Advertisement
MIRROR FOCUS

ಅಡಿಕೆ ಎಲೆಚುಕ್ಕಿ ರೋಗ-ಹಳದಿ ಎಲೆ ರೋಗ | ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….! | ಹಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೃಷಿ ಸಚಿವರು ಹೇಳಿದ್ದು ಏನು ?

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಭಾನುವಾರ ಭೇಟಿ ನೀಡಿ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದರು. ಅದಾದ ಬಳಿಕ ಮಾಧ್ಯಮ ಪ್ರನಿಧಿಗಳೊಂದಿಗೆ ಮಾತನಾಡಿ, ಅಡಿಕೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಶಿವಮೊಗ್ಗ, ದಕ್ಷಿಣಕನ್ನಡ ಹಾಗೂ ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ  ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಈ ರೋಗಗಳಿಂದ ಈ ಭಾಗದ ರೈತರು ಸಮಸ್ಯೆಗೆ ಒಳಗಾಗಿದ್ದಾರೆ, ಆದ್ದರಿಂದ ಈ ರೋಗ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಕಾಂಗ್ರೆಸ್‌ ಸರ್ಕಾರ ಅನೇಕ ವಿನೂತನ ಯೋಜನೆಗಳನ್ನು ರೈತರಿಗಾಗಿ ಜಾರಿ ಮಾಡಿದೆ. ರೈತರ ಹಿತಕ್ಕಾಗಿ ಇನ್ನಷ್ಟು ವಿಶೇಷ ಯೋಜನೆಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂಬುದಾಗಿ ಗುರುತಿಸಲಾಗಿದೆ. ಹೆಚ್ಚುವರಿಯಾಗಿ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗುತ್ತದೆ. ಈ ತಾಲೂಕುಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗುವುದು.ಈಗಾಗಲೇ ರಾಜ್ಯದ 90% ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.ಇನ್ನು ಕೇವಲ 20 ತಾಲೂಕುಗಳನ್ನು ಮಾತ್ರ ಬರ ಪೀಡಿತ ಎಂದು ಘೋಷಿಸಲಾಗಿಲ್ಲ.ಅಲ್ಲೂ ಬರದ ಛಾಯೆ ಇದೆ ಎಂದು ತಿಳಿದು ಬಂದಲ್ಲಿ ಮುಂದಿನ ಹಂತದಲ್ಲಿ ಈ ತಾಲೂಕುಗಳನ್ನು ಕೂಡಾ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗುತ್ತದೆ ಎಂದರು.

ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….!

ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ. ಇನ್ನೂ ಕೂಡಾ ಈ  ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡುವುದು ನಿಲ್ಲಲೂ ಇಲ್ಲ, ಅಧ್ಯಯನ ವರದಿ ಪ್ರಕಟವೂ ಆಗಿಲ್ಲ…!. ಈ ಹಿಂದಿನ ಸರ್ಕಾರವೂ ಇದೇ ಹೇಳಿಕೆ ನೀಡಿತ್ತು. ಸುಳ್ಯಕ್ಕೆ ಅಂದಿನ ಕೃಷಿ ಸಚಿವರು ಭೇಟಿ ನೀಡಿದಾಗಲೂ ಇದೇ ಹೇಳಿಕೆ ನೀಡಿದ್ದರು. ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಇದುವರೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಆಗಿರುವ ಬೆಳವಣಿಗೆಗಳು ಹಾಗಿದ್ದರೆ ಏನು ಎಂಬುದು ಪ್ರಶ್ನೆಯಾಗಿದೆ.

ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದ್ದ ತೋಟಗಾರಿಕಾ ಸಚಿವರು ಅಡಿಕೆ ಸೋಗೆಯನ್ನು ಇಸ್ರೇಲ್‌ ಕಳುಹಿಸಲಾಗುವುದು ಎಂದಿದ್ದರು. ಅದಾದ ಬಳಿಕ ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದ ಅಧ್ಯಯನಕ್ಕೆ ತಂಡ ರಚನೆಯಾಗಿ ಸುಳ್ಯ, ಶೃಂಗೇರಿ, ಶಿವಮೊಗ್ಗ ಸೇರಿದಂತೆ ವಿವಿಧ ಕಡೆಗೆ ವಿಜ್ಞಾನಿಗಳ ತಂಡ ಭೇಟಿಯೂ ನೀಡಿತ್ತು. ಅದಾದ ಬಳಿಕ ಆ ಸಮಿತಿ ವರದಿಯನ್ನು ಇದುವರೆಗೂ ನೀಡಿಲ್ಲವೇ ಅಥವಾ ಇನ್ನೊಂದು ಹೊಸ ಸಮಿತಿ ರಚನೆಯಾಗಿದೆಯೆ..? . ಈ ಸರ್ಕಾರಗಳು ರೈತರನ್ನು ಸಮಾಧಾನ ಪಡಿಸುತ್ತಿದೆಯೇ, ನಿಜಕ್ಕೂ ಕಾಳಜಿಯಿಂದ ಕೆಲಸ ಮಾಡುತ್ತಿದೆಯೇ…?

An expert committee has been appointed to study Arecanut leaf spot disease and yellow leaf disease. Agriculture Minister Cheluvarayaswamy said that action will be taken as soon as the report is received.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

6 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

8 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

21 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

22 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago