ಅಡಿಕೆ ಮಾರುಕಟ್ಟೆ ಅಸ್ಥಿರಗೊಳಿಸುವ ಸತತ ಪ್ರಯತ್ನಗಳು ವಿಫಲವಾಗುತ್ತಿದೆ. ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬರುತ್ತಿದ್ದ ಅಡಿಕೆಗೆ ನಿರಂತರ ತಡೆಯಾಗುತ್ತಿದ್ದಂತೆಯೇ ಇದೀಗ ಶ್ರೀಲಂಕಾ ಮೂಲಕ ಭಾರತದೊಳಕ್ಕೆ ಅಡಿಕೆ ಸಾಗಾಟದ ಪ್ರಯತ್ನವೂ ವಿಫಲವಾಗಿದೆ. ಶ್ರೀಲಂಕಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಮಾಹಿತಿ ಪಡೆದು 23 ಕಂಟೈನರ್ ಅಡಿಕೆ ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಇಲಾಖೆಯ ಮಾಜಿ ಸಹಾಯಕ ಅಧೀಕ್ಷಕರನ್ನುವಶಕ್ಕೆ ತೆಗೆದುಕೊಂಡಿದೆ.
ಇಂಡೋನೇಶ್ಯಾದಿಂದ ಅಡಿಕೆ ಆಮದು ಮಾಡಿ ಭಾರತಕ್ಕೆ ಮರು ರಫ್ತು ಮಾಡುವ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂಡೋನೇಶ್ಯಾದಿಂದ ಅಡಿಕೆ ಆಮದು ಮಾಡಿ ಶ್ರೀಲಂಕಾದಲ್ಲಿ ಬೆಳೆದ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡುವಂತೆ ದಾಖಲೆ ಸೃಷ್ಟಿ ಮಾಡಿ 23 ಕಂಟೈನರ್ ಅಡಿಕೆಯನ್ನು ನಕಲಿ ದಾಖಲೆ ಮೂಲಕ ಸಾಗಾಟ ಮಾಡಲು ಯತ್ನ ನಡೆದಿತ್ತು. ಇದನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಪತ್ತೆ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಅಪರಾಧ ತನಿಖಾ ವಿಭಾಗದ ವಕ್ತಾರ ಡಿಐಜಿ ಅಜಿತ್ , ಇಂಡೋನೇಶ್ಯಾದಿಂದ ಅಡಿಕೆ ತರಿಸಿ ಭಾರತಕ್ಕೆ ಮರುರಫ್ತು ಮಾಡುವ ಜಾಲ ಇದಾಗಿದೆ. ಶ್ರೀಲಂಕಾದಲ್ಲಿ ಬೆಳೆದ ಅಡಿಕೆಯಂತೆ ನಕಲಿ ದಾಖಲೆ ಸೃಷ್ಟಿ ಮಾಡಿ ಸಾಗಾಟ ಮಾಡುವ ಪ್ರಯತ್ನ ನಡೆದಿತ್ತು. ಸದ್ಯ 23 ಕಂಟೈನರ್ ಅಡಿಕೆ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು 2020 ಆಗಸ್ಟ್ ತಿಂಗಳಿನಿಂದ ಕೆಲವು ಬಾರಿ ಅಡಿಕೆ ಶ್ರೀಲಂಕಾಕ್ಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದಕ್ಕಾಗಿ ಕಸ್ಟಮ್ಸ್ ಮಾಜಿ ಸಹಾಯಕ ಅಧೀಕ್ಷಕರು ಸಹಾಯ ನೀಡಿದ್ದು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಅಸ್ಸಾಂ ಗಡಿಯಲ್ಲಿ ಕೂಡಾ ಅಡಿಕೆ ಆಮದು ತಡೆಯಲಾಗಿದೆ. ಕಳ್ಳ ದಾರಿ ಮೂಲಕ ಅಸ್ಸಾಂ ಗಡಿಯಲ್ಲಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣರವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದ್ದು ಸುಮಾರು 7.7 ಲಕ್ಷ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಮಿಜೋರಾಂನ ಚಂಪೈ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಅಂತರರಾಷ್ಟ್ರೀಯ ಗಡಿ ಮೂಲಕ ಕಳ್ಳಸಾಗಣೆ ಮಾಡಲು ಉದ್ದೇಶಿಸಲಾಗಿತ್ತು ಎಂದು ಗಡಿ ಭದ್ರತಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.
Advertisement
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…