ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

April 29, 2026
10:05 PM
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ ಸಹಭಾಗಿತ್ವದೊಂದಿಗೆ ಕ್ರಿಯಾ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಸಂಸದರು ಹೇಳಿದರು.

ಅಡಿಕೆ ಮರಗಳಿಗೆ ತಗುಲುತ್ತಿರುವ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತ  ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ.ಬೃಜೇಶ್‌ ಚೌಟ, ಅಡಿಕೆ ಬೆಳೆಯ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲು ಸಮಾಲೋಚನಾ ಸಭೆ ನಡೆಸಲಾಗುವುದು ಎಂದು ಹೇಳಿದರು.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ICAR-CPCRI ಮತ್ತು ಸ್ಥಳೀಯ ಸಹಕಾರಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಡಿಕೆ ಬೆಳೆಗೆ ಎದುರಾಗಿರುವ ವಿವಿಧ ರೋಗಗಳು, ಮಾರುಕಟ್ಟೆ ಸಮಸ್ಯೆಗಳು ಸೇರಿದಂತೆ ಹಲವು ಸವಾಲುಗಳನ್ನು ಸಮಗ್ರವಾಗಿ ಚರ್ಚಿಸುವ ಅಗತ್ಯವಿದೆ. ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಡಿಕೆ ಬೆಳೆಯುವ ಪ್ರದೇಶದ ಶಾಸಕರನ್ನು ಸೇರಿಸಿಕೊಂಡು ಸಮಾಲೋಚನಾ ಸಭೆ ನಡೆಸಲಾಗುವುದು ಎಂದರು.

ಅಡಿಕೆ ರೋಗ ನಿಯಂತ್ರಣಕ್ಕಾಗಿ ಈಗಾಗಲೇ ವಿಜ್ಞಾನಿಗಳು ನಡೆಸಿರುವ ಪ್ರಾತ್ಯಕ್ಷಿಕೆ ತೋಟಗಳ ಫಲಿತಾಂಶ ಆಧರಿಸಿ ಕ್ರಿಯಾ ಯೋಜನೆ ರೂಪಿಸಬೇಕಿದೆ. ಇದಕ್ಕಾಗಿ ಸಮುದಾಯದ ಸಹಭಾಗಿತ್ವ ಅತ್ಯಂತ ಮುಖ್ಯ ಎಂದು ಅವರು ಹೇಳಿದರು. ಜಿಲ್ಲೆಯ ಮಟ್ಟದಲ್ಲಿ ಶಾಸಕರೊಂದಿಗೆ ವಿಶೇಷ ಸಭೆ ನಡೆಸುವ ಉದ್ದೇಶ ಇದೆ ಎಂದು ತಿಳಿಸಿದರು.

ಇಂದಿನ ಕೃಷಿ ಸ್ಮಾರ್ಟ್ ಆಗಬೇಕಿದ್ದು, ವಿಜ್ಞಾನಿಗಳ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ನಕಲಿ ರಾಸಾಯನಿಕಗಳ ಬಗ್ಗೆ ಕೃಷಿಕರು ಜಾಗೃತರಾಗಬೇಕು. ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಮಿಶ್ರ ಬೆಳೆಯತ್ತವೂ ಗಮನ ಹರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಿಪಿಸಿಆರ್‌ಐ ನಿರ್ದೇಶಕ ಡಾ. ಕೆ.ಬಾಲಚಂದ್ರ ಹೆಬ್ಬಾರ್ ಮಾತನಾಡಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮುದಾಯ ಮಟ್ಟದಲ್ಲಿ ಕ್ರಮಗಳನ್ನು ಅಳವಡಿಸುವುದು ಮುಖ್ಯ ಎಂದರು. ಈಗಾಗಲೇ ಮಾದರಿ ತೋಟಗಳನ್ನು ರೂಪಿಸಲಾಗಿದೆ. ಇದೇ ಮಾದರಿಯನ್ನು ಇತರ ಪ್ರದೇಶಗಳಲ್ಲಿಯೂ ಅನುಸರಿಸಿದರೆ ರೋಗ ನಿಯಂತ್ರಣ ಸಾಧ್ಯವಿದೆ ಎಂದು ಹೇಳಿದರು.

ಸಿಪಿಸಿಆರ್‌ಐ ಕಾಸರಗೋಡು ಕ್ಯೂಆರ್‌ಟಿ ಅಧ್ಯಕ್ಷ ಡಾ. ಟಿ. ಜಾನಕಿರಾಮ್ ಅವರು ಕಳೆದ ಐದು ವರ್ಷಗಳಲ್ಲಿ ಅಡಿಕೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆದಿದೆ. ಹೊಸ ತಳಿಗಳ ಅಭಿವೃದ್ಧಿಯೂ ಆಗಿದೆ. ರೈತರು, ವಿಜ್ಞಾನಿಗಳು ಮತ್ತು ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ರೋಗ ನಿಯಂತ್ರಣ ಸಾಧ್ಯ ಎಂದರು.

ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರ ಅವರು ಅಡಿಕೆ ಬೆಳೆಯು ವಿವಿಧ ರೋಗಗಳಿಂದ ಸಂಕಷ್ಟದಲ್ಲಿದ್ದು, ಎಲ್ಲರೂ ಸೇರಿ ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಸೇರಿದಂತೆ ಹಲವರು ಮಾತನಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಿಜ್ಞಾನಿ ಡಾ. ವಿನಾಯಕ ಹೆಗ್ಡೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಪ್ರಾತ್ಯಕ್ಷಿಕೆ ತೋಟದ ಕೃಷಿಕರಾದ ಸುಬ್ರಹ್ಮಣ್ಯ ಪ್ರಸಾದ್ ಚಣಿಲ ಹಾಗೂ ಗಿರೀಶ್ ಗೌಡ ನಡುಗಲ್ಲು ತಮ್ಮ ಅನುಭವ ಹಂಚಿಕೊಂಡರು.

ಕಾರ್ಯಕ್ರಮದ ಅಂಗವಾಗಿ ಚಣಿಲ ಪ್ರದೇಶದ ಪ್ರಾತ್ಯಕ್ಷಿಕೆ ತೋಟಗಳಿಗೆ ಸಂಸದ ಬೃಜೇಶ್‌ ಚೌಟ ಹಾಗೂ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡವು  ಕ್ಷೇತ್ರ ಭೇಟಿ ನಡೆಸಿದರು. ಅಡಿಕೆ ಬೆಳೆಗಾರರು ಹಾಗೂ ಪ್ರಮುಖರು ಈ ಭೇಟಿಯಲ್ಲಿ ಭಾಗವಹಿಸಿದರು.

ಎಲೆ ಚುಕ್ಕಿ ರೋಗವು ಸಾಮಾನ್ಯವಾಗಿ ಮಳೆ ಜಾಸ್ತಿಯಾಗಿ ಅದರ ತೇವಾಂಶದಿಂದ ಗಾಳಿ ಮೂಲಕ ಅಡಿಕೆ ಮರಗಳಿಗೆ ವೇಗವಾಗಿ ಹರಡುತ್ತದೆ. ಮಳೆ ಜಾಸ್ತಿ ಸೇರಿದಂತೆ ಹವಾಮಾನ ಬದಲಾವಣೆ ಕೂಡ ಎಲೆಚುಕ್ಕಿ ರೋಗ ವ್ಯಾಪಕಕ್ಕೆ ಒಂದು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪ್ರಸಾದ್‌ ಅವರ ಅಡಿಕೆ ತೋಟದಲ್ಲಿ ಅಧ್ಯಯನದ ದೃಷ್ಟಿಯಿಂದ ಅಟೋಮ್ಯೆಟಿಕ್‌ ವೆದರ್‌  ಸ್ಟೇಷನ್‌ ಕೂಡ ಅಳವಡಿಸಲಾಗಿದೆ. ಇದರಿಂದ ಎಷ್ಟು ಪ್ರಯಾಣದ ಮಳೆಯಾಗಿದೆ, ತೇವಾಂಶ, ತಾಪಮಾನ ಸೇರಿದಂತೆ ಹವಾಮಾನ ಬದಲಾವಣೆಯಿಂದ ಈ ಎಲೆಚುಕ್ಕಿ ರೋಗ ಯಾವ ರೀತಿ ಹರಡುತ್ತದೆ ಎಂಬುದರ ಅಧ್ಯಯನ ಕೂಡ ಇದರಿಂದ ಸಾಧ್ಯವಾಗಲಿದೆ.

A program on arecanut leaf spot disease management was held at Guthigaru, Sullia. MP Captain Brijesh Chowta emphasized the need for a community-based action plan to tackle arecanut diseases and market challenges. Scientists and farmers highlighted the importance of collective efforts, scientific practices, and model plantations to control the disease effectively.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror