Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆ ಏರಿಕೆ | ಹೊಸ ಚಾಲಿ ಅಡಿಕೆ ಆರಂಭದ ದರ 380 ರೂಪಾಯಿ | ರಬ್ಬರ್‌ ಧಾರಣೆಯಲ್ಲೂ ಏರಿಕೆ |

Share

ಅಡಿಕೆ ಆಮದು ಚರ್ಚೆಯ ನಡುವೆಯೂ ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆ ಕಂಡಿದೆ. ಭಾರತದ ಅಡಿಕೆ ಮಾರುಕಟ್ಟೆಯು ಆಮದು ಕಾರಣದಿಂದ ಧಾರಣೆಯಲ್ಲಿ ಸದ್ಯ ಯಾವುದೇ ಪರಿಣಾಮವಾಗದು ಎಂಬುದನ್ನು ಕ್ಯಾಂಪ್ಕೋ ಸಂಸ್ಥೆ ಧಾರಣೆ ಏರಿಕೆಯ ಮೂಲಕ ತಿಳಿಸಿದೆ. ಇದೇ ವೇಳೆ ಹೊಸ ಚಾಲಿ ಅಡಿಕೆ ಮಾರುಕಟ್ಟೆಗೆ ಬರಲು ಆರಂಭವಾಗಿದ್ದು ಅ.1 ರಿಂದ ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಆರಂಭದ ಧಾರಣೆ 380 ರೂಪಾಯಿ ನಿಗದಿಯಾಗಿದೆ. ಇದೇ ವೇಳೆ ರಬ್ಬರ್‌ ಧಾರಣೆಯಲ್ಲಿ ಸ್ವಲ್ಪ ಏರಿಕೆ ಕಂಡಿದೆ.

ಅಡಿಕೆ ಮಾರುಕಟ್ಟೆಯಲ್ಲಿ ಹೊಸದು – ಹಳೆಯದು ಕಾಲ ಆರಂಭವಾಗಿದೆ. ಪ್ರತೀ ವರ್ಷ ಚೌತಿಯ ಬಳಿಕ ಹೊಸ ಅಡಿಕೆ ಹಳೆಯದಾಗಿ ಈ ವರ್ಷದ ನೂತನ ಅಡಿಕೆ ಮಾರುಕಟ್ಟೆ ಪ್ರವೇಶವಾಗುತ್ತದೆ. ಸಂಪೂರ್ಣ ಒಣಗಿ ದಾಸ್ತಾನು ಇರಿಸಿರುವ ಚಾಲಿ ಅಡಿಕೆ ಸುಮಾರು 180 ದಿನಗಳ ಬಳಿಕ ಒಳಗಿನ ಬಣ್ಣ ಬದಲಾಗಿ ಅಂತಹ ಅಡಿಕೆ ಹಳೆ ಅಡಿಕೆ ಎಂದು ಪರಿಗಣನೆಯಾಗುತ್ತದೆ. ಅಂದರೆ ಸುಮಾರು ಗಣೇಶ ಚೌತಿಯ ಬಳಿಕ ಹಳೆ ಅಡಿಕೆ ಎನ್ನುವುದು ಹಿಂದಿನಿಂದಲೂ ವಾಡಿಕೆ. ವೈಜ್ಞಾನಿಕವಾಗಿಯೂ ಅಡಿಕೆಯೊಳಗಿನ ತೇವಾಂಶ  ಕಡಿಮೆಯಾಗುತ್ತಾ ಬಂದಂತೆ ಗುಣಮಟ್ಟವೂ ಏರಿಕೆಯಾಗುತ್ತದೆ. ಅಂತಹ ಅಡಿಕೆ ಹಳೆ ಅಡಿಕೆ ಎಂದು ಕರೆಯಲಾಗುತ್ತದೆ.  ಇದೀಗ ಅ.1 ರಿಂದ ಹೊಸ ಅಡಿಕೆ ಧಾರಣೆ ನಿಗದಿಯಾಗುವುದರ ಮೂಲಕ ಹೊಸ ಅಡಿಕೆ ಹಳೆಯ ಅಡಿಕೆಯಾಗಿ ಬದಲಾಗಿದೆ. ಅಂತಹ ಹೊಸ ಅಡಿಕೆ ಧಾರಣೆ 380 ರೂಪಾಯಿ ಕ್ಯಾಂಪ್ಕೋ ನಿಗದಿ ಮಾಡಿದೆ. ಖಾಸಗಿ ವಲಯದಲ್ಲಿ ಹೊಸ ಅಡಿಕೆ ಮಾರುಕಟ್ಟೆ ಇನ್ನಷ್ಟೇ ನಿಗದಿಯಾಗಬೇಕಿದೆ. ಆದರೆ 390 ರೂಪಾಯಿ ಸದ್ಯ ಖರೀದಿ ನಡೆಸುವ ಬಗ್ಗೆ ಅನಧಿಕೃತ ಮಾಹಿತಿ ಇದೆ.

ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿ 480 ರೂಪಾಯಿಗೆ ಖರೀದಿ ಮಾಡುತ್ತಿದೆ. ಚೋಲ್‌ ಅಡಿಕೆ 560 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಖಾಸಗಿ ವಲಯದಲ್ಲಿಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿದೆ.

ರಬ್ಬರ್‌ ಧಾರಣೆಯಲ್ಲಿ ಸ್ವಲ್ಪ ಏರಿಕೆಯ ಲಕ್ಷಣ ಕಂಡಿದೆ. ಸದ್ಯ RSS4 ರಬ್ಬರ್‌ ಗೆ 146  ರೂಪಾಯಿ ಹಾಗೂ ಲಾಟ್‌ ರಬ್ಬರ್‌ ಗೆ 131 ರೂಪಾಯಿಗೆ ಖರೀದಿಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

2 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

12 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago