ಸುದ್ದಿಗಳು

ಬರ್ಮಾದಿಂದ ಅಕ್ರಮ ಅಡಿಕೆ ಆಮದು ಮತ್ತೆ ತಡೆ | 18 ಪ್ರಕರಣದಲ್ಲಿ 22 ಮಂದಿ ಬಂಧನ | 5 ಕೋಟಿ ಮೌಲ್ಯದ ಅಡಿಕೆ ವಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಸ್ಸಾಂ ರಾಜ್ಯದ ಹೈಲಕಂಡಿ ಪ್ರದೇಶದಲ್ಲಿ ಬರ್ಮಾದಿಂದ ಅಕ್ರಮ ಸಾಗಾಟ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಅಕ್ರಮ ಸಾಗಾಟ ಪ್ರಕರಣ ಬೇಧಿಸಿ ಒಟ್ಟು 18 ಪ್ರಕರಣ ದಾಖಲಿದ್ದು 22 ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 5 ಕೋಟಿ ಮೌಲ್ಯದ 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಬಗ್ಗೆ ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿ, 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ 24 ಗಂಟೆಗಳಲ್ಲಿ ಹೈಲಕಂಡಿ ಜಿಲ್ಲೆಯಾದ್ಯಂತ ದಾಳಿ ನಡೆಸಲಾಗಿದ್ದು, ಅಡಿಕೆಯ ಎಲ್ಲಾ ಗೋದಾಮುಗಳನ್ನು ಸೀಲ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಾಗಲೇ ಸೀಲ್‌ ಮಾಡಲಾಗಿರುವ ಗೋದಾಮುಗಳಲ್ಲಿ  ಬರ್ಮಾ ಅಡಿಕೆ ಅಕ್ರಮವಾಗಿ ಆಮದಾಗಿ ಬಳಿಕ ಅಲ್ಲಿ ಅಡಿಕೆಯ ವಿಲೇವಾರಿ ಹಾಗೂ ಪ್ರತ್ಯೇಕಿಸುವ ಕೆಲಸ ನಡೆಯುತ್ತದೆ ಎನ್ನುವ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಸ್ಸಾಂ ರಾಜ್ಯದ ಮುಖ್ಯಮಂತ್ರಿ  ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯಂತೆ ಎಲ್ಲಾ ರೀತಿಯ ಅಕ್ರಮ ವ್ಯಾಪಾರವನ್ನು ತಡೆಯಲು  ದಾಳಿ ನಡೆಸಲಾಗುತ್ತಿದೆ ಎಂದು ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

3 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

11 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

11 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

11 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

12 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago