Advertisement
ಸುದ್ದಿಗಳು

ನವರಾತ್ರಿ ಆರಂಭ | ದೇಶದೆಲ್ಲೆಡೆ ಸಂಭ್ರಮ | ಅಡಿಕೆ ಮಾರುಕಟ್ಟೆ ಸದ್ಯ ಸ್ಥಿರ | ರಬ್ಬರ್‌ ಧಾರಣೆಯಲ್ಲೂ ಸ್ಥಿರತೆ |

Share

ಅಡಿಕೆ ಮಾರುಕಟ್ಟೆಯು (Arecanut Market) ಇನ್ನು ಸುಮಾರು 10 ದಿನಗಳ ಕಾಲ ಬಹುತೇಕವಾಗಿ ಸ್ಥಿರತೆ ಕಾಣುವ ಕಾಲ. ದೇಶದಾದ್ಯಂತ ನವರಾತ್ರಿ ಹಬ್ಬವು ಸಂಭ್ರಮದಿಂದ ಆಚರಿಸುವ ಹೊತ್ತಿನಲ್ಲಿ ಅಡಿಕೆ ವ್ಯಾಪಾರ, ವ್ಯವಹಾರವು ಬಹುತೇಕ ಸಂದರ್ಭದಲ್ಲಿ ಸ್ಥಿರವಾಗಿರುತ್ತದೆ. ನವರಾತ್ರಿ ನಂತರ ದೀಪಾವಳಿವರೆಗೂ ಅಡಿಕೆ ಧಾರಣೆ ಏರಿಕೆಯ ಕಾಲವಾಗುತ್ತದೆ. ಈ ಬಾರಿಯೂ ಮತ್ತೆ ಅದೇ ಟ್ರೆಂಡ್‌ ಕಾಣುತ್ತಿದೆ. ಸದ್ಯ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ.

Advertisement
Advertisement
Advertisement
Advertisement

ಸದ್ಯ ಕ್ಯಾಂಪ್ಕೋದಲ್ಲಿ ಚಾಲಿ ಹೊಸ ಅಡಿಕೆ 475 ,ಖಾಸಗಿ ಮಾರುಕಟ್ಟೆಯಲ್ಲಿ 485 ರೂಪಾಯಿಗೆ ಖರೀದಿ ನಡೆಯುತ್ತಿದೆ. ಹಳೆ ಚಾಲಿ ಅಡಿಕೆಗೆ 560 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದ್ದರೆ ಖಾಸಗಿ ಮಾರುಕಟ್ಟೆಯಲ್ಲಿ 565-570 ರೂಪಾಯಿಗೆ ಖರೀದಿ ನಡೆಯುತ್ತಿದೆ.

Advertisement

ರಬ್ಬರ್‌ ಧಾರಣೆ ಮಾತ್ರಾ ಈ ಬಾರಿ ಏರಿಕೆಯ ಲಕ್ಷಣಗಳು ಕಾಣುತ್ತಿಲ್ಲ. ರಬ್ಬರ್‌ ಆಮದು ಪ್ರಮಾಣ ಹೆಚ್ಚಿರುವುದು  ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಣೆಗಳು ಹೇಳಿವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಾಗಿರುವುದು  ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್‌ ಧಾರಣೆ ಇಳಿಕೆಗೆ ಕಾರಣವಾಗಿದೆ. ಭಾರತದಲ್ಲಿ ರಬ್ಬರ್‌ ಈಗ ವಾಣಿಜ್ಯ ಇಲಾಖೆಯ ಅಡಿಯಲ್ಲಿ ಇರುತ್ತದೆ, ರಬ್ಬರ್‌ ಆಮದಿಗೆ ಅವಕಾಶ ಇದೆ. ಭಾರತವು ಇಲ್ಲಿನ ರಬ್ಬರ್‌ ಬೆಳೆಯನ್ನೇ ಹೆಚ್ಚಾಗಿ ಬಳಕೆ ಮಾಡುವಂತೆ ಒತ್ತಾಯವನ್ನು ಹೇರಲಾಗುತ್ತಿದೆ. ಇದಕ್ಕಾಗಿ ರಬ್ಬರ್‌ ಆಮದು ಕನಿಷ್ಟ ಬೆಲೆಯನ್ನು ಏರಿಕೆ ಮಾಡಲು ಒತ್ತಾಯ ಕೇಳಿಬಂದಿದೆ. ಕೇರಳದಲ್ಲಿ ಅಧಿಕ ಪ್ರಮಾಣದಲ್ಲಿ ರಬ್ಬರ್‌ ಬೆಳೆಯುತ್ತಿದ್ದರೆ ಉಳಿದೆಲ್ಲಾ ರಾಜ್ಯಗಳಲ್ಲಿ ಅಲ್ಪ ಪ್ರಮಾಣದಲ್ಲಿ ರಬ್ಬರ್‌ ಕೃಷಿ ಇದೆ. ಈಚೆಗೆ ಒರಿಸಾ ಪ್ರದೇಶದಲ್ಲೂ ರಬ್ಬರ್‌ ಬೆಳೆಯನ್ನು ಬೆಳೆಸಲು ಕೃಷಿಕರು ಆಸಕ್ತರಾಗಿದ್ದಾರೆ.ಇದೆಲ್ಲದರ ನಡುವೆಯೂ ರಬ್ಬರ್‌ ಧಾರಣೆ ಇಳಿಕೆಯ ಹಾದಿಯಲ್ಲಿದೆ. ಸೋಮವಾರ 145.50 ರೂಪಾಯಿಗೆ ಖರೀದಿಯಾಗುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

1 hour ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

2 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

12 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

23 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

23 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

23 hours ago