MIRROR FOCUS

ಅಡಿಕೆ ಎಲೆಚುಕ್ಕಿ ರೋಗ-ಹಳದಿ ಎಲೆ ರೋಗ | ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….! | ಹಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೃಷಿ ಸಚಿವರು ಹೇಳಿದ್ದು ಏನು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಭಾನುವಾರ ಭೇಟಿ ನೀಡಿ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದರು. ಅದಾದ ಬಳಿಕ ಮಾಧ್ಯಮ ಪ್ರನಿಧಿಗಳೊಂದಿಗೆ ಮಾತನಾಡಿ, ಅಡಿಕೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಶಿವಮೊಗ್ಗ, ದಕ್ಷಿಣಕನ್ನಡ ಹಾಗೂ ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ  ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಈ ರೋಗಗಳಿಂದ ಈ ಭಾಗದ ರೈತರು ಸಮಸ್ಯೆಗೆ ಒಳಗಾಗಿದ್ದಾರೆ, ಆದ್ದರಿಂದ ಈ ರೋಗ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಕಾಂಗ್ರೆಸ್‌ ಸರ್ಕಾರ ಅನೇಕ ವಿನೂತನ ಯೋಜನೆಗಳನ್ನು ರೈತರಿಗಾಗಿ ಜಾರಿ ಮಾಡಿದೆ. ರೈತರ ಹಿತಕ್ಕಾಗಿ ಇನ್ನಷ್ಟು ವಿಶೇಷ ಯೋಜನೆಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂಬುದಾಗಿ ಗುರುತಿಸಲಾಗಿದೆ. ಹೆಚ್ಚುವರಿಯಾಗಿ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗುತ್ತದೆ. ಈ ತಾಲೂಕುಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗುವುದು.ಈಗಾಗಲೇ ರಾಜ್ಯದ 90% ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.ಇನ್ನು ಕೇವಲ 20 ತಾಲೂಕುಗಳನ್ನು ಮಾತ್ರ ಬರ ಪೀಡಿತ ಎಂದು ಘೋಷಿಸಲಾಗಿಲ್ಲ.ಅಲ್ಲೂ ಬರದ ಛಾಯೆ ಇದೆ ಎಂದು ತಿಳಿದು ಬಂದಲ್ಲಿ ಮುಂದಿನ ಹಂತದಲ್ಲಿ ಈ ತಾಲೂಕುಗಳನ್ನು ಕೂಡಾ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗುತ್ತದೆ ಎಂದರು.

ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….!

ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ. ಇನ್ನೂ ಕೂಡಾ ಈ  ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡುವುದು ನಿಲ್ಲಲೂ ಇಲ್ಲ, ಅಧ್ಯಯನ ವರದಿ ಪ್ರಕಟವೂ ಆಗಿಲ್ಲ…!. ಈ ಹಿಂದಿನ ಸರ್ಕಾರವೂ ಇದೇ ಹೇಳಿಕೆ ನೀಡಿತ್ತು. ಸುಳ್ಯಕ್ಕೆ ಅಂದಿನ ಕೃಷಿ ಸಚಿವರು ಭೇಟಿ ನೀಡಿದಾಗಲೂ ಇದೇ ಹೇಳಿಕೆ ನೀಡಿದ್ದರು. ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಇದುವರೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಆಗಿರುವ ಬೆಳವಣಿಗೆಗಳು ಹಾಗಿದ್ದರೆ ಏನು ಎಂಬುದು ಪ್ರಶ್ನೆಯಾಗಿದೆ.

ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದ್ದ ತೋಟಗಾರಿಕಾ ಸಚಿವರು ಅಡಿಕೆ ಸೋಗೆಯನ್ನು ಇಸ್ರೇಲ್‌ ಕಳುಹಿಸಲಾಗುವುದು ಎಂದಿದ್ದರು. ಅದಾದ ಬಳಿಕ ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದ ಅಧ್ಯಯನಕ್ಕೆ ತಂಡ ರಚನೆಯಾಗಿ ಸುಳ್ಯ, ಶೃಂಗೇರಿ, ಶಿವಮೊಗ್ಗ ಸೇರಿದಂತೆ ವಿವಿಧ ಕಡೆಗೆ ವಿಜ್ಞಾನಿಗಳ ತಂಡ ಭೇಟಿಯೂ ನೀಡಿತ್ತು. ಅದಾದ ಬಳಿಕ ಆ ಸಮಿತಿ ವರದಿಯನ್ನು ಇದುವರೆಗೂ ನೀಡಿಲ್ಲವೇ ಅಥವಾ ಇನ್ನೊಂದು ಹೊಸ ಸಮಿತಿ ರಚನೆಯಾಗಿದೆಯೆ..? . ಈ ಸರ್ಕಾರಗಳು ರೈತರನ್ನು ಸಮಾಧಾನ ಪಡಿಸುತ್ತಿದೆಯೇ, ನಿಜಕ್ಕೂ ಕಾಳಜಿಯಿಂದ ಕೆಲಸ ಮಾಡುತ್ತಿದೆಯೇ…?

An expert committee has been appointed to study Arecanut leaf spot disease and yellow leaf disease. Agriculture Minister Cheluvarayaswamy said that action will be taken as soon as the report is received.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

7 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

15 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

16 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 days ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago