ಅಡಿಕೆ ಮಾರುಕಟ್ಟೆ ಅಸ್ಥಿರಗೊಳಿಸುವ ಸತತ ಪ್ರಯತ್ನಗಳು ವಿಫಲವಾಗುತ್ತಿದೆ. ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬರುತ್ತಿದ್ದ ಅಡಿಕೆಗೆ ನಿರಂತರ ತಡೆಯಾಗುತ್ತಿದ್ದಂತೆಯೇ ಇದೀಗ ಶ್ರೀಲಂಕಾ ಮೂಲಕ ಭಾರತದೊಳಕ್ಕೆ ಅಡಿಕೆ ಸಾಗಾಟದ ಪ್ರಯತ್ನವೂ ವಿಫಲವಾಗಿದೆ. ಶ್ರೀಲಂಕಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಮಾಹಿತಿ ಪಡೆದು 23 ಕಂಟೈನರ್ ಅಡಿಕೆ ವಶಕ್ಕೆ ಪಡೆದುಕೊಂಡು ಕಸ್ಟಮ್ಸ್ ಇಲಾಖೆಯ ಮಾಜಿ ಸಹಾಯಕ ಅಧೀಕ್ಷಕರನ್ನುವಶಕ್ಕೆ ತೆಗೆದುಕೊಂಡಿದೆ.
ಇಂಡೋನೇಶ್ಯಾದಿಂದ ಅಡಿಕೆ ಆಮದು ಮಾಡಿ ಭಾರತಕ್ಕೆ ಮರು ರಫ್ತು ಮಾಡುವ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂಡೋನೇಶ್ಯಾದಿಂದ ಅಡಿಕೆ ಆಮದು ಮಾಡಿ ಶ್ರೀಲಂಕಾದಲ್ಲಿ ಬೆಳೆದ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡುವಂತೆ ದಾಖಲೆ ಸೃಷ್ಟಿ ಮಾಡಿ 23 ಕಂಟೈನರ್ ಅಡಿಕೆಯನ್ನು ನಕಲಿ ದಾಖಲೆ ಮೂಲಕ ಸಾಗಾಟ ಮಾಡಲು ಯತ್ನ ನಡೆದಿತ್ತು. ಇದನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಪತ್ತೆ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಅಪರಾಧ ತನಿಖಾ ವಿಭಾಗದ ವಕ್ತಾರ ಡಿಐಜಿ ಅಜಿತ್ , ಇಂಡೋನೇಶ್ಯಾದಿಂದ ಅಡಿಕೆ ತರಿಸಿ ಭಾರತಕ್ಕೆ ಮರುರಫ್ತು ಮಾಡುವ ಜಾಲ ಇದಾಗಿದೆ. ಶ್ರೀಲಂಕಾದಲ್ಲಿ ಬೆಳೆದ ಅಡಿಕೆಯಂತೆ ನಕಲಿ ದಾಖಲೆ ಸೃಷ್ಟಿ ಮಾಡಿ ಸಾಗಾಟ ಮಾಡುವ ಪ್ರಯತ್ನ ನಡೆದಿತ್ತು. ಸದ್ಯ 23 ಕಂಟೈನರ್ ಅಡಿಕೆ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು 2020 ಆಗಸ್ಟ್ ತಿಂಗಳಿನಿಂದ ಕೆಲವು ಬಾರಿ ಅಡಿಕೆ ಶ್ರೀಲಂಕಾಕ್ಕೆ ಬಂದಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದಕ್ಕಾಗಿ ಕಸ್ಟಮ್ಸ್ ಮಾಜಿ ಸಹಾಯಕ ಅಧೀಕ್ಷಕರು ಸಹಾಯ ನೀಡಿದ್ದು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಅಸ್ಸಾಂ ಗಡಿಯಲ್ಲಿ ಕೂಡಾ ಅಡಿಕೆ ಆಮದು ತಡೆಯಲಾಗಿದೆ. ಕಳ್ಳ ದಾರಿ ಮೂಲಕ ಅಸ್ಸಾಂ ಗಡಿಯಲ್ಲಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣರವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದ್ದು ಸುಮಾರು 7.7 ಲಕ್ಷ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಮಿಜೋರಾಂನ ಚಂಪೈ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಅಂತರರಾಷ್ಟ್ರೀಯ ಗಡಿ ಮೂಲಕ ಕಳ್ಳಸಾಗಣೆ ಮಾಡಲು ಉದ್ದೇಶಿಸಲಾಗಿತ್ತು ಎಂದು ಗಡಿ ಭದ್ರತಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…