Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ | ರಬ್ಬರ್‌ ಧಾರಣೆಯಲ್ಲೂ ಏರಿಕೆ |

Share

ಅಡಿಕೆ ಆಮದು ಚರ್ಚೆಯ ನಡುವೆಯೇ ಚಾಲಿ ಹಳೆ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದೆ. 5 ರೂಪಾಯಿ ಏರಿಕೆಯಾದ ಬಳಿಕ ಚಾಲಿ ಹಳೆ ಅಡಿಕೆ ಧಾರಣೆ ಈಗ 485 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ. ಇದೇ ವೇಳೆ ರಬ್ಬರ್‌ ಧಾರಣೆಯಲ್ಲೂ ಏರಿಕೆ ಕಂಡಿದೆ. ಸದ್ಯ ರಬ್ಬರ್‌ ಧಾರಣೆ 152 ರೂಪಾಯಿಗೆ ಏರಿಕೆಯಾಗಿದೆ.

Advertisement
Advertisement
Advertisement
Advertisement

ಹೊಸ ಚಾಲಿ ಅಡಿಕೆ ಮಾರುಕಟ್ಟೆಗೆ ಬರಲು ಆರಂಭವಾಗಿದ್ದು 380 ರೂಪಾಯಿಗೆ ಖರೀದಿ ನಡೆಯುತ್ತಿದೆ.ವಾರಗಳ ಹಿಂದೆ  ಹಳೆ ಚಾಲಿ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಮತ್ತೆ 5 ರೂಪಾಯಿಗೆ ಏರಿಕೆ ಮಾಡುವ ಮೂಲಕ 485 ರೂಪಾಯಿಗೆ ಹಳೆ ಅಡಿಕೆ ಖರೀದಿ ನಡೆಸುತ್ತಿದೆ.ಚೋಲ್‌ ಅಡಿಕೆ 560 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ.  ರಬ್ಬರ್‌ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡಿದೆ. ಸದ್ಯ RSS4 ರಬ್ಬರ್‌ ಗೆ 152  ರೂಪಾಯಿ ಹಾಗೂ ಲಾಟ್‌ ರಬ್ಬರ್‌ ಗೆ 135 ರೂಪಾಯಿಗೆ ಖರೀದಿಯಾಗುತ್ತಿದೆ.

Advertisement

ಇದೇ ವೇಳೆ ಖಾಸಗಿ ವಲಯದಲ್ಲೂ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ವಾತಾವರಣ ಕಂಡಬಂದಿದೆ. ಸದ್ಯ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಬೇಡಿಕೆ ವ್ಯಕ್ತವಾಗಿದೆ. ಆಮದು ಅಡಿಕೆಯು ಚಾಲಿ ಅಡಿಕೆಯ ಮೇಲೆ ಹಾಗೂ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಯಾವುದೇ ಸಮಸ್ಯೆ ಬೀರುವುದಿಲ್ಲ. ಈ ವರ್ಷವೂ ಉತ್ತಮ ಧಾರಣೆ ಅಡಿಕೆಗೆ ಲಭ್ಯವಾಗುವ ನಿರೀಕ್ಷೆ ಇದೆ. ಈ ನಡುವೆಯೇ ಚಿಲ್ಲರೆ ಪ್ರಮಾಣದಲ್ಲಿ ಅಡಿಕೆಯನ್ನು ಬರ್ಮಾ ಸೇರಿದಂತೆ ಇತರ ದೇಶಗಳಿಂದ ಕಳ್ಳ ಸಾಗಾಣಿಕೆ ಮೂಲಕ ತರಲಾಗುತ್ತಿದೆ.  ಬಿಹಾರದಲ್ಲಿ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಇರಿಸಿ ಸುಮಾರು 700 ಕೆಜಿಯಷ್ಟು ಅಡಿಕೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಲ್ಲಿನ ರೈಲ್ವೇ ಅಧಿಕಾರಿಗಳು ಪತ್ತೆ ಮಾಡಿ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ಈಗ ಅಡಿಕೆ ಕಳ್ಳ ಸಾಗಾಣಿಕೆ ತಡೆಯನ್ನು ಅಧಿಕಾರಿ ಮಾಡುತ್ತಲೇ ಇದ್ದಾರೆ. ಇದು ಅಡಿಕೆ ಮಾರುಕಟ್ಟೆಗೆ ಪೂರಕ ವಾತಾವರಣ ಸೃಷ್ಟಿ ಮಾಡಿದೆ.

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

20 mins ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

21 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

21 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

21 hours ago