Advertisement
MIRROR FOCUS

#ಅಡಿಕೆಮಾರುಕಟ್ಟೆ | ಅಡಿಕೆ ಧಾರಣೆ ಏರಿಕೆಯ ನಡುವೆ ಇನ್ನೊಂದು ಚಿಂತೆ | ಯಂತ್ರದ ಮೂಲಕ ಸುಲಿದ ಅಡಿಕೆ ಕತೆ ಏನು.. ?

Share

ಅಡಿಕೆ ಧಾರಣೆ ಏರುತ್ತಲೇ ಇದೆ. ಗುರುವಾರ ಚಾಲಿ ಅಡಿಕೆ ಧಾರಣೆ ಮತ್ತೆ ಖಾಸಗಿ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. ಚಾಲಿ ಹೊಸ ಅಡಿಕೆ 490-495 ರೂಪಾಯಿ ಹಾಗೂ ಹಳೆ ಅಡಿಕೆ 570-575 ರೂಪಾಯಿಗೆ ಖರೀದಿ ನಡೆಯುತ್ತಿದೆ. ಇದೇ ವೇಳೆ ಕ್ಯಾಂಪ್ಕೋ ಅಡಿಕೆ ಧಾರಣೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು ಹೊಸ ಅಡಿಕೆ 475 ರೂಪಾಯಿ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಸುತ್ತಿದೆ.

ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿದೆ. ಹೊಸ ಅಡಿಕೆ ಧಾರಣೆ 500 ರೂಪಾಯಿ ತಲಪುತ್ತಿದೆ. ಇನ್ನು ಎರಡು ದಿನದಲ್ಲಿ ಹೊಸ ಚಾಲಿ ಅಡಿಕೆ ಧಾರಣೆ 500 ರೂಪಾಯಿ ತಲುಪಲಿದೆ. ಗಣೇಶ ಚೌತಿ ಹತ್ತಿರವಾಗುತ್ತಿದ್ದಂತೆಯೇ ಅಡಿಕೆ ಧಾರಣೆಯೂ ಏರುಗತಿಯಲ್ಲಿ ಸಾಗುತ್ತಿದೆ. ಈಗ ಎರಡು ದಿನಗಳಿಂದ ಧಾರಣೆ ಏರಿಕೆಯ ವೇಗಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ. ಅಡಿಕೆ ದಾಸ್ತಾನು ಕಾರಣದಿಂದ ಬೇಡಿಕೆ ಹೆಚ್ಚುತ್ತಲೇ ಇತ್ತು. ಹೊಸ ಅಡಿಕೆ ದಾಸ್ತಾನು ಹಲವು ವ್ಯಾಪಾರಸ್ಥರು ಚೌತಿಯ ಸಮಯದಲ್ಲಿ ಮಾಡುವುದು  ಈ ಹಿಂದೆಯೂ ಕಂಡುಬಂದಿತ್ತು. ಇನ್ನು ಒಂದು ತಿಂಗಳು ದಾಸ್ತಾನು ಇರಿಸಿದರೆ ಕನಿಷ್ಟ 60- 70 ರೂಪಾಯಿ ಲಾಭ ಪಡೆಯಬಹುದು  ಎನ್ನುವುದು  ವ್ಯಾಪಾರದ ಲೆಕ್ಕಾಚಾರ. ಈಗ ಬೆಳೆಗಾರರು ಕೂಡಾ ಲಾಭ-ನಷ್ಟದ ಲೆಕ್ಕಾಚಾರ ಇರಿಸಿಕೊಂಡು ಅಗತ್ಯಕ್ಕೆ ತಕ್ಕಷ್ಟೇ ಮಾರುಕಟ್ಟೆಗೂ ಅಡಿಕೆ ಬಿಡುತ್ತಿದ್ದಾರೆ.

Advertisement

ಅಡಿಕೆ ಧಾರಣೆಯ ನಡುವೆಯೇ ಈಗ ಯಂತ್ರದ ಮೂಲಕ ಸುಲಿದ ಚಾಲಿ ಅಡಿಕೆಯ ಬಗ್ಗೆ ಚಿಂತೆ ಶುರುವಾಗಿದೆ. ಯಂತ್ರದ ಮೂಲಕ ಅಡಿಕೆ ಸುಲಿದಾಗ ಕೆಲವು ಅಡಿಕೆಗಳು ಹುಡಿಯಾಗುತ್ತವೆ, ಇನ್ನೂ ಕೆಲವು ಅಡಿಕೆಗಳಿಗೆ ಹಾನಿಯಾಗುತ್ತದೆ. ಇಂತಹ ಅಡಿಕೆಗಳಿಗೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಸಿಗುತ್ತಿದೆ. ಆದರೆ ಇದನ್ನು ಅಡಿಕೆ ಗ್ರೇಡ್‌ ಮಾಡುವ ವೇಳೆ ತುಕ್ಡಾ , ಚೋರ್‌ ಎಂದು ವಿಭಾಗ ಮಾಡಲಾಗುತ್ತದೆ. ಆದರೆ ಧಾರಣೆಯಲ್ಲಿ ಮಾತ್ರಾ ತೀರಾ ವ್ಯತ್ಯಾಸ ಇರುತ್ತದೆ. ಇದಕ್ಕಾಗಿ ಖಾಸಗಿ ವ್ಯಾಪಾರಿಗಳು ಸಹಿತ ಕ್ಯಾಂಪ್ಕೋ ಸೂಕ್ತವಾದ ದರ ನಿಗದಿ ಮಾಡಬೇಕು ಎನ್ನುವ ಒತ್ತಾಯ ಬೆಳೆಗಾರರಿಂದ ವ್ಯಕ್ತವಾಗಿದೆ. ಇಂದು ಬಹುಪಾಲು ಕೃಷಿಕರು ಯಂತ್ರದ ಮೂಲಕ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಕೊರತೆಯ ಕಾರಣದಿಂದ ಯಂತ್ರ ಬಳಕೆ ಅನಿವಾರ್ಯವಾಗಿದೆ. ಆದರೆ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುವ ಬಗ್ಗೆ ಕೃಷಿಕರು ಹೇಳುತ್ತಾರೆ. ಇದಕ್ಕಾಗಿ ಕ್ಯಾಂಪ್ಕೋ ಗಂಭೀರವಾಗಿ ಪರಿಗಣಿಸಬೇಕು ಎಂಬುದು ಕೃಷಿಕರ ಒತ್ತಾಯ.

ಅಡಿಕೆ ಯಂತ್ರದ ಮೂಲಕ ಸುಲಿದಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತದೆ. ಕಾರ್ಮಿಕರ ಕೊರತೆಯ ಕಾರಣದಿಂದ ನಾವು ಈಗ ಅಡಿಕೆಯನ್ನು ಯಂತ್ರದ ಮೂಲಕವೇ ಸುಲಿಯಬೇಕಾಗುತ್ತದೆ. ಆಗ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಅಡಿಕೆ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಇದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಆಗಬೇಕು ಎಂದು ಕೃಷಿಕ ರಾಜೇಶ್‌ ಮೆಟ್ಟಿನಡ್ಕ ಹೇಳುತ್ತಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

26 minutes ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

50 minutes ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

8 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

10 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

11 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

11 hours ago