ಸುದ್ದಿಗಳು

ನವರಾತ್ರಿ ಆರಂಭ | ದೇಶದೆಲ್ಲೆಡೆ ಸಂಭ್ರಮ | ಅಡಿಕೆ ಮಾರುಕಟ್ಟೆ ಸದ್ಯ ಸ್ಥಿರ | ರಬ್ಬರ್‌ ಧಾರಣೆಯಲ್ಲೂ ಸ್ಥಿರತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆಯು (Arecanut Market) ಇನ್ನು ಸುಮಾರು 10 ದಿನಗಳ ಕಾಲ ಬಹುತೇಕವಾಗಿ ಸ್ಥಿರತೆ ಕಾಣುವ ಕಾಲ. ದೇಶದಾದ್ಯಂತ ನವರಾತ್ರಿ ಹಬ್ಬವು ಸಂಭ್ರಮದಿಂದ ಆಚರಿಸುವ ಹೊತ್ತಿನಲ್ಲಿ ಅಡಿಕೆ ವ್ಯಾಪಾರ, ವ್ಯವಹಾರವು ಬಹುತೇಕ ಸಂದರ್ಭದಲ್ಲಿ ಸ್ಥಿರವಾಗಿರುತ್ತದೆ. ನವರಾತ್ರಿ ನಂತರ ದೀಪಾವಳಿವರೆಗೂ ಅಡಿಕೆ ಧಾರಣೆ ಏರಿಕೆಯ ಕಾಲವಾಗುತ್ತದೆ. ಈ ಬಾರಿಯೂ ಮತ್ತೆ ಅದೇ ಟ್ರೆಂಡ್‌ ಕಾಣುತ್ತಿದೆ. ಸದ್ಯ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ.

Advertisement

ಸದ್ಯ ಕ್ಯಾಂಪ್ಕೋದಲ್ಲಿ ಚಾಲಿ ಹೊಸ ಅಡಿಕೆ 475 ,ಖಾಸಗಿ ಮಾರುಕಟ್ಟೆಯಲ್ಲಿ 485 ರೂಪಾಯಿಗೆ ಖರೀದಿ ನಡೆಯುತ್ತಿದೆ. ಹಳೆ ಚಾಲಿ ಅಡಿಕೆಗೆ 560 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದ್ದರೆ ಖಾಸಗಿ ಮಾರುಕಟ್ಟೆಯಲ್ಲಿ 565-570 ರೂಪಾಯಿಗೆ ಖರೀದಿ ನಡೆಯುತ್ತಿದೆ.

ರಬ್ಬರ್‌ ಧಾರಣೆ ಮಾತ್ರಾ ಈ ಬಾರಿ ಏರಿಕೆಯ ಲಕ್ಷಣಗಳು ಕಾಣುತ್ತಿಲ್ಲ. ರಬ್ಬರ್‌ ಆಮದು ಪ್ರಮಾಣ ಹೆಚ್ಚಿರುವುದು  ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಣೆಗಳು ಹೇಳಿವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಾಗಿರುವುದು  ಅಂತರಾಷ್ಟ್ರೀಯ ಮಟ್ಟದಲ್ಲಿ ರಬ್ಬರ್‌ ಧಾರಣೆ ಇಳಿಕೆಗೆ ಕಾರಣವಾಗಿದೆ. ಭಾರತದಲ್ಲಿ ರಬ್ಬರ್‌ ಈಗ ವಾಣಿಜ್ಯ ಇಲಾಖೆಯ ಅಡಿಯಲ್ಲಿ ಇರುತ್ತದೆ, ರಬ್ಬರ್‌ ಆಮದಿಗೆ ಅವಕಾಶ ಇದೆ. ಭಾರತವು ಇಲ್ಲಿನ ರಬ್ಬರ್‌ ಬೆಳೆಯನ್ನೇ ಹೆಚ್ಚಾಗಿ ಬಳಕೆ ಮಾಡುವಂತೆ ಒತ್ತಾಯವನ್ನು ಹೇರಲಾಗುತ್ತಿದೆ. ಇದಕ್ಕಾಗಿ ರಬ್ಬರ್‌ ಆಮದು ಕನಿಷ್ಟ ಬೆಲೆಯನ್ನು ಏರಿಕೆ ಮಾಡಲು ಒತ್ತಾಯ ಕೇಳಿಬಂದಿದೆ. ಕೇರಳದಲ್ಲಿ ಅಧಿಕ ಪ್ರಮಾಣದಲ್ಲಿ ರಬ್ಬರ್‌ ಬೆಳೆಯುತ್ತಿದ್ದರೆ ಉಳಿದೆಲ್ಲಾ ರಾಜ್ಯಗಳಲ್ಲಿ ಅಲ್ಪ ಪ್ರಮಾಣದಲ್ಲಿ ರಬ್ಬರ್‌ ಕೃಷಿ ಇದೆ. ಈಚೆಗೆ ಒರಿಸಾ ಪ್ರದೇಶದಲ್ಲೂ ರಬ್ಬರ್‌ ಬೆಳೆಯನ್ನು ಬೆಳೆಸಲು ಕೃಷಿಕರು ಆಸಕ್ತರಾಗಿದ್ದಾರೆ.ಇದೆಲ್ಲದರ ನಡುವೆಯೂ ರಬ್ಬರ್‌ ಧಾರಣೆ ಇಳಿಕೆಯ ಹಾದಿಯಲ್ಲಿದೆ. ಸೋಮವಾರ 145.50 ರೂಪಾಯಿಗೆ ಖರೀದಿಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

12 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

12 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

1 day ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

1 day ago