 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

4 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

10 hours ago