MIRROR FOCUS

ಅಡಿಕೆ ಮಾರುಕಟ್ಟೆ | ಚಾಲಿ ಅಡಿಕೆ ಧಾರಣೆಯಲ್ಲಿ ಏಕೆ ಏರಿಳಿತ ? | ಏರಿಳಿತಕ್ಕೆ ಕಾರಣಗಳು ಏನು ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಏರಿಳಿತಗಳು ಕಂಡುಬಂದಿದೆ. ಖಾಸಗಿ ಮಾರುಕಟ್ಟೆ ಹಾಗೂ ಕ್ಯಾಂಪ್ಕೋ ಮತ್ತು ಇತರ ಸಹಕಾರಿ ಸಂಸ್ಥೆಗಳ ಧಾರಣೆಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ನವೆಂಬರ್‌ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬರುವ ಹೊತ್ತಲ್ಲ ಧಾರಣೆ ಏಕೆ ಕಳೆಗುಂದಿದೆ ಎಂಬುದು  ಕುತೂಹಲದ ಪ್ರಶ್ನೆಯಾಗಿದೆ.

Advertisement

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ 380, ಹಳೆ ಅಡಿಕೆ 485, ಚೋಲ್‌ 550 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿತ್ತು. ಈಗ ಚೋಲ್‌ ಅಡಿಕೆ ಧಾರಣೆಯಲ್ಲಿ  ಇಳಿಕೆ ಮಾಡಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ  ಹೊಸ ಅಡಿಕೆ 390 ರೂಪಾಯಿ ಹಳೆದ ಅಡಿಕೆ 480 ರೂಪಾಯಿ ಹಾಗೂ ಚೋಲ್‌ ಅಡಿಕೆ 555 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ.  ಕಳೆದ ಒಂದು ವಾರದಿಂದ ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಉತ್ಸಾಹ ಕಡಿಮೆಯಾಗಿದೆ. ಇದೇ ಟ್ರೆಂಡ್‌ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.

ಗುಜರಾತ್‌ ಚುನಾವಣೆ ಘೋಷಣೆಯಾದ ಬಳಿಕ ಅಡಿಕೆ ಮಾರುಕಟ್ಟೆಯಲ್ಲೂ ಪ್ರಭಾವ ಕಂಡಿದೆ. ಚುನಾವಣೆ ಘೋಷಣೆಯಾದ ಬಳಿಕ ತಪಾಸಣೆಗಳು ನಡೆಯುತ್ತಿದೆ. ಚೆಕ್‌ ಪೋಸ್ಟ್‌ಗಳು, ಬಿಲ್‌ ಸೇರಿದಂತೆ ಹಲವು ಕಡೆ ತಪಾಸಣೆ ನಡೆಯುತ್ತದೆ. ಹೀಗಾಗಿ ಅಡಿಕೆ ಸಾಗಾಣಿಕೆಗೂ ಸಮಸ್ಯೆಯಾಗುತ್ತದೆ. ಆದರೆ ಬಿಲ್‌ , ಜಿಎಸ್‌ಟಿ ಸಹಿತ ಅಧಿಕೃತವಾಗಿ ಸಾಗಾಟ ಮಾಡುವ ಸಂಸ್ಥೆಗಳು ಈ ಸಮಸ್ಯೆ ಉಂಟಾಗುವುದಿಲ್ಲ. ಕ್ಯಾಂಪ್ಕೋ ಹಾಗೂ ಇತರ ಸಹಕಾರಿ ಸಂಸ್ಥೆಗಳು ಈಗ ಅಧಿಕೃತವಾಗಿ ಸಾಗಾಟ, ಮಾರಾಟ ಮಾಡುವುದಕ್ಕೆ ಅಷ್ಟೊಂದು ಸಮಸ್ಯೆಯಾಗುವುದಿಲ್ಲ.

ಡಿಸೆಂಬರ್‌ ಮೊದಲ ವಾರದ ವರೆಗೆ ಗುಜರಾತ್‌ ಚುನಾವಣಾ ಬ್ಯುಸಿ ಇರುತ್ತದೆ. ಈ ತಿಂಗಳಲ್ಲಿ ಇನ್ನೂ 10 ದಿನಗಳ ಕಾಲ ಅಡಿಕೆ ಮಾರುಕಟ್ಟೆಯಲ್ಲಿ  ಏರಿಳಿತಗಳು ಕಂಡುಬರಬಹುದು. ಅದಾದ ಬಳಿಕ ಮತ್ತೆ ಅಡಿಕೆ ಮಾರುಕಟ್ಟೆ ಯಥಾಸ್ಥಿತಿಗೆ ಬರಲಿದೆ ಎನ್ನುವುದು  ಮಾರುಕಟ್ಟೆ ಮಾಹಿತಿ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ

ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ವೇದ ಮಂತ್ರಗಳ ಪಠಣ…

6 hours ago

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ

ಮಂಗಳೂರಿನಲ್ಲಿ ಹತ್ಯೆಗೀಡಾದ  ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ…

7 hours ago

ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ…

7 hours ago

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ

ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ…

7 hours ago

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

20 hours ago