Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ | ರಬ್ಬರ್‌ ಧಾರಣೆಯಲ್ಲೂ ಏರಿಕೆ |

Share

ಅಡಿಕೆ ಆಮದು ಚರ್ಚೆಯ ನಡುವೆಯೇ ಚಾಲಿ ಹಳೆ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದೆ. 5 ರೂಪಾಯಿ ಏರಿಕೆಯಾದ ಬಳಿಕ ಚಾಲಿ ಹಳೆ ಅಡಿಕೆ ಧಾರಣೆ ಈಗ 485 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ. ಇದೇ ವೇಳೆ ರಬ್ಬರ್‌ ಧಾರಣೆಯಲ್ಲೂ ಏರಿಕೆ ಕಂಡಿದೆ. ಸದ್ಯ ರಬ್ಬರ್‌ ಧಾರಣೆ 152 ರೂಪಾಯಿಗೆ ಏರಿಕೆಯಾಗಿದೆ.

ಹೊಸ ಚಾಲಿ ಅಡಿಕೆ ಮಾರುಕಟ್ಟೆಗೆ ಬರಲು ಆರಂಭವಾಗಿದ್ದು 380 ರೂಪಾಯಿಗೆ ಖರೀದಿ ನಡೆಯುತ್ತಿದೆ.ವಾರಗಳ ಹಿಂದೆ  ಹಳೆ ಚಾಲಿ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಮತ್ತೆ 5 ರೂಪಾಯಿಗೆ ಏರಿಕೆ ಮಾಡುವ ಮೂಲಕ 485 ರೂಪಾಯಿಗೆ ಹಳೆ ಅಡಿಕೆ ಖರೀದಿ ನಡೆಸುತ್ತಿದೆ.ಚೋಲ್‌ ಅಡಿಕೆ 560 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ.  ರಬ್ಬರ್‌ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡಿದೆ. ಸದ್ಯ RSS4 ರಬ್ಬರ್‌ ಗೆ 152  ರೂಪಾಯಿ ಹಾಗೂ ಲಾಟ್‌ ರಬ್ಬರ್‌ ಗೆ 135 ರೂಪಾಯಿಗೆ ಖರೀದಿಯಾಗುತ್ತಿದೆ.

ಇದೇ ವೇಳೆ ಖಾಸಗಿ ವಲಯದಲ್ಲೂ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ವಾತಾವರಣ ಕಂಡಬಂದಿದೆ. ಸದ್ಯ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಬೇಡಿಕೆ ವ್ಯಕ್ತವಾಗಿದೆ. ಆಮದು ಅಡಿಕೆಯು ಚಾಲಿ ಅಡಿಕೆಯ ಮೇಲೆ ಹಾಗೂ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಯಾವುದೇ ಸಮಸ್ಯೆ ಬೀರುವುದಿಲ್ಲ. ಈ ವರ್ಷವೂ ಉತ್ತಮ ಧಾರಣೆ ಅಡಿಕೆಗೆ ಲಭ್ಯವಾಗುವ ನಿರೀಕ್ಷೆ ಇದೆ. ಈ ನಡುವೆಯೇ ಚಿಲ್ಲರೆ ಪ್ರಮಾಣದಲ್ಲಿ ಅಡಿಕೆಯನ್ನು ಬರ್ಮಾ ಸೇರಿದಂತೆ ಇತರ ದೇಶಗಳಿಂದ ಕಳ್ಳ ಸಾಗಾಣಿಕೆ ಮೂಲಕ ತರಲಾಗುತ್ತಿದೆ.  ಬಿಹಾರದಲ್ಲಿ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಇರಿಸಿ ಸುಮಾರು 700 ಕೆಜಿಯಷ್ಟು ಅಡಿಕೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಲ್ಲಿನ ರೈಲ್ವೇ ಅಧಿಕಾರಿಗಳು ಪತ್ತೆ ಮಾಡಿ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ಈಗ ಅಡಿಕೆ ಕಳ್ಳ ಸಾಗಾಣಿಕೆ ತಡೆಯನ್ನು ಅಧಿಕಾರಿ ಮಾಡುತ್ತಲೇ ಇದ್ದಾರೆ. ಇದು ಅಡಿಕೆ ಮಾರುಕಟ್ಟೆಗೆ ಪೂರಕ ವಾತಾವರಣ ಸೃಷ್ಟಿ ಮಾಡಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago