Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

2 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

3 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

3 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

3 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

18 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

18 hours ago