Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆ ಏರಿಕೆ | ಹೊಸ ಚಾಲಿ ಅಡಿಕೆ ಆರಂಭದ ದರ 380 ರೂಪಾಯಿ | ರಬ್ಬರ್‌ ಧಾರಣೆಯಲ್ಲೂ ಏರಿಕೆ |

Share

ಅಡಿಕೆ ಆಮದು ಚರ್ಚೆಯ ನಡುವೆಯೂ ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆ ಕಂಡಿದೆ. ಭಾರತದ ಅಡಿಕೆ ಮಾರುಕಟ್ಟೆಯು ಆಮದು ಕಾರಣದಿಂದ ಧಾರಣೆಯಲ್ಲಿ ಸದ್ಯ ಯಾವುದೇ ಪರಿಣಾಮವಾಗದು ಎಂಬುದನ್ನು ಕ್ಯಾಂಪ್ಕೋ ಸಂಸ್ಥೆ ಧಾರಣೆ ಏರಿಕೆಯ ಮೂಲಕ ತಿಳಿಸಿದೆ. ಇದೇ ವೇಳೆ ಹೊಸ ಚಾಲಿ ಅಡಿಕೆ ಮಾರುಕಟ್ಟೆಗೆ ಬರಲು ಆರಂಭವಾಗಿದ್ದು ಅ.1 ರಿಂದ ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಆರಂಭದ ಧಾರಣೆ 380 ರೂಪಾಯಿ ನಿಗದಿಯಾಗಿದೆ. ಇದೇ ವೇಳೆ ರಬ್ಬರ್‌ ಧಾರಣೆಯಲ್ಲಿ ಸ್ವಲ್ಪ ಏರಿಕೆ ಕಂಡಿದೆ.

Advertisement
Advertisement

ಅಡಿಕೆ ಮಾರುಕಟ್ಟೆಯಲ್ಲಿ ಹೊಸದು – ಹಳೆಯದು ಕಾಲ ಆರಂಭವಾಗಿದೆ. ಪ್ರತೀ ವರ್ಷ ಚೌತಿಯ ಬಳಿಕ ಹೊಸ ಅಡಿಕೆ ಹಳೆಯದಾಗಿ ಈ ವರ್ಷದ ನೂತನ ಅಡಿಕೆ ಮಾರುಕಟ್ಟೆ ಪ್ರವೇಶವಾಗುತ್ತದೆ. ಸಂಪೂರ್ಣ ಒಣಗಿ ದಾಸ್ತಾನು ಇರಿಸಿರುವ ಚಾಲಿ ಅಡಿಕೆ ಸುಮಾರು 180 ದಿನಗಳ ಬಳಿಕ ಒಳಗಿನ ಬಣ್ಣ ಬದಲಾಗಿ ಅಂತಹ ಅಡಿಕೆ ಹಳೆ ಅಡಿಕೆ ಎಂದು ಪರಿಗಣನೆಯಾಗುತ್ತದೆ. ಅಂದರೆ ಸುಮಾರು ಗಣೇಶ ಚೌತಿಯ ಬಳಿಕ ಹಳೆ ಅಡಿಕೆ ಎನ್ನುವುದು ಹಿಂದಿನಿಂದಲೂ ವಾಡಿಕೆ. ವೈಜ್ಞಾನಿಕವಾಗಿಯೂ ಅಡಿಕೆಯೊಳಗಿನ ತೇವಾಂಶ  ಕಡಿಮೆಯಾಗುತ್ತಾ ಬಂದಂತೆ ಗುಣಮಟ್ಟವೂ ಏರಿಕೆಯಾಗುತ್ತದೆ. ಅಂತಹ ಅಡಿಕೆ ಹಳೆ ಅಡಿಕೆ ಎಂದು ಕರೆಯಲಾಗುತ್ತದೆ.  ಇದೀಗ ಅ.1 ರಿಂದ ಹೊಸ ಅಡಿಕೆ ಧಾರಣೆ ನಿಗದಿಯಾಗುವುದರ ಮೂಲಕ ಹೊಸ ಅಡಿಕೆ ಹಳೆಯ ಅಡಿಕೆಯಾಗಿ ಬದಲಾಗಿದೆ. ಅಂತಹ ಹೊಸ ಅಡಿಕೆ ಧಾರಣೆ 380 ರೂಪಾಯಿ ಕ್ಯಾಂಪ್ಕೋ ನಿಗದಿ ಮಾಡಿದೆ. ಖಾಸಗಿ ವಲಯದಲ್ಲಿ ಹೊಸ ಅಡಿಕೆ ಮಾರುಕಟ್ಟೆ ಇನ್ನಷ್ಟೇ ನಿಗದಿಯಾಗಬೇಕಿದೆ. ಆದರೆ 390 ರೂಪಾಯಿ ಸದ್ಯ ಖರೀದಿ ನಡೆಸುವ ಬಗ್ಗೆ ಅನಧಿಕೃತ ಮಾಹಿತಿ ಇದೆ.

Advertisement

ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿ 480 ರೂಪಾಯಿಗೆ ಖರೀದಿ ಮಾಡುತ್ತಿದೆ. ಚೋಲ್‌ ಅಡಿಕೆ 560 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಖಾಸಗಿ ವಲಯದಲ್ಲಿಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿದೆ.

ರಬ್ಬರ್‌ ಧಾರಣೆಯಲ್ಲಿ ಸ್ವಲ್ಪ ಏರಿಕೆಯ ಲಕ್ಷಣ ಕಂಡಿದೆ. ಸದ್ಯ RSS4 ರಬ್ಬರ್‌ ಗೆ 146  ರೂಪಾಯಿ ಹಾಗೂ ಲಾಟ್‌ ರಬ್ಬರ್‌ ಗೆ 131 ರೂಪಾಯಿಗೆ ಖರೀದಿಯಾಗುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

6 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

14 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

17 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago