Advertisement
MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

2 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago