Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ | ರಬ್ಬರ್‌ ಧಾರಣೆಯಲ್ಲೂ ಏರಿಕೆ |

Share

ಅಡಿಕೆ ಆಮದು ಚರ್ಚೆಯ ನಡುವೆಯೇ ಚಾಲಿ ಹಳೆ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದೆ. 5 ರೂಪಾಯಿ ಏರಿಕೆಯಾದ ಬಳಿಕ ಚಾಲಿ ಹಳೆ ಅಡಿಕೆ ಧಾರಣೆ ಈಗ 485 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ. ಇದೇ ವೇಳೆ ರಬ್ಬರ್‌ ಧಾರಣೆಯಲ್ಲೂ ಏರಿಕೆ ಕಂಡಿದೆ. ಸದ್ಯ ರಬ್ಬರ್‌ ಧಾರಣೆ 152 ರೂಪಾಯಿಗೆ ಏರಿಕೆಯಾಗಿದೆ.

ಹೊಸ ಚಾಲಿ ಅಡಿಕೆ ಮಾರುಕಟ್ಟೆಗೆ ಬರಲು ಆರಂಭವಾಗಿದ್ದು 380 ರೂಪಾಯಿಗೆ ಖರೀದಿ ನಡೆಯುತ್ತಿದೆ.ವಾರಗಳ ಹಿಂದೆ  ಹಳೆ ಚಾಲಿ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಮತ್ತೆ 5 ರೂಪಾಯಿಗೆ ಏರಿಕೆ ಮಾಡುವ ಮೂಲಕ 485 ರೂಪಾಯಿಗೆ ಹಳೆ ಅಡಿಕೆ ಖರೀದಿ ನಡೆಸುತ್ತಿದೆ.ಚೋಲ್‌ ಅಡಿಕೆ 560 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ.  ರಬ್ಬರ್‌ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡಿದೆ. ಸದ್ಯ RSS4 ರಬ್ಬರ್‌ ಗೆ 152  ರೂಪಾಯಿ ಹಾಗೂ ಲಾಟ್‌ ರಬ್ಬರ್‌ ಗೆ 135 ರೂಪಾಯಿಗೆ ಖರೀದಿಯಾಗುತ್ತಿದೆ.

ಇದೇ ವೇಳೆ ಖಾಸಗಿ ವಲಯದಲ್ಲೂ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ವಾತಾವರಣ ಕಂಡಬಂದಿದೆ. ಸದ್ಯ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಬೇಡಿಕೆ ವ್ಯಕ್ತವಾಗಿದೆ. ಆಮದು ಅಡಿಕೆಯು ಚಾಲಿ ಅಡಿಕೆಯ ಮೇಲೆ ಹಾಗೂ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಯಾವುದೇ ಸಮಸ್ಯೆ ಬೀರುವುದಿಲ್ಲ. ಈ ವರ್ಷವೂ ಉತ್ತಮ ಧಾರಣೆ ಅಡಿಕೆಗೆ ಲಭ್ಯವಾಗುವ ನಿರೀಕ್ಷೆ ಇದೆ. ಈ ನಡುವೆಯೇ ಚಿಲ್ಲರೆ ಪ್ರಮಾಣದಲ್ಲಿ ಅಡಿಕೆಯನ್ನು ಬರ್ಮಾ ಸೇರಿದಂತೆ ಇತರ ದೇಶಗಳಿಂದ ಕಳ್ಳ ಸಾಗಾಣಿಕೆ ಮೂಲಕ ತರಲಾಗುತ್ತಿದೆ.  ಬಿಹಾರದಲ್ಲಿ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಇರಿಸಿ ಸುಮಾರು 700 ಕೆಜಿಯಷ್ಟು ಅಡಿಕೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಲ್ಲಿನ ರೈಲ್ವೇ ಅಧಿಕಾರಿಗಳು ಪತ್ತೆ ಮಾಡಿ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ಈಗ ಅಡಿಕೆ ಕಳ್ಳ ಸಾಗಾಣಿಕೆ ತಡೆಯನ್ನು ಅಧಿಕಾರಿ ಮಾಡುತ್ತಲೇ ಇದ್ದಾರೆ. ಇದು ಅಡಿಕೆ ಮಾರುಕಟ್ಟೆಗೆ ಪೂರಕ ವಾತಾವರಣ ಸೃಷ್ಟಿ ಮಾಡಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago