Advertisement
MIRROR FOCUS

#ಅಡಿಕೆಮಾರುಕಟ್ಟೆ | ಅಡಿಕೆ ಧಾರಣೆ ಏರಿಕೆಯ ನಡುವೆ ಇನ್ನೊಂದು ಚಿಂತೆ | ಯಂತ್ರದ ಮೂಲಕ ಸುಲಿದ ಅಡಿಕೆ ಕತೆ ಏನು.. ?

Share

ಅಡಿಕೆ ಧಾರಣೆ ಏರುತ್ತಲೇ ಇದೆ. ಗುರುವಾರ ಚಾಲಿ ಅಡಿಕೆ ಧಾರಣೆ ಮತ್ತೆ ಖಾಸಗಿ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. ಚಾಲಿ ಹೊಸ ಅಡಿಕೆ 490-495 ರೂಪಾಯಿ ಹಾಗೂ ಹಳೆ ಅಡಿಕೆ 570-575 ರೂಪಾಯಿಗೆ ಖರೀದಿ ನಡೆಯುತ್ತಿದೆ. ಇದೇ ವೇಳೆ ಕ್ಯಾಂಪ್ಕೋ ಅಡಿಕೆ ಧಾರಣೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು ಹೊಸ ಅಡಿಕೆ 475 ರೂಪಾಯಿ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಸುತ್ತಿದೆ.

Advertisement

ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿದೆ. ಹೊಸ ಅಡಿಕೆ ಧಾರಣೆ 500 ರೂಪಾಯಿ ತಲಪುತ್ತಿದೆ. ಇನ್ನು ಎರಡು ದಿನದಲ್ಲಿ ಹೊಸ ಚಾಲಿ ಅಡಿಕೆ ಧಾರಣೆ 500 ರೂಪಾಯಿ ತಲುಪಲಿದೆ. ಗಣೇಶ ಚೌತಿ ಹತ್ತಿರವಾಗುತ್ತಿದ್ದಂತೆಯೇ ಅಡಿಕೆ ಧಾರಣೆಯೂ ಏರುಗತಿಯಲ್ಲಿ ಸಾಗುತ್ತಿದೆ. ಈಗ ಎರಡು ದಿನಗಳಿಂದ ಧಾರಣೆ ಏರಿಕೆಯ ವೇಗಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ. ಅಡಿಕೆ ದಾಸ್ತಾನು ಕಾರಣದಿಂದ ಬೇಡಿಕೆ ಹೆಚ್ಚುತ್ತಲೇ ಇತ್ತು. ಹೊಸ ಅಡಿಕೆ ದಾಸ್ತಾನು ಹಲವು ವ್ಯಾಪಾರಸ್ಥರು ಚೌತಿಯ ಸಮಯದಲ್ಲಿ ಮಾಡುವುದು  ಈ ಹಿಂದೆಯೂ ಕಂಡುಬಂದಿತ್ತು. ಇನ್ನು ಒಂದು ತಿಂಗಳು ದಾಸ್ತಾನು ಇರಿಸಿದರೆ ಕನಿಷ್ಟ 60- 70 ರೂಪಾಯಿ ಲಾಭ ಪಡೆಯಬಹುದು  ಎನ್ನುವುದು  ವ್ಯಾಪಾರದ ಲೆಕ್ಕಾಚಾರ. ಈಗ ಬೆಳೆಗಾರರು ಕೂಡಾ ಲಾಭ-ನಷ್ಟದ ಲೆಕ್ಕಾಚಾರ ಇರಿಸಿಕೊಂಡು ಅಗತ್ಯಕ್ಕೆ ತಕ್ಕಷ್ಟೇ ಮಾರುಕಟ್ಟೆಗೂ ಅಡಿಕೆ ಬಿಡುತ್ತಿದ್ದಾರೆ.

ಅಡಿಕೆ ಧಾರಣೆಯ ನಡುವೆಯೇ ಈಗ ಯಂತ್ರದ ಮೂಲಕ ಸುಲಿದ ಚಾಲಿ ಅಡಿಕೆಯ ಬಗ್ಗೆ ಚಿಂತೆ ಶುರುವಾಗಿದೆ. ಯಂತ್ರದ ಮೂಲಕ ಅಡಿಕೆ ಸುಲಿದಾಗ ಕೆಲವು ಅಡಿಕೆಗಳು ಹುಡಿಯಾಗುತ್ತವೆ, ಇನ್ನೂ ಕೆಲವು ಅಡಿಕೆಗಳಿಗೆ ಹಾನಿಯಾಗುತ್ತದೆ. ಇಂತಹ ಅಡಿಕೆಗಳಿಗೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಸಿಗುತ್ತಿದೆ. ಆದರೆ ಇದನ್ನು ಅಡಿಕೆ ಗ್ರೇಡ್‌ ಮಾಡುವ ವೇಳೆ ತುಕ್ಡಾ , ಚೋರ್‌ ಎಂದು ವಿಭಾಗ ಮಾಡಲಾಗುತ್ತದೆ. ಆದರೆ ಧಾರಣೆಯಲ್ಲಿ ಮಾತ್ರಾ ತೀರಾ ವ್ಯತ್ಯಾಸ ಇರುತ್ತದೆ. ಇದಕ್ಕಾಗಿ ಖಾಸಗಿ ವ್ಯಾಪಾರಿಗಳು ಸಹಿತ ಕ್ಯಾಂಪ್ಕೋ ಸೂಕ್ತವಾದ ದರ ನಿಗದಿ ಮಾಡಬೇಕು ಎನ್ನುವ ಒತ್ತಾಯ ಬೆಳೆಗಾರರಿಂದ ವ್ಯಕ್ತವಾಗಿದೆ. ಇಂದು ಬಹುಪಾಲು ಕೃಷಿಕರು ಯಂತ್ರದ ಮೂಲಕ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಕೊರತೆಯ ಕಾರಣದಿಂದ ಯಂತ್ರ ಬಳಕೆ ಅನಿವಾರ್ಯವಾಗಿದೆ. ಆದರೆ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುವ ಬಗ್ಗೆ ಕೃಷಿಕರು ಹೇಳುತ್ತಾರೆ. ಇದಕ್ಕಾಗಿ ಕ್ಯಾಂಪ್ಕೋ ಗಂಭೀರವಾಗಿ ಪರಿಗಣಿಸಬೇಕು ಎಂಬುದು ಕೃಷಿಕರ ಒತ್ತಾಯ.

ಅಡಿಕೆ ಯಂತ್ರದ ಮೂಲಕ ಸುಲಿದಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತದೆ. ಕಾರ್ಮಿಕರ ಕೊರತೆಯ ಕಾರಣದಿಂದ ನಾವು ಈಗ ಅಡಿಕೆಯನ್ನು ಯಂತ್ರದ ಮೂಲಕವೇ ಸುಲಿಯಬೇಕಾಗುತ್ತದೆ. ಆಗ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಅಡಿಕೆ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಇದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಆಗಬೇಕು ಎಂದು ಕೃಷಿಕ ರಾಜೇಶ್‌ ಮೆಟ್ಟಿನಡ್ಕ ಹೇಳುತ್ತಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

49 minutes ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

11 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

11 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

11 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

23 hours ago