Advertisement
The Rural Mirror ವಾರದ ವಿಶೇಷ

ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ ? | ಕೃಷಿಕರು ಏನು ಮಾಡಬೇಕು ? | ಪರಿಹಾರ ಹೇಗೆ ? | ಗುತ್ತಿಗಾರಿನಲ್ಲಿ ವಿವರಿಸಿದ್ದಾರೆ ವಿಜ್ಞಾನಿ ಡಾ.ಭವಿಷ್ಯ |

Share

ಅಡಿಕೆ ಎಲೆಚುಕ್ಕಿ ರೋಗ(Arecanut Leaf Spot) ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ನಡೆಯಿತು. ನೂರಾರು ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಿಪಿಸಿಐಆರ್‌ ವಿಜ್ಞಾನಿ ಡಾ.ಭವಿಷ್ಯ ಅವರು ಸಮಗ್ರ ಮಾಹಿತಿ ನೀಡಿದರು. ಅವರು ಮಾತನಾಡಿರುವ ಸಂಪೂರ್ಣ ಆಡಿಯೋ ಇಲ್ಲಿದೆ……

Advertisement

ಎಲೆ ಚುಕ್ಕಿ ರೋಗದಲ್ಲಿ ಚುಕ್ಕಿ ಮಾತ್ರಾ ಆದರೆ ಸಮಸ್ಯೆ ಇಲ್ಲ, ಆದರೆ ಚುಕ್ಕಿ ಬೆಸೆದುಕೊಂಡರೆ ಸಮಸ್ಯೆಯಾಗುತ್ತದೆ ಎಂದು ಮಾಹಿತಿ ವಿವರಿಸಿದ ಡಾ.ಭವಿಷ್ಯ ಅವರು ರಾಜ್ಯದ 5 ಜಿಲ್ಲೆಗಳಲ್ಲಿ ಸದ್ಯ ಎಲೆಚುಕ್ಕಿ ರೋಗ ಹರಡಿಕೊಂಡಿದೆ. ಅದರಲ್ಲಿ ದ ಕ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಸದ್ಯ ಇದೆ. ಶೃಂಗೇರಿ ಭಾಗದಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗಕ್ಕೂ ಸುಳ್ಯದಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗ ಒಂದೇ ಆದರೂ ಪ್ರಭಾವದಲ್ಲಿ ವ್ಯತ್ಯಾಸ ಇದೆ. ಎಲೆಚುಕ್ಕಿ ರೋಗಕ್ಕೆ ಕಾರಣವಾಗುವ ಶಿಲೀಂದ್ರಕ್ಕೆ ಪೂರಕ ವಾತಾವರಣ ಬಂದಾಗ ಹರಡಿಕೊಳ್ಳುತ್ತದೆ. ಹೀಗಾಗಿ ಹವಾಮಾನವೂ ಒಂದು ಪ್ರಮುಖ ಕಾರಣವಾಗುತ್ತದೆ ಎಂದರು.

 

ಸಾಮಾನ್ಯವಾಗಿ 18-24 ಡಿಗ್ರಿಯ ವಾತಾವರಣದ ಉಷ್ಣತೆಯಲ್ಲಿ ಹೆಚ್ಚು ವಿಸ್ತರಣೆಯಾಗುವ ಈ ಶಿಲೀಂದ್ರವು ಮಳೆಗಾಲದಲ್ಲಿ ಹೆಚ್ಚು ವಿಸ್ತರಣೆಯಾಗುತ್ತದೆ. ಮಳೆ ಹಾಗೂ ಬಿಸಿಲು ಈ ಶಿಲೀಂದ್ರ ಅಭಿವೃದ್ಧಿಗೆ ಪೂರಕವಾಗಿದೆ.  ಎರಡು ವರ್ಷಗಳ ಹಿಂದೆಯೇ ಸುಳ್ಯದ ಕೆಲವು ಕಡೆ ಈ ರೋಗ ಕಂಡುಬಂದಿದ್ದರೂ ಈ ವರ್ಷ ವಿಪರೀತವಾಗಿದೆ.  ಇದಕ್ಕೆ ಸಾಮೂಹಿಕ ಮಟ್ಟದಲ್ಲಿ ರೋಗ ನಿರ್ವಹಣೆಯ ಅಗತ್ಯವಿದೆ ಎಂದರು.

ಇದರ ಜೊತೆಗೆ ಅಡಿಕೆ ಮರಗಳಿಗೆ ನೀಡುವ ಪೋಷಕಾಂಶಗಳ ನಿರ್ವಹಣೆಯೂ ಅಗತ್ಯ ಇದ್ದು, ಅಸಮತೋಲನ ಗೊಬ್ಬರ ಬಳಕೆಯೂ ಈ ರೋಗ ವಿಸ್ತರಣೆ ಹಾಗೂ ಹರಡುವುದಕ್ಕೆ ಕಾರಣವಾಗುತ್ತದೆ.ಹೀಗಾಗಿ ರೋಗ ನಿರ್ವಹಣೆಯ ಜೊತೆಗೆ ಲಘು ಪೋಷಕಾಂಶ ಸೂಕ್ತ ಬಳಕೆಯೂ ಅಗತ್ಯವಿದೆ ಎಂದರು. ಈ ರೋಗದಲ್ಲಿ ಔಷಧಿ ಸಿಂಪಡಣೆಯೇ ಪರಿಹಾರ ಅಲ್ಲ,‌ ಪೋಷಕಾಂಶಗಳ ಸೂಕ್ತ ಬಳಕೆಯೂ ಅಗತ್ಯವಿದೆ. ರೋಗದ ಗಂಭೀರತೆ ಗಮನಿಸಿ ಅದಕ್ಕೆ ಅನುಗುಣವಾಗಿ  ಔಷಧಿ ಸಿಂಪಡಣೆ ಅಗತ್ಯವಿದೆ. ಸೆಪ್ಟೆಂಬರ್ ಅವಧಿಗೆ ಔಷಧಿ ಸಿಂಪಡಣೆ ಮಾಡುವುದು ಉತ್ತಮ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

7 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

14 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

14 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

15 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago