Advertisement
ಸುದ್ದಿಗಳು

ಅಡಿಕೆ ಮಾರುಕಟ್ಟೆ | ಚಾಲಿ ಹಳೆ ಅಡಿಕೆ ಧಾರಣೆ ಏರಿಕೆ | ರಬ್ಬರ್‌ ಧಾರಣೆಯಲ್ಲೂ ಏರಿಕೆ |

Share

ಅಡಿಕೆ ಆಮದು ಚರ್ಚೆಯ ನಡುವೆಯೇ ಚಾಲಿ ಹಳೆ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದೆ. 5 ರೂಪಾಯಿ ಏರಿಕೆಯಾದ ಬಳಿಕ ಚಾಲಿ ಹಳೆ ಅಡಿಕೆ ಧಾರಣೆ ಈಗ 485 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ. ಇದೇ ವೇಳೆ ರಬ್ಬರ್‌ ಧಾರಣೆಯಲ್ಲೂ ಏರಿಕೆ ಕಂಡಿದೆ. ಸದ್ಯ ರಬ್ಬರ್‌ ಧಾರಣೆ 152 ರೂಪಾಯಿಗೆ ಏರಿಕೆಯಾಗಿದೆ.

Advertisement

ಹೊಸ ಚಾಲಿ ಅಡಿಕೆ ಮಾರುಕಟ್ಟೆಗೆ ಬರಲು ಆರಂಭವಾಗಿದ್ದು 380 ರೂಪಾಯಿಗೆ ಖರೀದಿ ನಡೆಯುತ್ತಿದೆ.ವಾರಗಳ ಹಿಂದೆ  ಹಳೆ ಚಾಲಿ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಮತ್ತೆ 5 ರೂಪಾಯಿಗೆ ಏರಿಕೆ ಮಾಡುವ ಮೂಲಕ 485 ರೂಪಾಯಿಗೆ ಹಳೆ ಅಡಿಕೆ ಖರೀದಿ ನಡೆಸುತ್ತಿದೆ.ಚೋಲ್‌ ಅಡಿಕೆ 560 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ.  ರಬ್ಬರ್‌ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡಿದೆ. ಸದ್ಯ RSS4 ರಬ್ಬರ್‌ ಗೆ 152  ರೂಪಾಯಿ ಹಾಗೂ ಲಾಟ್‌ ರಬ್ಬರ್‌ ಗೆ 135 ರೂಪಾಯಿಗೆ ಖರೀದಿಯಾಗುತ್ತಿದೆ.

ಇದೇ ವೇಳೆ ಖಾಸಗಿ ವಲಯದಲ್ಲೂ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ವಾತಾವರಣ ಕಂಡಬಂದಿದೆ. ಸದ್ಯ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಬೇಡಿಕೆ ವ್ಯಕ್ತವಾಗಿದೆ. ಆಮದು ಅಡಿಕೆಯು ಚಾಲಿ ಅಡಿಕೆಯ ಮೇಲೆ ಹಾಗೂ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಯಾವುದೇ ಸಮಸ್ಯೆ ಬೀರುವುದಿಲ್ಲ. ಈ ವರ್ಷವೂ ಉತ್ತಮ ಧಾರಣೆ ಅಡಿಕೆಗೆ ಲಭ್ಯವಾಗುವ ನಿರೀಕ್ಷೆ ಇದೆ. ಈ ನಡುವೆಯೇ ಚಿಲ್ಲರೆ ಪ್ರಮಾಣದಲ್ಲಿ ಅಡಿಕೆಯನ್ನು ಬರ್ಮಾ ಸೇರಿದಂತೆ ಇತರ ದೇಶಗಳಿಂದ ಕಳ್ಳ ಸಾಗಾಣಿಕೆ ಮೂಲಕ ತರಲಾಗುತ್ತಿದೆ.  ಬಿಹಾರದಲ್ಲಿ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಇರಿಸಿ ಸುಮಾರು 700 ಕೆಜಿಯಷ್ಟು ಅಡಿಕೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಲ್ಲಿನ ರೈಲ್ವೇ ಅಧಿಕಾರಿಗಳು ಪತ್ತೆ ಮಾಡಿ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ಈಗ ಅಡಿಕೆ ಕಳ್ಳ ಸಾಗಾಣಿಕೆ ತಡೆಯನ್ನು ಅಧಿಕಾರಿ ಮಾಡುತ್ತಲೇ ಇದ್ದಾರೆ. ಇದು ಅಡಿಕೆ ಮಾರುಕಟ್ಟೆಗೆ ಪೂರಕ ವಾತಾವರಣ ಸೃಷ್ಟಿ ಮಾಡಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

12 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago