Advertisement
MIRROR FOCUS

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

Share

ಅಡಿಕೆ ಮರಗಳಿಗೆ ತಗುಲುತ್ತಿರುವ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತ  ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ.ಬೃಜೇಶ್‌ ಚೌಟ, ಅಡಿಕೆ ಬೆಳೆಯ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲು ಸಮಾಲೋಚನಾ ಸಭೆ ನಡೆಸಲಾಗುವುದು ಎಂದು ಹೇಳಿದರು.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ICAR-CPCRI ಮತ್ತು ಸ್ಥಳೀಯ ಸಹಕಾರಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಡಿಕೆ ಬೆಳೆಗೆ ಎದುರಾಗಿರುವ ವಿವಿಧ ರೋಗಗಳು, ಮಾರುಕಟ್ಟೆ ಸಮಸ್ಯೆಗಳು ಸೇರಿದಂತೆ ಹಲವು ಸವಾಲುಗಳನ್ನು ಸಮಗ್ರವಾಗಿ ಚರ್ಚಿಸುವ ಅಗತ್ಯವಿದೆ. ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಡಿಕೆ ಬೆಳೆಯುವ ಪ್ರದೇಶದ ಶಾಸಕರನ್ನು ಸೇರಿಸಿಕೊಂಡು ಸಮಾಲೋಚನಾ ಸಭೆ ನಡೆಸಲಾಗುವುದು ಎಂದರು.

Advertisement

ಅಡಿಕೆ ರೋಗ ನಿಯಂತ್ರಣಕ್ಕಾಗಿ ಈಗಾಗಲೇ ವಿಜ್ಞಾನಿಗಳು ನಡೆಸಿರುವ ಪ್ರಾತ್ಯಕ್ಷಿಕೆ ತೋಟಗಳ ಫಲಿತಾಂಶ ಆಧರಿಸಿ ಕ್ರಿಯಾ ಯೋಜನೆ ರೂಪಿಸಬೇಕಿದೆ. ಇದಕ್ಕಾಗಿ ಸಮುದಾಯದ ಸಹಭಾಗಿತ್ವ ಅತ್ಯಂತ ಮುಖ್ಯ ಎಂದು ಅವರು ಹೇಳಿದರು. ಜಿಲ್ಲೆಯ ಮಟ್ಟದಲ್ಲಿ ಶಾಸಕರೊಂದಿಗೆ ವಿಶೇಷ ಸಭೆ ನಡೆಸುವ ಉದ್ದೇಶ ಇದೆ ಎಂದು ತಿಳಿಸಿದರು.

Advertisement

ಇಂದಿನ ಕೃಷಿ ಸ್ಮಾರ್ಟ್ ಆಗಬೇಕಿದ್ದು, ವಿಜ್ಞಾನಿಗಳ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ನಕಲಿ ರಾಸಾಯನಿಕಗಳ ಬಗ್ಗೆ ಕೃಷಿಕರು ಜಾಗೃತರಾಗಬೇಕು. ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಮಿಶ್ರ ಬೆಳೆಯತ್ತವೂ ಗಮನ ಹರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಿಪಿಸಿಆರ್‌ಐ ನಿರ್ದೇಶಕ ಡಾ. ಕೆ.ಬಾಲಚಂದ್ರ ಹೆಬ್ಬಾರ್ ಮಾತನಾಡಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮುದಾಯ ಮಟ್ಟದಲ್ಲಿ ಕ್ರಮಗಳನ್ನು ಅಳವಡಿಸುವುದು ಮುಖ್ಯ ಎಂದರು. ಈಗಾಗಲೇ ಮಾದರಿ ತೋಟಗಳನ್ನು ರೂಪಿಸಲಾಗಿದೆ. ಇದೇ ಮಾದರಿಯನ್ನು ಇತರ ಪ್ರದೇಶಗಳಲ್ಲಿಯೂ ಅನುಸರಿಸಿದರೆ ರೋಗ ನಿಯಂತ್ರಣ ಸಾಧ್ಯವಿದೆ ಎಂದು ಹೇಳಿದರು.

ಸಿಪಿಸಿಆರ್‌ಐ ಕಾಸರಗೋಡು ಕ್ಯೂಆರ್‌ಟಿ ಅಧ್ಯಕ್ಷ ಡಾ. ಟಿ. ಜಾನಕಿರಾಮ್ ಅವರು ಕಳೆದ ಐದು ವರ್ಷಗಳಲ್ಲಿ ಅಡಿಕೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆದಿದೆ. ಹೊಸ ತಳಿಗಳ ಅಭಿವೃದ್ಧಿಯೂ ಆಗಿದೆ. ರೈತರು, ವಿಜ್ಞಾನಿಗಳು ಮತ್ತು ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ರೋಗ ನಿಯಂತ್ರಣ ಸಾಧ್ಯ ಎಂದರು.

Advertisement

ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರ ಅವರು ಅಡಿಕೆ ಬೆಳೆಯು ವಿವಿಧ ರೋಗಗಳಿಂದ ಸಂಕಷ್ಟದಲ್ಲಿದ್ದು, ಎಲ್ಲರೂ ಸೇರಿ ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಸೇರಿದಂತೆ ಹಲವರು ಮಾತನಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ವಿಜ್ಞಾನಿ ಡಾ. ವಿನಾಯಕ ಹೆಗ್ಡೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಪ್ರಾತ್ಯಕ್ಷಿಕೆ ತೋಟದ ಕೃಷಿಕರಾದ ಸುಬ್ರಹ್ಮಣ್ಯ ಪ್ರಸಾದ್ ಚಣಿಲ ಹಾಗೂ ಗಿರೀಶ್ ಗೌಡ ನಡುಗಲ್ಲು ತಮ್ಮ ಅನುಭವ ಹಂಚಿಕೊಂಡರು.

Advertisement

ಕಾರ್ಯಕ್ರಮದ ಅಂಗವಾಗಿ ಚಣಿಲ ಪ್ರದೇಶದ ಪ್ರಾತ್ಯಕ್ಷಿಕೆ ತೋಟಗಳಿಗೆ ಸಂಸದ ಬೃಜೇಶ್‌ ಚೌಟ ಹಾಗೂ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡವು  ಕ್ಷೇತ್ರ ಭೇಟಿ ನಡೆಸಿದರು. ಅಡಿಕೆ ಬೆಳೆಗಾರರು ಹಾಗೂ ಪ್ರಮುಖರು ಈ ಭೇಟಿಯಲ್ಲಿ ಭಾಗವಹಿಸಿದರು.

Advertisement

ಎಲೆ ಚುಕ್ಕಿ ರೋಗವು ಸಾಮಾನ್ಯವಾಗಿ ಮಳೆ ಜಾಸ್ತಿಯಾಗಿ ಅದರ ತೇವಾಂಶದಿಂದ ಗಾಳಿ ಮೂಲಕ ಅಡಿಕೆ ಮರಗಳಿಗೆ ವೇಗವಾಗಿ ಹರಡುತ್ತದೆ. ಮಳೆ ಜಾಸ್ತಿ ಸೇರಿದಂತೆ ಹವಾಮಾನ ಬದಲಾವಣೆ ಕೂಡ ಎಲೆಚುಕ್ಕಿ ರೋಗ ವ್ಯಾಪಕಕ್ಕೆ ಒಂದು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪ್ರಸಾದ್‌ ಅವರ ಅಡಿಕೆ ತೋಟದಲ್ಲಿ ಅಧ್ಯಯನದ ದೃಷ್ಟಿಯಿಂದ ಅಟೋಮ್ಯೆಟಿಕ್‌ ವೆದರ್‌  ಸ್ಟೇಷನ್‌ ಕೂಡ ಅಳವಡಿಸಲಾಗಿದೆ. ಇದರಿಂದ ಎಷ್ಟು ಪ್ರಯಾಣದ ಮಳೆಯಾಗಿದೆ, ತೇವಾಂಶ, ತಾಪಮಾನ ಸೇರಿದಂತೆ ಹವಾಮಾನ ಬದಲಾವಣೆಯಿಂದ ಈ ಎಲೆಚುಕ್ಕಿ ರೋಗ ಯಾವ ರೀತಿ ಹರಡುತ್ತದೆ ಎಂಬುದರ ಅಧ್ಯಯನ ಕೂಡ ಇದರಿಂದ ಸಾಧ್ಯವಾಗಲಿದೆ.

A program on arecanut leaf spot disease management was held at Guthigaru, Sullia. MP Captain Brijesh Chowta emphasized the need for a community-based action plan to tackle arecanut diseases and market challenges. Scientists and farmers highlighted the importance of collective efforts, scientific practices, and model plantations to control the disease effectively.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

4 minutes ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

4 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

7 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

11 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

12 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

20 hours ago