ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

April 6, 2026
7:32 PM
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು ತಂತ್ರಜ್ಞಾನದಿಂದ ರೈತರಿಗೆ ಭರವಸೆ ದೊರೆತಿದೆ.

ಅಡಿಕೆ ಬೆಳೆಗಾರರನ್ನು ಕಂಗಾಲಾಗಿಸಿರುವ ‘ಎಲೆ ಚುಕ್ಕಿ ರೋಗ’ದ ಸಮರ್ಪಕ ನಿರ್ವಹಣೆ ಹಾಗೂ ಸಂಶೋಧನಾ ಕ್ರಮಗಳ ಪರಿಶೀಲನೆಗಾಗಿ, ಕಾಸರಗೋಡಿನ ಕೇಂದ್ರ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು (ICAR-CPCRI) ಹಮ್ಮಿಕೊಂಡ ನಿರ್ವಹಣಾ ಕ್ರಮದ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಿ ಬಾಲಚಂದ್ರ ಹೆಬ್ಬಾರ್‌ ಹಾಗೂ ಹಿರಿಯ ವಿಜ್ಞಾನಿಗಳ ತಂಡ ಭೇಟಿ ನೀಡಿದರು.

ಕೇಂದ್ರ ಅಡಿಕೆ ಮತ್ತು ಸಂಬಾರ ಬೆಳೆ ಅಭಿವೃದ್ಧಿ ಸಂಸ್ಥೆ ತೋಟಗಾರಿಕಾ ಸಮಗ್ರ ಅಭಿವೃದ್ಧಿ ಮಿಷನ್‌ ಆರ್ಥಿಕ ನೆರವಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮದಲ್ಲಿ ವಿಟ್ಲದ ಸಿ.ಪಿ.ಸಿ.ಆರ್.ಐ ಪ್ರಾದೇಶಿಕ ಕೇಂದ್ರದ ವತಿಯಿಂದ  ಹಮ್ಮಿಕೊಳ್ಳಲಾಗಿರುವ “ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆ ಕುರಿತು ಬೃಹತ್ ಪ್ರಮಾಣದ ಪ್ರಾತ್ಯಕ್ಷಿಕೆ” (Large Scale Demonstration) ಕಾರ್ಯಕ್ರಮದ ಪ್ರಗತಿಯನ್ನು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಿ ಹೆಬ್ಬಾರ್‌ ವೀಕ್ಷಿಸಿದರು. ಈ ಸಂದರ್ಭದಲ್ಲಿ ತೋಟದಲ್ಲಿ ಅಳವಡಿಸಲಾಗಿರುವ ಹವಾಮಾನ ಮಾಪನ ಯಂತ್ರ ಹಾಗೂ ರೋಗ ಬಾಧಿತ ಮರಗಳಿಗೆ ನೀಡಲಾಗುತ್ತಿರುವ ಸಂಯೋಜಿತ ಚಿಕಿತ್ಸಾ ಕ್ರಮಗಳನ್ನು ಅವರು ಗಮನಿಸಿದರು. ಇದೇ ವೇಳೆ ತೋಟದ ಅಡಿಕೆ ಬೆಳೆಗಾರರಲ್ಲೂ ಪ್ರಗತಿಯ ಬಗ್ಗೆ ಹಿಮ್ಮಾಹಿತಿ ಪಡೆದರು.  ಪ್ರಾತ್ಯಕ್ಷಿಕೆ ಫಲಕದ ಮೂಲಕ ರೈತರಿಗೆ ರೋಗ ನಿರ್ವಹಣೆಯ ಕುರಿತು ನೀಡಲಾಗಿರುವ ಸಲಹೆಗಳನ್ನು ನಿರ್ದೇಶಕರು ಶ್ಲಾಘಿಸಿದರು.

ಮುಖ್ಯವಾಗಿ  ಮಣ್ಣು ಪರೀಕ್ಷೆಯ ಆಧಾರದ ಮೇಲೆ ಪೋಷಕಾಂಶಗಳ ನಿರ್ವಹಣೆ. ಬೋರ್ಡೋ ದ್ರಾವಣ ಮತ್ತು ಶಿಲೀಂಧ್ರನಾಶಕಗಳ ಹಂತ ಹಂತದ ಸಿಂಪಡಣೆ.  ರೋಗಗ್ರಸ್ತ ಎಲೆಗಳನ್ನು ನಾಶಪಡಿಸುವ ಮೂಲಕ ರೋಗ ಹರಡುವಿಕೆಯನ್ನು ತಡೆಗಟ್ಟುವುದು ಇವು ಮುಖ್ಯವಾದ ಅಂಶಗಲಾಗಿವೆ.

ತೋಟದಲ್ಲಿ ಅಳವಡಿಸಲಾಗಿರುವ ಸೆನ್ಸರ್ ಆಧಾರಿತ ತಂತ್ರಜ್ಞಾನಗಳು ರೋಗದ ತೀವ್ರತೆ ಮತ್ತು ಹವಾಮಾನದ ಏರಿಳಿತಗಳ ನಡುವಿನ ಸಂಬಂಧವನ್ನು ಅಧ್ಯಯನ ಮಾಡಲು ಸಹಕಾರಿಯಾಗಿದೆ . ಈ ನಿಟ್ಟಿನಲ್ಲಿ ಅಳವಡಿಸಲಾಗಿರುವ ವೆದರ್‌ ಸ್ಟೇಷನ್‌ ಮೂಲಕ ಪರಿಸರದ ಹವಾಮಾನ ಏರಿಳಿತ ಹಾಗೂ ಬದಲಾವಣೆಯನ್ನು ಅರಿಯಲು ಹಾಗೂ ತೋಟದ ಮೇಲಾಗುವ ಪರಿಣಾಮಗಳ ಅಧ್ಯಯನ ಕೂಡಾ ಸಾಧ್ಯವಾಗುತ್ತಿದೆ.

ಈ ಭೇಟಿಯ ಸಂದರ್ಭದಲ್ಲಿ ಕಾಸರಗೋಡು ಸಿ.ಪಿ.ಸಿ.ಆರ್.ಐ  ಹಿರಿಯ ವಿಜ್ಞಾನಿ ಡಾ. ವಿನಾಯಕ ಹೆಗ್ಡೆ, ವಿಟ್ಲ ಕೇಂದ್ರದ ವಿಜ್ಞಾನಿಗಳಾದ ಡಾ.ಭವಿಷ್ಯ, ಡಾ.ಥವಪ್ರಕಾಶ್‌ ಪಾಂಡ್ಯ ಹಾಗೂ ಪ್ರಾಜೆಕ್ಟ್‌ ಸಹಾಯಕರುಗಳಾದ ಅಖಿಲ ಹಾಗೂ ಹಿತಶ್ರೀ ಕೃಷಿಕರಾದ ರಮೇಶ್‌ ದೇಲಂಪಾಡಿ , ಅರುಣ್‌ ಕುಮಾರ್‌ ಕಾಂಚೋಡು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಇದ್ದರು. ಪ್ರಾತ್ಯಕ್ಷಿಕೆ ತೋಟದ ಕೃಷಿಕರಾದ ಸುಬ್ರಹ್ಮಣ್ಯ ಪ್ರಸಾದ್‌, ಗಿರೀಶ್‌ ಗೌಡ ನಡುಗಲ್ಲು, ಕುಮಾರಸ್ವಾಮಿ ಮೇಲ್ತೋಟ, ಚಂದ್ರಶೇಖರ  ಭಟ್‌, ತಿರುಮಲೇಶ್ವರ ಭಟ್‌ ಚಣಿಲ ಅವರ ತೋಟಕ್ಕೆ ಭೇಟಿ ನೀಡಿದರು.

ವಿಜ್ಞಾನಿಗಳ ತಂಡವು ರೈತರೊಂದಿಗೆ ಸಂವಾದ ನಡೆಸಿ, ರೋಗ ನಿಯಂತ್ರಣಕ್ಕೆ ಸಂಶೋಧನಾ ಸಂಸ್ಥೆಯು ಸಂಪೂರ್ಣ ಸಹಕಾರ ನೀಡಲಿದೆ ಎಂಬ ಭರವಸೆಯನ್ನು ನೀಡಿತು.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೈಜ್ಞಾನಿಕ ಮಾಪನ :  ಪ್ರಾತ್ಯಕ್ಷಿಕೆ ತೋಟಗಳಲ್ಲಿ ಪ್ರತಿ ಸಿಂಪರಣೆಯ ಮೊದಲು ರೋಗದ ತೀವ್ರತೆಯನ್ನು ವೈಜ್ಞಾನಿಕವಾಗಿ ಅಳೆಯಲಾಗುತ್ತದೆ. ಎಲೆಗಳಲ್ಲಿ ಕಾಣುವ ಹಳದಿ ಚುಕ್ಕಿಗಳ ಸಂಖ್ಯೆಗೆ ಅಂಕ ನೀಡಲಾಗುತ್ತದೆ. ಮುಂದಿನ ವರ್ಷ ಅದೇ ಮರದಲ್ಲಿ ಮರುಮೌಲ್ಯಮಾಪನ ಮಾಡಲಾಗುತ್ತದೆಈ ಅಂಕಿಅಂಶಗಳನ್ನು ಹೋಲಿಸಿ ರೋಗ ಇಳಿಮುಖವಾಗಿದೆಯೇ ಎಂಬುದನ್ನು ನಿರ್ಧರಿಸಲಾಗುತ್ತದೆ. ಕನಿಷ್ಠ ಮೂರು ವರ್ಷಗಳ ಪರಿಶೀಲನೆಯ ಬಳಿಕವೇ ಅಂತಿಮ ವೈಜ್ಞಾನಿಕ ಅಭಿಪ್ರಾಯ ನೀಡಲಾಗುತ್ತದೆ. ಇಂದು ಎಲೆಚುಕ್ಕಿ ರೋಗದ ವಿರುದ್ಧ “ತಕ್ಷಣದ ಪರಿಹಾರ” ಎಂಬ ಭ್ರಮೆ ಹೆಚ್ಚುತ್ತಿದೆ, ಇದು ಸಾಧ್ಯವಿಲ್ಲ. ವೈಜ್ಞಾನಿಕವಾಗಿ ಪರಿಶೀಲಿತ ವಿಧಾನಗಳ ಅಗತ್ಯ ತೀವ್ರವಾಗಿದೆ.

ನಿರ್ದೇಶಕರ ಪರಿಶೀಲನೆ ಮತ್ತು ಸಂದೇಶ : ಈ ಯೋಜನೆಯ ಅನುಷ್ಠಾನವನ್ನು ವೀಕ್ಷಿಸಿದ ಸಿಪಿಸಿಆರ್‌ಐ ನಿರ್ದೇಶಕ ಬಾಲಚಂದ್ರ ಹೆಬ್ಬಾರ್‌ ಅವರು ರೈತರೊಂದಿಗೆ ಚರ್ಚೆ ನಡೆಸಿ ಕೆಲವು ಅಂಶಗಳನ್ನು ಸ್ಪಷ್ಟಪಡಿಸಿದರು. ಯಾವುದೇ ಔಷಧಿ ಉತ್ತಮ ಎಂದು ಹೇಳುವ ಅಥವಾ ಸಲಹೆ ನೀಡುವ ಮೊದಲು, ಹೇಳಿಕೆ ನೀಡುವ ಮೊದಲು ವೈಜ್ಞಾನಿಕ ಆಧಾರ ಅಗತ್ಯ,  ಕೇವಲ ಶಿಲೀಂಧ್ರನಾಶಕಗಳ ಮೇಲೆ ಅವಲಂಬನೆ ಸರಿಯಲ್ಲ, ಮಣ್ಣಿನ ಆರೋಗ್ಯ ಸುಧಾರಣೆ ಕೂಡಾ ಅತ್ಯಗತ್ಯ ಅಷ್ಟೇ ಅಲ್ಲ ತೋಟದಲ್ಲಿ ಸರಿಯಾದ ಅಂತರವೂ ಇರಬೇಕು ಎಂದರು.

ಮಳೆಗಾಲದಲ್ಲಿ ಪ್ರಮುಖ ಕ್ರಮಗಳು :  ಎಲೆಚುಕ್ಕಿ ರೋಗ ಇರುವ ತೋಟಗಳಲ್ಲಿ ಕೊಳೆರೋಗ ಸಿಂಪರಣೆಯ ವೇಳೆ ಎಲೆಗಳಿಗೂ ಔಷಧ ಸಿಂಪಡಣೆ ಅಗತ್ಯವಿದೆ,  ಕನಿಷ್ಠ ಕೊನೆಯ ಎರಡು ಸಿಂಪರಣೆಯಲ್ಲಿ ಬೋರ್ಡೋ ಮಿಶ್ರಣ ಬಳಕೆ ಮಾಡಬೇಕು. ಇವು ಎಲೆಚುಕ್ಕಿ ರೋಗ ನಿಯಂತ್ರಣ ಹಾಗೂ ಸುಳಿ ಕೊಳೆ ರೋಗ ನಿಯಂತ್ರಣ ಎರಡಕ್ಕೂ ಸಹಾಯಕವಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

CPCRI Director Dr. K. B. Balachandra Hebbar and a team of scientists inspected large-scale demonstration plots in Dakshina Kannada to evaluate integrated management of arecanut leaf spot disease. The initiative combines scientific treatments, nutrient management, and sensor-based weather monitoring to effectively control the disease and support farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror