ಅಸ್ಸಾಂ ರಾಜ್ಯದ ಹೈಲಕಂಡಿ ಪ್ರದೇಶದಲ್ಲಿ ಬರ್ಮಾದಿಂದ ಅಕ್ರಮ ಸಾಗಾಟ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಅಕ್ರಮ ಸಾಗಾಟ ಪ್ರಕರಣ ಬೇಧಿಸಿ ಒಟ್ಟು 18 ಪ್ರಕರಣ ದಾಖಲಿದ್ದು 22 ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 5 ಕೋಟಿ ಮೌಲ್ಯದ 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಬಗ್ಗೆ ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿ, 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ 24 ಗಂಟೆಗಳಲ್ಲಿ ಹೈಲಕಂಡಿ ಜಿಲ್ಲೆಯಾದ್ಯಂತ ದಾಳಿ ನಡೆಸಲಾಗಿದ್ದು, ಅಡಿಕೆಯ ಎಲ್ಲಾ ಗೋದಾಮುಗಳನ್ನು ಸೀಲ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಾಗಲೇ ಸೀಲ್ ಮಾಡಲಾಗಿರುವ ಗೋದಾಮುಗಳಲ್ಲಿ ಬರ್ಮಾ ಅಡಿಕೆ ಅಕ್ರಮವಾಗಿ ಆಮದಾಗಿ ಬಳಿಕ ಅಲ್ಲಿ ಅಡಿಕೆಯ ವಿಲೇವಾರಿ ಹಾಗೂ ಪ್ರತ್ಯೇಕಿಸುವ ಕೆಲಸ ನಡೆಯುತ್ತದೆ ಎನ್ನುವ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯಂತೆ ಎಲ್ಲಾ ರೀತಿಯ ಅಕ್ರಮ ವ್ಯಾಪಾರವನ್ನು ತಡೆಯಲು ದಾಳಿ ನಡೆಸಲಾಗುತ್ತಿದೆ ಎಂದು ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…