Advertisement
MIRROR FOCUS

#ಅಡಿಕೆಮಾರುಕಟ್ಟೆ | ಅಡಿಕೆ ಧಾರಣೆ ಏರಿಕೆಯ ನಡುವೆ ಇನ್ನೊಂದು ಚಿಂತೆ | ಯಂತ್ರದ ಮೂಲಕ ಸುಲಿದ ಅಡಿಕೆ ಕತೆ ಏನು.. ?

Share

ಅಡಿಕೆ ಧಾರಣೆ ಏರುತ್ತಲೇ ಇದೆ. ಗುರುವಾರ ಚಾಲಿ ಅಡಿಕೆ ಧಾರಣೆ ಮತ್ತೆ ಖಾಸಗಿ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. ಚಾಲಿ ಹೊಸ ಅಡಿಕೆ 490-495 ರೂಪಾಯಿ ಹಾಗೂ ಹಳೆ ಅಡಿಕೆ 570-575 ರೂಪಾಯಿಗೆ ಖರೀದಿ ನಡೆಯುತ್ತಿದೆ. ಇದೇ ವೇಳೆ ಕ್ಯಾಂಪ್ಕೋ ಅಡಿಕೆ ಧಾರಣೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು ಹೊಸ ಅಡಿಕೆ 475 ರೂಪಾಯಿ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಸುತ್ತಿದೆ.

ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿದೆ. ಹೊಸ ಅಡಿಕೆ ಧಾರಣೆ 500 ರೂಪಾಯಿ ತಲಪುತ್ತಿದೆ. ಇನ್ನು ಎರಡು ದಿನದಲ್ಲಿ ಹೊಸ ಚಾಲಿ ಅಡಿಕೆ ಧಾರಣೆ 500 ರೂಪಾಯಿ ತಲುಪಲಿದೆ. ಗಣೇಶ ಚೌತಿ ಹತ್ತಿರವಾಗುತ್ತಿದ್ದಂತೆಯೇ ಅಡಿಕೆ ಧಾರಣೆಯೂ ಏರುಗತಿಯಲ್ಲಿ ಸಾಗುತ್ತಿದೆ. ಈಗ ಎರಡು ದಿನಗಳಿಂದ ಧಾರಣೆ ಏರಿಕೆಯ ವೇಗಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ. ಅಡಿಕೆ ದಾಸ್ತಾನು ಕಾರಣದಿಂದ ಬೇಡಿಕೆ ಹೆಚ್ಚುತ್ತಲೇ ಇತ್ತು. ಹೊಸ ಅಡಿಕೆ ದಾಸ್ತಾನು ಹಲವು ವ್ಯಾಪಾರಸ್ಥರು ಚೌತಿಯ ಸಮಯದಲ್ಲಿ ಮಾಡುವುದು  ಈ ಹಿಂದೆಯೂ ಕಂಡುಬಂದಿತ್ತು. ಇನ್ನು ಒಂದು ತಿಂಗಳು ದಾಸ್ತಾನು ಇರಿಸಿದರೆ ಕನಿಷ್ಟ 60- 70 ರೂಪಾಯಿ ಲಾಭ ಪಡೆಯಬಹುದು  ಎನ್ನುವುದು  ವ್ಯಾಪಾರದ ಲೆಕ್ಕಾಚಾರ. ಈಗ ಬೆಳೆಗಾರರು ಕೂಡಾ ಲಾಭ-ನಷ್ಟದ ಲೆಕ್ಕಾಚಾರ ಇರಿಸಿಕೊಂಡು ಅಗತ್ಯಕ್ಕೆ ತಕ್ಕಷ್ಟೇ ಮಾರುಕಟ್ಟೆಗೂ ಅಡಿಕೆ ಬಿಡುತ್ತಿದ್ದಾರೆ.

ಅಡಿಕೆ ಧಾರಣೆಯ ನಡುವೆಯೇ ಈಗ ಯಂತ್ರದ ಮೂಲಕ ಸುಲಿದ ಚಾಲಿ ಅಡಿಕೆಯ ಬಗ್ಗೆ ಚಿಂತೆ ಶುರುವಾಗಿದೆ. ಯಂತ್ರದ ಮೂಲಕ ಅಡಿಕೆ ಸುಲಿದಾಗ ಕೆಲವು ಅಡಿಕೆಗಳು ಹುಡಿಯಾಗುತ್ತವೆ, ಇನ್ನೂ ಕೆಲವು ಅಡಿಕೆಗಳಿಗೆ ಹಾನಿಯಾಗುತ್ತದೆ. ಇಂತಹ ಅಡಿಕೆಗಳಿಗೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಸಿಗುತ್ತಿದೆ. ಆದರೆ ಇದನ್ನು ಅಡಿಕೆ ಗ್ರೇಡ್‌ ಮಾಡುವ ವೇಳೆ ತುಕ್ಡಾ , ಚೋರ್‌ ಎಂದು ವಿಭಾಗ ಮಾಡಲಾಗುತ್ತದೆ. ಆದರೆ ಧಾರಣೆಯಲ್ಲಿ ಮಾತ್ರಾ ತೀರಾ ವ್ಯತ್ಯಾಸ ಇರುತ್ತದೆ. ಇದಕ್ಕಾಗಿ ಖಾಸಗಿ ವ್ಯಾಪಾರಿಗಳು ಸಹಿತ ಕ್ಯಾಂಪ್ಕೋ ಸೂಕ್ತವಾದ ದರ ನಿಗದಿ ಮಾಡಬೇಕು ಎನ್ನುವ ಒತ್ತಾಯ ಬೆಳೆಗಾರರಿಂದ ವ್ಯಕ್ತವಾಗಿದೆ. ಇಂದು ಬಹುಪಾಲು ಕೃಷಿಕರು ಯಂತ್ರದ ಮೂಲಕ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಕೊರತೆಯ ಕಾರಣದಿಂದ ಯಂತ್ರ ಬಳಕೆ ಅನಿವಾರ್ಯವಾಗಿದೆ. ಆದರೆ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುವ ಬಗ್ಗೆ ಕೃಷಿಕರು ಹೇಳುತ್ತಾರೆ. ಇದಕ್ಕಾಗಿ ಕ್ಯಾಂಪ್ಕೋ ಗಂಭೀರವಾಗಿ ಪರಿಗಣಿಸಬೇಕು ಎಂಬುದು ಕೃಷಿಕರ ಒತ್ತಾಯ.

ಅಡಿಕೆ ಯಂತ್ರದ ಮೂಲಕ ಸುಲಿದಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತದೆ. ಕಾರ್ಮಿಕರ ಕೊರತೆಯ ಕಾರಣದಿಂದ ನಾವು ಈಗ ಅಡಿಕೆಯನ್ನು ಯಂತ್ರದ ಮೂಲಕವೇ ಸುಲಿಯಬೇಕಾಗುತ್ತದೆ. ಆಗ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಅಡಿಕೆ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಇದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಆಗಬೇಕು ಎಂದು ಕೃಷಿಕ ರಾಜೇಶ್‌ ಮೆಟ್ಟಿನಡ್ಕ ಹೇಳುತ್ತಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 hour ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

3 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

9 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

9 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

17 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

17 hours ago