ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

November 15, 2022
10:00 AM

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

Advertisement
Advertisement
Advertisement

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

Advertisement

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror