Advertisement
MIRROR FOCUS

ಸುಳ್ಯ ಅಡಿಕೆ ಕೃಷಿಗೆ ಎಲೆಚುಕ್ಕಿ ಸಂಕಷ್ಟ | ಬೆಳೆಸಾಲ ಮನ್ನಾ ಮಾಡಲು ಆಗ್ರಹ – ಸಮೀಕ್ಷೆಗೆ ಸಹಕರಿಸುವಂತೆ ಕೃಷಿಕರಿಗೆ ಮನವಿ

Share

ಅಡಿಕೆ ಕೃಷಿ ಪ್ರಧಾನ ತಾಲೂಕಾಗಿರುವ ಸುಳ್ಯದಲ್ಲಿ, ಇತ್ತೀಚಿನ ವರ್ಷಗಳಲ್ಲಿ ಹರಡಿರುವ ಎಲೆಚುಕ್ಕಿ ಮಹಾರೋಗ ಅಡಿಕೆ ಬೆಳೆಗಾರರ ಬದುಕನ್ನೇ ಅಲುಗಾಡಿಸಿದೆ. ತಾಲೂಕಿನ ಸುಮಾರು 80% ರೈತರು ಅಡಿಕೆ ಮೇಲೆ ಅವಲಂಬಿತರಾಗಿದ್ದು, ಫಸಲು ನಷ್ಟದ ಜೊತೆಗೆ ಅನೇಕ ಕಡೆ ಅಡಿಕೆ ತೋಟಗಳೇ ನಾಶವಾಗುತ್ತಿರುವುದು ಗಂಭೀರ ಚಿಂತೆ ಮೂಡಿಸಿದೆ.  ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ (ರಿ.) ಪುತ್ತೂರು–ಸುಳ್ಯ ತಾಲೂಕು ಅಡಿಕೆ ಬೆಳೆಗಾರ ಕೃಷಿಕರ ಘಟಕ ಇತ್ತೀಚೆಗೆ ಸಭೆ ನಡೆಸಿದ್ದು, ಅಡಿಕೆ ಬೆಳೆ ಮತ್ತು ಬೆಳೆಗಾರರು ಎದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟದ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಸುಳ್ಯ ಘಟಕದ ಸಂಚಾಲಕ ಎಂ ಡಿ ವಿಜಯಕುಮಾರ್‌ ತಿಳಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದಂತೆ ಈ ಬಾರಿ ಅಡಿಕೆ ಎಲೆಚುಕ್ಕಿ ರೋಗದಿಂದ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.  ಇದಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಅದಕ್ಕೂ ಮೊದಲು ಸುಳ್ಯ ತಾಲೂಕಿನ ಎಲೆಚುಕ್ಕಿ ರೋಗ ಭಾದಿತ ಅಡಿಕೆ ರೈತರ ಸಮೀಕ್ಷೆಯನ್ನು ಕೈಗೊಳ್ಳಲು ಸಂಘ ನಿರ್ಧರಿಸಿದೆ. ಸುಳ್ಯ ತಾಲೂಕು ಸಹಕಾರಿ ಯೂನಿಯನ್‌ ಸಹಕಾರದೊಂದಿಗೆ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಮೂಲಕ ಸಮೀಕ್ಷಾ ಅರ್ಜಿಗಳನ್ನು ವಿತರಿಸಿ ರೈತರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ಈಗಾಗಲೇ ಆರಂಭವಾಗಿದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಎಲೆಚುಕ್ಕಿ ರೋಗದಿಂದ ಬಾಧಿತರಾದ ರೈತರು, ತಮ್ಮ ವ್ಯಾಪ್ತಿಯ ಸಹಕಾರಿ ಸಂಘಗಳಲ್ಲಿ ನಿಗದಿತ ಶುಲ್ಕ ನೀಡಿ ಅರ್ಜಿಯನ್ನು ಪಡೆದು, ವಿವರಗಳನ್ನು ದಾಖಲಿಸಿ 31-01-2026ರ ಒಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಸಂಘ ಮನವಿ ಮಾಡಿದೆ. ಸಂಗ್ರಹಿಸಲಾದ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಪರಿಹಾರಕ್ಕಾಗಿ ಒತ್ತಾಯಿಸಲಾಗುವುದು. 

ಈ ಮೊದಲು ಅಡಿಕೆ ಬೆಳೆಗಾರರ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳಂತೆ, ಅಡಿಕೆ ಬೆಳೆಗಾರರು ಪಡೆದಿರುವ ಬೆಳೆಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ದೀರ್ಘಾವಧಿ ಸಾಲದ ಮೇಲಿನ ತಿಳಿ ಬಡ್ಡಿಯನ್ನು ರದ್ದುಪಡಿಸಬೇಕು, ತೀವ್ರ ನಷ್ಟದ ಹಿನ್ನಲೆಯಲ್ಲಿ ದೀರ್ಘಾವಧಿ ಸಾಲದ ಅಸಲು ಮರುಪಾವತಿಯನ್ನು ಕನಿಷ್ಠ ಎರಡು ವರ್ಷಗಳ ಕಾಲ ಸ್ಥಗಿತಗೊಳಿಸಬೇಕು ಎಂಬ ಒತ್ತಾಯದ ಹಿನ್ನಲೆಯಲ್ಲಿ ಸಂಘ ಒತ್ತಾಯಿಸಿದೆ.

ಈ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ, ವಿವಿಧ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳ ಸಹಕಾರದೊಂದಿಗೆ, ಸಂಘದ ನಿಯೋಗವು ಸಚಿವರು, ಸಂಸದರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸುವುದಾಗಿ ತೀರ್ಮಾನಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಶೂನ್ಯ ಬಡ್ಡಿಯ ಬೆಳೆಸಾಲ ಹಾಗೂ 3% ಬಡ್ಡಿಯಲ್ಲಿ ದೀರ್ಘಾವಧಿ ಸಾಲಗಳನ್ನು ನೀಡಿರುವ ರೈತಪರ ಸರ್ಕಾರ, ಇಂತಹ ಸಂಕಷ್ಟದ ಸಮಯದಲ್ಲಿ ಅಡಿಕೆ ಕೃಷಿಕರ ನೆರವಿಗೆ ನಿಲ್ಲಲಿದೆ ಎಂಬ ಪೂರ್ಣ ವಿಶ್ವಾಸ ನಮಗಿದೆ ಎಂದು ಸಂಘ ತಿಳಿಸಿದೆ. ಒಂದು ವೇಳೆ ಈ ಭರವಸೆ ಈಡೇರದಿದ್ದರೆ, ಮುಂದಿನ ದಿನಗಳಲ್ಲಿ ರೈತರು ಹೋರಾಟದ ದಾರಿ ಹಿಡಿಯುವುದು ಅನಿವಾರ್ಯ ಎಂದು ವಿಜಯ ಕುಮಾರ್‌ ತಿಳಿಸಿದ್ದಾರೆ.

ಈ ಸಂದರ್ಭ ಅಡಿಕೆ ಬೆಳೆಗಾರರ ಸಂಘದ ಸುಳ್ಯ ಘಟಕದ  ಅಧ್ಯಕ್ಷ ಜಯರಾಮ ಹಾಡಿಕಲ್ಲು, ಪ್ರಮುಖರಾದ ಮಾಧವ ಗೌಡ ಜಾಕೆ, ಹರೀಶ್‌ ಕಂಜಿಪಿಲಿ ಇದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

10 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

10 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

12 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

19 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

20 hours ago