Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

5 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

10 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

19 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

20 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago