Advertisement
ಸುದ್ದಿಗಳು

#arecanut | ಅಡಿಕೆ ಮಾರುಕಟ್ಟೆ | ಚೌತಿಯ ಸಮಯದಲ್ಲಿ ಅಡಿಕೆ ಧಾರಣೆ ಗರಿಷ್ಟ..? | ಬೆಳೆಗಾರರ ನಿಲುವು ಏನಿರಬೇಕು ? | ಏನಾಗಬಹುದು ಮಾರುಕಟ್ಟೆ.. ?

Share

ಕಳೆದ ಒಂದು ತಿಂಗಳಿನಿಂದ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಅಡಿಕೆಗೆ ಬೇಡಿಕೆ ಹೆಚ್ಚಿದಂತೆಯೇ ಧಾರಣೆ ಕೂಡಾ ಏರಿಕೆ ಕಾಣುವುದು ಸಹಜವೇ ಆಗಿದೆ. ಪ್ರತೀ ವರ್ಷದಂತೆಯೇ ಈ ಬಾರಿ ಕೂಡಾ ಗಣೇಶ ಚೌತಿಯ ಸಮಯದಲ್ಲಿ ಅಡಿಕೆಗೆ ಗರಿಷ್ಟ ಧಾರಣೆ ತಲುಪುತ್ತದೆ. ಈ ಬಾರಿ ಕೂಡಾ ಅಡಿಕೆ ಧಾರಣೆ ಗರಿಷ್ಟಕ್ಕೆ ತಲುಪುವ ನಿರೀಕ್ಷೆ ಇದೆ. ಆದರೆ ಅತಿಯಾದ ನಿರೀಕ್ಷೆ ಬೆಳೆಗಾರರನ್ನು ಸೋಲಿಸುತ್ತದೆ ಎನ್ನುವ ಎಚ್ಚರಿಕೆಯೂ  ಇರಲೇಬೇಕು  ಬೆಳೆಗಾರರಿಗೆ.

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಹೊಸ ಹಾಗೂ ಹಳೆ ಅಡಿಕೆ ಮಾತ್ರವಲ್ಲ ಈಗ ದ್ವಿತೀಯ ದರ್ಜೆಯ ಅಡಿಕೆ ಧಾರಣೆಯೂ ಮತ್ತೆ ಏರಿದೆ. ಹೀಗಾಗಿ ಪಠೋರ, ಕರಿಗೋಟು ಧಾರಣೆಯಲ್ಲೂ ಏರಿಕೆ ಕಂಡಿದೆ. ಕ್ಯಾಂಪ್ಕೋ ಪಠೋರ ದರದಲ್ಲಿ 5 ರೂಪಾಯಿ ಹಾಗೂ ಕರಿಗೋಟು ದರದಲ್ಲಿ 5 ರೂಪಾಯಿ ಏರಿಕೆ ಮಾಡಿದೆ. ಹೀಗಾಗಿ ಹೊಸ ಪಠೋರ 365 ರೂಪಾಯಿ ಹಾಗೂ ಕರಿಗೋಟು, ಉಳ್ಳಿಗಡ್ಡೆಯ ಧಾರಣೆ 285 ರೂಪಾಯಿಗೆ ಖರೀದಿ ಮಾಡುತ್ತಿದೆ. ಹಳೆ ಪಠೋರ ಈಗಲೂ 365 ರೂಪಾಯಿಗೆ ಖರೀದಿ ನಡೆಯುತ್ತಿದೆ. ಹೊಸ ಅಡಿಕೆ ಧಾರಣೆ 465 ರೂಪಾಯಿಗೆ ಹಾಗೂ  ಹಳೆ ಅಡಿಕೆ   560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆ ಮಾಡುತ್ತಿದೆ. 

ಇದೀಗ ಮತ್ತೆ ಹೊಸ ಅಡಿಕೆ ಧಾರಣೆ ಏರಿಕೆಯ ಲಕ್ಷಣಗಳು ಕಾಣಿಸುತ್ತಿವೆ. ಚೌತಿಯ ಬಳಿಕ ಹೊಸ ಅಡಿಕೆ ಅಂದರೆ ಈ ವರ್ಷದ ಅಡಿಕೆಯ ಧಾರಣೆ ನಿಗದಿಯಾಗುತ್ತದೆ. ಈಗಿನ ಹೊಸ ಅಡಿಕೆ ಹಳೆಯದಾಗುತ್ತದೆ. ಸದ್ಯ ಹೊಸ ಅಡಿಕೆ ಹಾಗೂ ಹಳೆಯ ಅಡಿಕೆಯ ಧಾರಣೆಯಲ್ಲಿ ಸುಮಾರು 100 ರೂಪಾಯಿ ವ್ಯತ್ಯಾಸ ಇದೆ. ಅನೇಕ ಸಮಯಗಳಿಂದ ಈ ವ್ಯತ್ಯಾಸವು 25 ರಿಂದ 30 ರೂಪಾಯಿ ಇರುತ್ತಿತ್ತು. ಆದರೆ ಕೊರೋನಾ ನಂತರ 50-70 ರೂಪಾಯಿ ವ್ಯತ್ಯಾಸದಲ್ಲಿ ಇರುತ್ತಿತ್ತು. ಇದೀಗ ಅದೇ ವ್ಯತ್ಯಾಸಕ್ಕೆ ನಿಲ್ಲುವ ಸಾಧ್ಯತೆ ಇದೆ. ಈ ಕಾರಣದಿಂದ ಹೊಸ ಅಡಿಕೆ ಧಾರಣೆ ಇನ್ನೂ 20-30 ರೂಪಾಯಿ ಏರಿಕೆ ಸಾಧ್ಯತೆ ಇದೆ. ಅಂದರೆ ಹೊಸ ಅಡಿಕೆ ಧಾರಣೆ ಕೂಡಾ 500 ರಿಂದ 510 ರೂಪಾಯಿ ತಲುಪಬಹುದು. ಈ ನಡುವೆ ಈಗ ಅಡಿಕೆ ದಾಸ್ತಾನು ಕೂಡಾ ಹೆಚ್ಚಾಗಿರುವುದರಿಂದ ಬೇಡಿಕೆ ಕೂಡಾ ಹೆಚ್ಚಿದೆ. ಈ ಬಾರಿ ಕೊಳೆರೋಗದ ಪರಿಣಾಮದಿಂದ ಮುಂದಿನ ವರ್ಷ ಅಡಿಕೆ ಫಸಲು ಕಡಿಮೆ ಇರಲಿದೆ. ಇದನ್ನು ಮನಗಂಡ ಕೆಲವು ವ್ಯಾಪಾರಿಗಳು ಅಡಿಕೆ ದಾಸ್ತಾನಿಗೂ ಮುಂದಾಗಿದ್ದಾರೆ. ಕಳೆದ ವರ್ಷ ಉತ್ತಮ ಧಾರಣೆಯ ಪರಿಣಾಮ ಹಲವು ಮಂದಿ ಅಡಿಕೆ ಮಾರಾಟ ಮಾಡಿದ್ದಾರೆ. ಈಗ ಅಡಿಕೆ ಆಮದು ಕೂಡಾ  ಬಿಗಿಯಾಗಿರುವುದು ಕೂಡಾ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರಿರುವುದು  ಕಂಡುಬಂದಿದೆ. ಸದ್ಯ ಧಾರಣೆ ಏರಿಕೆ ಹೆಚ್ಚಾಗುತ್ತಿದೆ. ಚೌತಿಯ ಬಳಿಕ ಸ್ಥಿರತೆಯ ಹಾದಿಯಲ್ಲಿ ಸಾಗುವ ನಿರೀಕ್ಷೆ ಇದೆ.

ಅಡಿಕೆ ಧಾರಣೆ ಏರಿಕೆಯ ಸಮಯದಲ್ಲಿ ಸುದ್ದಿಯಾಗುವ ಅಡಿಕೆ ಧಾರಣೆ ನಂತರ ಸದ್ದಿಲ್ಲದಾಗುತ್ತದೆ ಎಂದು ಈಚೆಗೆ ಬೆಳೆಗಾರರೊಬ್ಬರು ಪ್ರತಿಕ್ರಿಯಿಸಿದ್ದರು. ಅಡಿಕೆ ಬೆಳೆಗಾರರು ಯಾವತ್ತೂ ಅಡಿಕೆ ಧಾರಣೆಯನ್ನು ಗಮನಿಸುತ್ತಾ, ಸೂಕ್ತವಾದ ಧಾರಣೆ ಅನಿಸಿದ ತಕ್ಷಣವೇ ಎಲ್ಲಾ ಅಡಿಕೆ ಮಾರಾಟ ಮಾಡುವ ಬದಲಾಗಿ ಧಾರಣೆ ಏರಿಕೆ ಹಂತದಲ್ಲಿ ಅಡಿಕೆಯನ್ನು ಮಿತವಾಗಿ ಮಾರುಕಟ್ಟೆ ಬಿಟ್ಟಲ್ಲಿ ಧಾರಣೆಯೂ ಸ್ಥಿರತೆಯಾಗುತ್ತದೆ, ಬೆಳೆಗಾರನಿಗೆ ಸರಾಸರಿ ಉತ್ತಮ ಧಾರಣೆಯೂ ಸಿಗುತ್ತದೆ.ಈ ನಿಯಮವನ್ನು ಈಚೆಗೆ ಅನೇಕ ಬೆಳೆಗಾರರು ಅನುಸರಿಸುತ್ತಿದ್ದಾರೆ. ಈ ಕಾರಣದಿಂದ ಅಡಿಕೆ ಧಾರಣೆಯೂ ಸ್ಥಿರತೆ ಸಾಧಿಸಲು ಸಾಧ್ಯವೂ ಇದೆ.

ಕಳೆದ ಎರಡು ತಿಂಗಳಿನಿಂದ ರೂರಲ್‌ ಮಿರರ್‌ ಅಡಿಕೆ ಮಾರುಕಟ್ಟೆ, ಧಾರಣೆಯ ಬಗ್ಗೆ ವಿಶ್ಲೇಷಣೆ ಮಾಡಿರುವ ವರದಿಗಳು :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

7 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago