ಅಸ್ಸಾಂ ರಾಜ್ಯದ ಹೈಲಕಂಡಿ ಪ್ರದೇಶದಲ್ಲಿ ಬರ್ಮಾದಿಂದ ಅಕ್ರಮ ಸಾಗಾಟ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಅಕ್ರಮ ಸಾಗಾಟ ಪ್ರಕರಣ ಬೇಧಿಸಿ ಒಟ್ಟು 18 ಪ್ರಕರಣ ದಾಖಲಿದ್ದು 22 ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 5 ಕೋಟಿ ಮೌಲ್ಯದ 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಬಗ್ಗೆ ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿ, 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ 24 ಗಂಟೆಗಳಲ್ಲಿ ಹೈಲಕಂಡಿ ಜಿಲ್ಲೆಯಾದ್ಯಂತ ದಾಳಿ ನಡೆಸಲಾಗಿದ್ದು, ಅಡಿಕೆಯ ಎಲ್ಲಾ ಗೋದಾಮುಗಳನ್ನು ಸೀಲ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಾಗಲೇ ಸೀಲ್ ಮಾಡಲಾಗಿರುವ ಗೋದಾಮುಗಳಲ್ಲಿ ಬರ್ಮಾ ಅಡಿಕೆ ಅಕ್ರಮವಾಗಿ ಆಮದಾಗಿ ಬಳಿಕ ಅಲ್ಲಿ ಅಡಿಕೆಯ ವಿಲೇವಾರಿ ಹಾಗೂ ಪ್ರತ್ಯೇಕಿಸುವ ಕೆಲಸ ನಡೆಯುತ್ತದೆ ಎನ್ನುವ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯಂತೆ ಎಲ್ಲಾ ರೀತಿಯ ಅಕ್ರಮ ವ್ಯಾಪಾರವನ್ನು ತಡೆಯಲು ದಾಳಿ ನಡೆಸಲಾಗುತ್ತಿದೆ ಎಂದು ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…