Advertisement
MIRROR FOCUS

#ಅಡಿಕೆಮಾರುಕಟ್ಟೆ | ಅಡಿಕೆ ಧಾರಣೆ ಏರಿಕೆಯ ನಡುವೆ ಇನ್ನೊಂದು ಚಿಂತೆ | ಯಂತ್ರದ ಮೂಲಕ ಸುಲಿದ ಅಡಿಕೆ ಕತೆ ಏನು.. ?

Share

ಅಡಿಕೆ ಧಾರಣೆ ಏರುತ್ತಲೇ ಇದೆ. ಗುರುವಾರ ಚಾಲಿ ಅಡಿಕೆ ಧಾರಣೆ ಮತ್ತೆ ಖಾಸಗಿ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. ಚಾಲಿ ಹೊಸ ಅಡಿಕೆ 490-495 ರೂಪಾಯಿ ಹಾಗೂ ಹಳೆ ಅಡಿಕೆ 570-575 ರೂಪಾಯಿಗೆ ಖರೀದಿ ನಡೆಯುತ್ತಿದೆ. ಇದೇ ವೇಳೆ ಕ್ಯಾಂಪ್ಕೋ ಅಡಿಕೆ ಧಾರಣೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು ಹೊಸ ಅಡಿಕೆ 475 ರೂಪಾಯಿ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಸುತ್ತಿದೆ.

Advertisement

ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿದೆ. ಹೊಸ ಅಡಿಕೆ ಧಾರಣೆ 500 ರೂಪಾಯಿ ತಲಪುತ್ತಿದೆ. ಇನ್ನು ಎರಡು ದಿನದಲ್ಲಿ ಹೊಸ ಚಾಲಿ ಅಡಿಕೆ ಧಾರಣೆ 500 ರೂಪಾಯಿ ತಲುಪಲಿದೆ. ಗಣೇಶ ಚೌತಿ ಹತ್ತಿರವಾಗುತ್ತಿದ್ದಂತೆಯೇ ಅಡಿಕೆ ಧಾರಣೆಯೂ ಏರುಗತಿಯಲ್ಲಿ ಸಾಗುತ್ತಿದೆ. ಈಗ ಎರಡು ದಿನಗಳಿಂದ ಧಾರಣೆ ಏರಿಕೆಯ ವೇಗಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ. ಅಡಿಕೆ ದಾಸ್ತಾನು ಕಾರಣದಿಂದ ಬೇಡಿಕೆ ಹೆಚ್ಚುತ್ತಲೇ ಇತ್ತು. ಹೊಸ ಅಡಿಕೆ ದಾಸ್ತಾನು ಹಲವು ವ್ಯಾಪಾರಸ್ಥರು ಚೌತಿಯ ಸಮಯದಲ್ಲಿ ಮಾಡುವುದು  ಈ ಹಿಂದೆಯೂ ಕಂಡುಬಂದಿತ್ತು. ಇನ್ನು ಒಂದು ತಿಂಗಳು ದಾಸ್ತಾನು ಇರಿಸಿದರೆ ಕನಿಷ್ಟ 60- 70 ರೂಪಾಯಿ ಲಾಭ ಪಡೆಯಬಹುದು  ಎನ್ನುವುದು  ವ್ಯಾಪಾರದ ಲೆಕ್ಕಾಚಾರ. ಈಗ ಬೆಳೆಗಾರರು ಕೂಡಾ ಲಾಭ-ನಷ್ಟದ ಲೆಕ್ಕಾಚಾರ ಇರಿಸಿಕೊಂಡು ಅಗತ್ಯಕ್ಕೆ ತಕ್ಕಷ್ಟೇ ಮಾರುಕಟ್ಟೆಗೂ ಅಡಿಕೆ ಬಿಡುತ್ತಿದ್ದಾರೆ.

ಅಡಿಕೆ ಧಾರಣೆಯ ನಡುವೆಯೇ ಈಗ ಯಂತ್ರದ ಮೂಲಕ ಸುಲಿದ ಚಾಲಿ ಅಡಿಕೆಯ ಬಗ್ಗೆ ಚಿಂತೆ ಶುರುವಾಗಿದೆ. ಯಂತ್ರದ ಮೂಲಕ ಅಡಿಕೆ ಸುಲಿದಾಗ ಕೆಲವು ಅಡಿಕೆಗಳು ಹುಡಿಯಾಗುತ್ತವೆ, ಇನ್ನೂ ಕೆಲವು ಅಡಿಕೆಗಳಿಗೆ ಹಾನಿಯಾಗುತ್ತದೆ. ಇಂತಹ ಅಡಿಕೆಗಳಿಗೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಸಿಗುತ್ತಿದೆ. ಆದರೆ ಇದನ್ನು ಅಡಿಕೆ ಗ್ರೇಡ್‌ ಮಾಡುವ ವೇಳೆ ತುಕ್ಡಾ , ಚೋರ್‌ ಎಂದು ವಿಭಾಗ ಮಾಡಲಾಗುತ್ತದೆ. ಆದರೆ ಧಾರಣೆಯಲ್ಲಿ ಮಾತ್ರಾ ತೀರಾ ವ್ಯತ್ಯಾಸ ಇರುತ್ತದೆ. ಇದಕ್ಕಾಗಿ ಖಾಸಗಿ ವ್ಯಾಪಾರಿಗಳು ಸಹಿತ ಕ್ಯಾಂಪ್ಕೋ ಸೂಕ್ತವಾದ ದರ ನಿಗದಿ ಮಾಡಬೇಕು ಎನ್ನುವ ಒತ್ತಾಯ ಬೆಳೆಗಾರರಿಂದ ವ್ಯಕ್ತವಾಗಿದೆ. ಇಂದು ಬಹುಪಾಲು ಕೃಷಿಕರು ಯಂತ್ರದ ಮೂಲಕ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಕೊರತೆಯ ಕಾರಣದಿಂದ ಯಂತ್ರ ಬಳಕೆ ಅನಿವಾರ್ಯವಾಗಿದೆ. ಆದರೆ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುವ ಬಗ್ಗೆ ಕೃಷಿಕರು ಹೇಳುತ್ತಾರೆ. ಇದಕ್ಕಾಗಿ ಕ್ಯಾಂಪ್ಕೋ ಗಂಭೀರವಾಗಿ ಪರಿಗಣಿಸಬೇಕು ಎಂಬುದು ಕೃಷಿಕರ ಒತ್ತಾಯ.

ಅಡಿಕೆ ಯಂತ್ರದ ಮೂಲಕ ಸುಲಿದಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತದೆ. ಕಾರ್ಮಿಕರ ಕೊರತೆಯ ಕಾರಣದಿಂದ ನಾವು ಈಗ ಅಡಿಕೆಯನ್ನು ಯಂತ್ರದ ಮೂಲಕವೇ ಸುಲಿಯಬೇಕಾಗುತ್ತದೆ. ಆಗ ಅಡಿಕೆ ಗುಣಮಟ್ಟ ಇದ್ದರೂ ಯಂತ್ರದ ಮೂಲಕ ಸುಲಿದ ಅಡಿಕೆ ಎಂಬ ಕಾರಣಕ್ಕೆ ಧಾರಣೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಇದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಆಗಬೇಕು ಎಂದು ಕೃಷಿಕ ರಾಜೇಶ್‌ ಮೆಟ್ಟಿನಡ್ಕ ಹೇಳುತ್ತಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

15 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

16 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

16 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

16 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 days ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 days ago