Advertisement
The Rural Mirror ವಾರದ ವಿಶೇಷ

ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ ? | ಕೃಷಿಕರು ಏನು ಮಾಡಬೇಕು ? | ಪರಿಹಾರ ಹೇಗೆ ? | ಗುತ್ತಿಗಾರಿನಲ್ಲಿ ವಿವರಿಸಿದ್ದಾರೆ ವಿಜ್ಞಾನಿ ಡಾ.ಭವಿಷ್ಯ |

Share

ಅಡಿಕೆ ಎಲೆಚುಕ್ಕಿ ರೋಗ(Arecanut Leaf Spot) ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ನಡೆಯಿತು. ನೂರಾರು ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಿಪಿಸಿಐಆರ್‌ ವಿಜ್ಞಾನಿ ಡಾ.ಭವಿಷ್ಯ ಅವರು ಸಮಗ್ರ ಮಾಹಿತಿ ನೀಡಿದರು. ಅವರು ಮಾತನಾಡಿರುವ ಸಂಪೂರ್ಣ ಆಡಿಯೋ ಇಲ್ಲಿದೆ……

Advertisement
Advertisement
Advertisement

ಎಲೆ ಚುಕ್ಕಿ ರೋಗದಲ್ಲಿ ಚುಕ್ಕಿ ಮಾತ್ರಾ ಆದರೆ ಸಮಸ್ಯೆ ಇಲ್ಲ, ಆದರೆ ಚುಕ್ಕಿ ಬೆಸೆದುಕೊಂಡರೆ ಸಮಸ್ಯೆಯಾಗುತ್ತದೆ ಎಂದು ಮಾಹಿತಿ ವಿವರಿಸಿದ ಡಾ.ಭವಿಷ್ಯ ಅವರು ರಾಜ್ಯದ 5 ಜಿಲ್ಲೆಗಳಲ್ಲಿ ಸದ್ಯ ಎಲೆಚುಕ್ಕಿ ರೋಗ ಹರಡಿಕೊಂಡಿದೆ. ಅದರಲ್ಲಿ ದ ಕ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಸದ್ಯ ಇದೆ. ಶೃಂಗೇರಿ ಭಾಗದಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗಕ್ಕೂ ಸುಳ್ಯದಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗ ಒಂದೇ ಆದರೂ ಪ್ರಭಾವದಲ್ಲಿ ವ್ಯತ್ಯಾಸ ಇದೆ. ಎಲೆಚುಕ್ಕಿ ರೋಗಕ್ಕೆ ಕಾರಣವಾಗುವ ಶಿಲೀಂದ್ರಕ್ಕೆ ಪೂರಕ ವಾತಾವರಣ ಬಂದಾಗ ಹರಡಿಕೊಳ್ಳುತ್ತದೆ. ಹೀಗಾಗಿ ಹವಾಮಾನವೂ ಒಂದು ಪ್ರಮುಖ ಕಾರಣವಾಗುತ್ತದೆ ಎಂದರು.

Advertisement

 

Advertisement

ಸಾಮಾನ್ಯವಾಗಿ 18-24 ಡಿಗ್ರಿಯ ವಾತಾವರಣದ ಉಷ್ಣತೆಯಲ್ಲಿ ಹೆಚ್ಚು ವಿಸ್ತರಣೆಯಾಗುವ ಈ ಶಿಲೀಂದ್ರವು ಮಳೆಗಾಲದಲ್ಲಿ ಹೆಚ್ಚು ವಿಸ್ತರಣೆಯಾಗುತ್ತದೆ. ಮಳೆ ಹಾಗೂ ಬಿಸಿಲು ಈ ಶಿಲೀಂದ್ರ ಅಭಿವೃದ್ಧಿಗೆ ಪೂರಕವಾಗಿದೆ.  ಎರಡು ವರ್ಷಗಳ ಹಿಂದೆಯೇ ಸುಳ್ಯದ ಕೆಲವು ಕಡೆ ಈ ರೋಗ ಕಂಡುಬಂದಿದ್ದರೂ ಈ ವರ್ಷ ವಿಪರೀತವಾಗಿದೆ.  ಇದಕ್ಕೆ ಸಾಮೂಹಿಕ ಮಟ್ಟದಲ್ಲಿ ರೋಗ ನಿರ್ವಹಣೆಯ ಅಗತ್ಯವಿದೆ ಎಂದರು.

ಇದರ ಜೊತೆಗೆ ಅಡಿಕೆ ಮರಗಳಿಗೆ ನೀಡುವ ಪೋಷಕಾಂಶಗಳ ನಿರ್ವಹಣೆಯೂ ಅಗತ್ಯ ಇದ್ದು, ಅಸಮತೋಲನ ಗೊಬ್ಬರ ಬಳಕೆಯೂ ಈ ರೋಗ ವಿಸ್ತರಣೆ ಹಾಗೂ ಹರಡುವುದಕ್ಕೆ ಕಾರಣವಾಗುತ್ತದೆ.ಹೀಗಾಗಿ ರೋಗ ನಿರ್ವಹಣೆಯ ಜೊತೆಗೆ ಲಘು ಪೋಷಕಾಂಶ ಸೂಕ್ತ ಬಳಕೆಯೂ ಅಗತ್ಯವಿದೆ ಎಂದರು. ಈ ರೋಗದಲ್ಲಿ ಔಷಧಿ ಸಿಂಪಡಣೆಯೇ ಪರಿಹಾರ ಅಲ್ಲ,‌ ಪೋಷಕಾಂಶಗಳ ಸೂಕ್ತ ಬಳಕೆಯೂ ಅಗತ್ಯವಿದೆ. ರೋಗದ ಗಂಭೀರತೆ ಗಮನಿಸಿ ಅದಕ್ಕೆ ಅನುಗುಣವಾಗಿ  ಔಷಧಿ ಸಿಂಪಡಣೆ ಅಗತ್ಯವಿದೆ. ಸೆಪ್ಟೆಂಬರ್ ಅವಧಿಗೆ ಔಷಧಿ ಸಿಂಪಡಣೆ ಮಾಡುವುದು ಉತ್ತಮ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

20 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago